ಮೈಸೂರು: ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿ ಮೊನ್ನೆಯಷ್ಟೇ ( ಡಿಸೆಂಬರ್ 7 ) ಒಂದು ಕಪ್ಪು ಚಿರತೆ ಮರಿ ಸೇರಿದಂತೆ ಒಟ್ಟು 3 ಚಿರತೆ ಮರಿಗಳು ಪ್ರತ್ಯಕ್ಷವಾಗಿದ್ದವು.
ಗ್ರಾಮದ ದ್ಯಾವಪ್ಪ ಎಂಬ ರೈತನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ವೇಳೆ ಚಿರತೆ ಮರಿಗಳು ಪತ್ತೆಯಾಗಿದ್ದವು. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ದಾವಿಸಿದ್ದ ಅರಣ್ಯ ಅಧಿಕಾರಿಗಳು ಚಿರತೆ ಮರಿಗಳನ್ನು ವಶಕ್ಕೆ ತೆಗೆದುಕೊಂಡು ರಕ್ಷಿಸಿದ್ದರು.
ಗದ್ದೆಯಲ್ಲಿ ಮರಿ ಚಿರತೆಗಳನ್ನು ಬಿಟ್ಟುಹೋಗಿದ್ದ ತಾಯಿ ಚಿರತೆ ಮತ್ತೆ ಅದೇ ಸ್ಥಳಕ್ಕೆ ಬಂದು ಮರಿಗಳು ಕಾಣದಿದ್ದಾಗ ಉದ್ರೇಕಗೊಂಡು ಹಾನಿ ಉಂಟು ಮಾಡಬಹುದು ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದರು. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಯೋಜನೆ ರಚಿಸಿ ಆ ಸ್ಥಳದಲ್ಲಿ ಬೋನುಗಳನ್ನು ಇರಿಸಿ ಇಂದು ( ಡಿಸೆಂಬರ್ 9 ) ತಾಯಿ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…