ಜಿಲ್ಲೆಗಳು

‘ಮಿಸಸ್ ಇಂಡಿಯಾ ಐಟಮ್ ಪವರ್ ಫುಲ್ ಎಂಡ್ ಇಂಡಿಯಾಸ್ ಚಾರ್ಮಿಂಗ್ ಫೇಸ್’ ಸೌಂದರ್ಯ ಸ್ಪರ್ಧೆ : ಕೊಡಗಿನ ಐವರಿಗೆ ಪ್ರಶಸ್ತಿಯ ಕಿರೀಟ

ಮಡಿಕೇರಿ: ಜಸ್ಪ್ರೆಟ್ ಕೌರ್ ಹಾಗೂ ನಂದಿನಿ ನಾಗರಾಜ್‌ರವರು ಗೋವಾದ ಲಾ ಗ್ರಾಸಿನಾ ರೆಸಾರ್ಟ್‌ನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ‘ಮಿಸಸ್ ಇಂಡಿಯಾ ಐಟಮ್ ಪವರ್ ಫುಲ್ ಎಂಡ್ ಇಂಡಿಯಾಸ್ ಚಾರ್ಮಿಂಗ್ ಫೇಸ್’ ಸೌಂದರ್ಯ ಸ್ಪರ್ಧೆಯಲ್ಲಿ ಕೊಡಗಿನ ಪಿ ಆ್ಯಂಡ್ ಜಿ ಕ್ರಿಯೇಷನ್ಸ್‌ನ ರೂಪದರ್ಶಿಗಳು ಪ್ರಶಸ್ತಿ ಪಡೆದುಕೊಂಡರು.

ಮಲ್ಲಮಾಡ ಶಾಮಲಾ ಸುನಿಲ್ ಮಿಸೆಸ್ ಇಂಡಿಯಾ ಅರ್ಥ್ ಕಿರೀಟ ಧರಿಸಿದರು. ಇವರು ಮುಂದಿನ ವರ್ಷ ನಡೆಯಲಿರುವ ಮಿಸೆಸ್ ಅರ್ಥ್ ಸ್ಪರ್ಧೆಯಲ್ಲಿ ಪೈಪೋಟಿ ನೀಡಲಿದ್ದಾರೆ. ಕಳೆದ ತಿಂಗಳಷ್ಟೇ ಶಾಮಲಾ ದಕ್ಷಿಣ ಭಾರತದ ರಾಯಭಾರಿಯಾಗಿ ಆಯ್ಕೆಯಾಗಿದ್ದರು.

ಅಳಮೇಯಗಡ ದಿಶಾ ಚಂಗಪ್ಪರವರು ಹದಿಹರೆಯದವರ ವಿಭಾಗದಲ್ಲಿ ಕಿರೀಟವನ್ನು ಗೆದ್ದರು ಮತ್ತು ಮಿಸ್ ಸೌತ್ ಇಂಡಿಯಾ ಟೀನ್ ಆಗಿ ಆಯ್ಕೆಯಾದರು. ಬಾನಂಗಡ ಭಾಗ್ಯ ಪ್ರದೀಪ್‌ರವರು ಮಿಸೆಸ್ ಇಂಡಿಯಾ ಫ್ಯಾಷನ್ ಐಕಾನ್ ಮತ್ತು ಮಿಸೆಸ್ ಇಂಡಿಯಾ ಆಂತರಿಕ ಸೌಂದರ್ಯ ಪ್ರಶಸ್ತಿಯನ್ನು ಗೆದ್ದುಕೊಂಡರು.

ಕುಪ್ಪನವಾಡ ಮೇಘನಾ ಮುತ್ತಮ್ಮರವರು ಮಿಸ್ ಇಂಡಿಯಾ ಟೀನ್ ಎಲಿಗನ್ಸಿ ಪ್ರಶಸ್ತಿ ಪಡೆದರು. ಶಮಕ ಅವರು ಮಿಸಸ್ ಅಟಿಟ್ಯುಡ್ ಮತ್ತು ಮಿಸಸ್ ಬಾಡಿ ಬ್ಯೂಟಿಫುಲ್ ಪ್ರಶಸ್ತಿ ಪಡೆದುಕೊಂಡರು. ಫ್ಯಾಷನ್ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿರುವ ಪಿ ಆ್ಯಂಡ್ ಜಿ ಕ್ರಿಯೇಷನ್ಸ್‌ನ ಬಾಳೆಯಡ ಪ್ರತೀಶ್ ಪೂವಯ್ಯ, ಆಚೆಯಡ ಗಗನ್ ಗಣಪತಿ ಹಾಗೂ ಬ್ರಾಂಡ್ ಅಂಬಾಸಿಡರ್ ಕೊನಿಯಂಡ ಕಾವ್ಯ ಅವರ ಮಾಶರ್ಗದರ್ಶನದಲ್ಲಿ ಇವರು ಸ್ಪರ್ಧೆಯಲ್ಲಿ ಪಾಲ್ಗೊಂಡರು.

ಗೋವಾದ ಲಾ ಗ್ರಾಸಿನಾ ರೆಸಾರ್ಟ್‌ನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಭಾರತದ ವಿವಿಧ ಭಾಗಗಳಿಂದ ಆಗಮಿಸಿದ್ದ ೬೦ಕ್ಕೂ ಅಧಿಕ ಸ್ಪರ್ಧಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.

 

 

andolana

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

6 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

8 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

10 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

10 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

11 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

11 hours ago