ಗೋವಾದ ಲಾ ಗ್ರಾಸಿನಾ ರೆಸಾರ್ಟ್ನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ‘ಮಿಸಸ್ ಇಂಡಿಯಾ ಐಯಾಮ್ ಪವರ್ ಫುಲ್ ಎಂಡ್ ಇಂಡಿಯಾಸ್ ಚಾರ್ಮಿಂಗ್ ಫೇಸ್’ ಸೌಂದರ್ಯ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದ ಕೊಡಗಿನ ರೂಪದರ್ಶಿಗಳು.
ಮಡಿಕೇರಿ: ಜಸ್ಪ್ರೆಟ್ ಕೌರ್ ಹಾಗೂ ನಂದಿನಿ ನಾಗರಾಜ್ರವರು ಗೋವಾದ ಲಾ ಗ್ರಾಸಿನಾ ರೆಸಾರ್ಟ್ನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ‘ಮಿಸಸ್ ಇಂಡಿಯಾ ಐಟಮ್ ಪವರ್ ಫುಲ್ ಎಂಡ್ ಇಂಡಿಯಾಸ್ ಚಾರ್ಮಿಂಗ್ ಫೇಸ್’ ಸೌಂದರ್ಯ ಸ್ಪರ್ಧೆಯಲ್ಲಿ ಕೊಡಗಿನ ಪಿ ಆ್ಯಂಡ್ ಜಿ ಕ್ರಿಯೇಷನ್ಸ್ನ ರೂಪದರ್ಶಿಗಳು ಪ್ರಶಸ್ತಿ ಪಡೆದುಕೊಂಡರು.
ಮಲ್ಲಮಾಡ ಶಾಮಲಾ ಸುನಿಲ್ ಮಿಸೆಸ್ ಇಂಡಿಯಾ ಅರ್ಥ್ ಕಿರೀಟ ಧರಿಸಿದರು. ಇವರು ಮುಂದಿನ ವರ್ಷ ನಡೆಯಲಿರುವ ಮಿಸೆಸ್ ಅರ್ಥ್ ಸ್ಪರ್ಧೆಯಲ್ಲಿ ಪೈಪೋಟಿ ನೀಡಲಿದ್ದಾರೆ. ಕಳೆದ ತಿಂಗಳಷ್ಟೇ ಶಾಮಲಾ ದಕ್ಷಿಣ ಭಾರತದ ರಾಯಭಾರಿಯಾಗಿ ಆಯ್ಕೆಯಾಗಿದ್ದರು.
ಅಳಮೇಯಗಡ ದಿಶಾ ಚಂಗಪ್ಪರವರು ಹದಿಹರೆಯದವರ ವಿಭಾಗದಲ್ಲಿ ಕಿರೀಟವನ್ನು ಗೆದ್ದರು ಮತ್ತು ಮಿಸ್ ಸೌತ್ ಇಂಡಿಯಾ ಟೀನ್ ಆಗಿ ಆಯ್ಕೆಯಾದರು. ಬಾನಂಗಡ ಭಾಗ್ಯ ಪ್ರದೀಪ್ರವರು ಮಿಸೆಸ್ ಇಂಡಿಯಾ ಫ್ಯಾಷನ್ ಐಕಾನ್ ಮತ್ತು ಮಿಸೆಸ್ ಇಂಡಿಯಾ ಆಂತರಿಕ ಸೌಂದರ್ಯ ಪ್ರಶಸ್ತಿಯನ್ನು ಗೆದ್ದುಕೊಂಡರು.
ಕುಪ್ಪನವಾಡ ಮೇಘನಾ ಮುತ್ತಮ್ಮರವರು ಮಿಸ್ ಇಂಡಿಯಾ ಟೀನ್ ಎಲಿಗನ್ಸಿ ಪ್ರಶಸ್ತಿ ಪಡೆದರು. ಶಮಕ ಅವರು ಮಿಸಸ್ ಅಟಿಟ್ಯುಡ್ ಮತ್ತು ಮಿಸಸ್ ಬಾಡಿ ಬ್ಯೂಟಿಫುಲ್ ಪ್ರಶಸ್ತಿ ಪಡೆದುಕೊಂಡರು. ಫ್ಯಾಷನ್ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿರುವ ಪಿ ಆ್ಯಂಡ್ ಜಿ ಕ್ರಿಯೇಷನ್ಸ್ನ ಬಾಳೆಯಡ ಪ್ರತೀಶ್ ಪೂವಯ್ಯ, ಆಚೆಯಡ ಗಗನ್ ಗಣಪತಿ ಹಾಗೂ ಬ್ರಾಂಡ್ ಅಂಬಾಸಿಡರ್ ಕೊನಿಯಂಡ ಕಾವ್ಯ ಅವರ ಮಾಶರ್ಗದರ್ಶನದಲ್ಲಿ ಇವರು ಸ್ಪರ್ಧೆಯಲ್ಲಿ ಪಾಲ್ಗೊಂಡರು.
ಗೋವಾದ ಲಾ ಗ್ರಾಸಿನಾ ರೆಸಾರ್ಟ್ನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಭಾರತದ ವಿವಿಧ ಭಾಗಗಳಿಂದ ಆಗಮಿಸಿದ್ದ ೬೦ಕ್ಕೂ ಅಧಿಕ ಸ್ಪರ್ಧಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…