ಗೋವಾದ ಲಾ ಗ್ರಾಸಿನಾ ರೆಸಾರ್ಟ್ನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ‘ಮಿಸಸ್ ಇಂಡಿಯಾ ಐಯಾಮ್ ಪವರ್ ಫುಲ್ ಎಂಡ್ ಇಂಡಿಯಾಸ್ ಚಾರ್ಮಿಂಗ್ ಫೇಸ್’ ಸೌಂದರ್ಯ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದ ಕೊಡಗಿನ ರೂಪದರ್ಶಿಗಳು.
ಮಡಿಕೇರಿ: ಜಸ್ಪ್ರೆಟ್ ಕೌರ್ ಹಾಗೂ ನಂದಿನಿ ನಾಗರಾಜ್ರವರು ಗೋವಾದ ಲಾ ಗ್ರಾಸಿನಾ ರೆಸಾರ್ಟ್ನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ‘ಮಿಸಸ್ ಇಂಡಿಯಾ ಐಟಮ್ ಪವರ್ ಫುಲ್ ಎಂಡ್ ಇಂಡಿಯಾಸ್ ಚಾರ್ಮಿಂಗ್ ಫೇಸ್’ ಸೌಂದರ್ಯ ಸ್ಪರ್ಧೆಯಲ್ಲಿ ಕೊಡಗಿನ ಪಿ ಆ್ಯಂಡ್ ಜಿ ಕ್ರಿಯೇಷನ್ಸ್ನ ರೂಪದರ್ಶಿಗಳು ಪ್ರಶಸ್ತಿ ಪಡೆದುಕೊಂಡರು.
ಮಲ್ಲಮಾಡ ಶಾಮಲಾ ಸುನಿಲ್ ಮಿಸೆಸ್ ಇಂಡಿಯಾ ಅರ್ಥ್ ಕಿರೀಟ ಧರಿಸಿದರು. ಇವರು ಮುಂದಿನ ವರ್ಷ ನಡೆಯಲಿರುವ ಮಿಸೆಸ್ ಅರ್ಥ್ ಸ್ಪರ್ಧೆಯಲ್ಲಿ ಪೈಪೋಟಿ ನೀಡಲಿದ್ದಾರೆ. ಕಳೆದ ತಿಂಗಳಷ್ಟೇ ಶಾಮಲಾ ದಕ್ಷಿಣ ಭಾರತದ ರಾಯಭಾರಿಯಾಗಿ ಆಯ್ಕೆಯಾಗಿದ್ದರು.
ಅಳಮೇಯಗಡ ದಿಶಾ ಚಂಗಪ್ಪರವರು ಹದಿಹರೆಯದವರ ವಿಭಾಗದಲ್ಲಿ ಕಿರೀಟವನ್ನು ಗೆದ್ದರು ಮತ್ತು ಮಿಸ್ ಸೌತ್ ಇಂಡಿಯಾ ಟೀನ್ ಆಗಿ ಆಯ್ಕೆಯಾದರು. ಬಾನಂಗಡ ಭಾಗ್ಯ ಪ್ರದೀಪ್ರವರು ಮಿಸೆಸ್ ಇಂಡಿಯಾ ಫ್ಯಾಷನ್ ಐಕಾನ್ ಮತ್ತು ಮಿಸೆಸ್ ಇಂಡಿಯಾ ಆಂತರಿಕ ಸೌಂದರ್ಯ ಪ್ರಶಸ್ತಿಯನ್ನು ಗೆದ್ದುಕೊಂಡರು.
ಕುಪ್ಪನವಾಡ ಮೇಘನಾ ಮುತ್ತಮ್ಮರವರು ಮಿಸ್ ಇಂಡಿಯಾ ಟೀನ್ ಎಲಿಗನ್ಸಿ ಪ್ರಶಸ್ತಿ ಪಡೆದರು. ಶಮಕ ಅವರು ಮಿಸಸ್ ಅಟಿಟ್ಯುಡ್ ಮತ್ತು ಮಿಸಸ್ ಬಾಡಿ ಬ್ಯೂಟಿಫುಲ್ ಪ್ರಶಸ್ತಿ ಪಡೆದುಕೊಂಡರು. ಫ್ಯಾಷನ್ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿರುವ ಪಿ ಆ್ಯಂಡ್ ಜಿ ಕ್ರಿಯೇಷನ್ಸ್ನ ಬಾಳೆಯಡ ಪ್ರತೀಶ್ ಪೂವಯ್ಯ, ಆಚೆಯಡ ಗಗನ್ ಗಣಪತಿ ಹಾಗೂ ಬ್ರಾಂಡ್ ಅಂಬಾಸಿಡರ್ ಕೊನಿಯಂಡ ಕಾವ್ಯ ಅವರ ಮಾಶರ್ಗದರ್ಶನದಲ್ಲಿ ಇವರು ಸ್ಪರ್ಧೆಯಲ್ಲಿ ಪಾಲ್ಗೊಂಡರು.
ಗೋವಾದ ಲಾ ಗ್ರಾಸಿನಾ ರೆಸಾರ್ಟ್ನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಭಾರತದ ವಿವಿಧ ಭಾಗಗಳಿಂದ ಆಗಮಿಸಿದ್ದ ೬೦ಕ್ಕೂ ಅಧಿಕ ಸ್ಪರ್ಧಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.
ಹುಣಸೂರು: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…