ಜಿಲ್ಲೆಗಳು

‘ಮಿಸಸ್ ಇಂಡಿಯಾ ಐಟಮ್ ಪವರ್ ಫುಲ್ ಎಂಡ್ ಇಂಡಿಯಾಸ್ ಚಾರ್ಮಿಂಗ್ ಫೇಸ್’ ಸೌಂದರ್ಯ ಸ್ಪರ್ಧೆ : ಕೊಡಗಿನ ಐವರಿಗೆ ಪ್ರಶಸ್ತಿಯ ಕಿರೀಟ

ಮಡಿಕೇರಿ: ಜಸ್ಪ್ರೆಟ್ ಕೌರ್ ಹಾಗೂ ನಂದಿನಿ ನಾಗರಾಜ್‌ರವರು ಗೋವಾದ ಲಾ ಗ್ರಾಸಿನಾ ರೆಸಾರ್ಟ್‌ನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ‘ಮಿಸಸ್ ಇಂಡಿಯಾ ಐಟಮ್ ಪವರ್ ಫುಲ್ ಎಂಡ್ ಇಂಡಿಯಾಸ್ ಚಾರ್ಮಿಂಗ್ ಫೇಸ್’ ಸೌಂದರ್ಯ ಸ್ಪರ್ಧೆಯಲ್ಲಿ ಕೊಡಗಿನ ಪಿ ಆ್ಯಂಡ್ ಜಿ ಕ್ರಿಯೇಷನ್ಸ್‌ನ ರೂಪದರ್ಶಿಗಳು ಪ್ರಶಸ್ತಿ ಪಡೆದುಕೊಂಡರು.

ಮಲ್ಲಮಾಡ ಶಾಮಲಾ ಸುನಿಲ್ ಮಿಸೆಸ್ ಇಂಡಿಯಾ ಅರ್ಥ್ ಕಿರೀಟ ಧರಿಸಿದರು. ಇವರು ಮುಂದಿನ ವರ್ಷ ನಡೆಯಲಿರುವ ಮಿಸೆಸ್ ಅರ್ಥ್ ಸ್ಪರ್ಧೆಯಲ್ಲಿ ಪೈಪೋಟಿ ನೀಡಲಿದ್ದಾರೆ. ಕಳೆದ ತಿಂಗಳಷ್ಟೇ ಶಾಮಲಾ ದಕ್ಷಿಣ ಭಾರತದ ರಾಯಭಾರಿಯಾಗಿ ಆಯ್ಕೆಯಾಗಿದ್ದರು.

ಅಳಮೇಯಗಡ ದಿಶಾ ಚಂಗಪ್ಪರವರು ಹದಿಹರೆಯದವರ ವಿಭಾಗದಲ್ಲಿ ಕಿರೀಟವನ್ನು ಗೆದ್ದರು ಮತ್ತು ಮಿಸ್ ಸೌತ್ ಇಂಡಿಯಾ ಟೀನ್ ಆಗಿ ಆಯ್ಕೆಯಾದರು. ಬಾನಂಗಡ ಭಾಗ್ಯ ಪ್ರದೀಪ್‌ರವರು ಮಿಸೆಸ್ ಇಂಡಿಯಾ ಫ್ಯಾಷನ್ ಐಕಾನ್ ಮತ್ತು ಮಿಸೆಸ್ ಇಂಡಿಯಾ ಆಂತರಿಕ ಸೌಂದರ್ಯ ಪ್ರಶಸ್ತಿಯನ್ನು ಗೆದ್ದುಕೊಂಡರು.

ಕುಪ್ಪನವಾಡ ಮೇಘನಾ ಮುತ್ತಮ್ಮರವರು ಮಿಸ್ ಇಂಡಿಯಾ ಟೀನ್ ಎಲಿಗನ್ಸಿ ಪ್ರಶಸ್ತಿ ಪಡೆದರು. ಶಮಕ ಅವರು ಮಿಸಸ್ ಅಟಿಟ್ಯುಡ್ ಮತ್ತು ಮಿಸಸ್ ಬಾಡಿ ಬ್ಯೂಟಿಫುಲ್ ಪ್ರಶಸ್ತಿ ಪಡೆದುಕೊಂಡರು. ಫ್ಯಾಷನ್ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿರುವ ಪಿ ಆ್ಯಂಡ್ ಜಿ ಕ್ರಿಯೇಷನ್ಸ್‌ನ ಬಾಳೆಯಡ ಪ್ರತೀಶ್ ಪೂವಯ್ಯ, ಆಚೆಯಡ ಗಗನ್ ಗಣಪತಿ ಹಾಗೂ ಬ್ರಾಂಡ್ ಅಂಬಾಸಿಡರ್ ಕೊನಿಯಂಡ ಕಾವ್ಯ ಅವರ ಮಾಶರ್ಗದರ್ಶನದಲ್ಲಿ ಇವರು ಸ್ಪರ್ಧೆಯಲ್ಲಿ ಪಾಲ್ಗೊಂಡರು.

ಗೋವಾದ ಲಾ ಗ್ರಾಸಿನಾ ರೆಸಾರ್ಟ್‌ನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಭಾರತದ ವಿವಿಧ ಭಾಗಗಳಿಂದ ಆಗಮಿಸಿದ್ದ ೬೦ಕ್ಕೂ ಅಧಿಕ ಸ್ಪರ್ಧಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.

 

 

andolana

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

5 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

6 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

7 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

7 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

7 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

7 hours ago