ಜಿಲ್ಲೆಗಳು

ಮೈಸೂರು ಜಿಲ್ಲೆಯಲ್ಲಿ ಎಂಎಸ್‌ಎಂಇ ಕಾಯ್ದೆ ಪರಿಣಾಮಕಾರಿ

ಮೈಸೂರು: ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳಿಗೆ ಭದ್ರತೆ ಒದಗಿಸುವ ಎಂಎಸ್‌ಎಂಇ ಕಾಯ್ದೆ ಮೈಸೂರು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗುತ್ತಿದೆ. ಗ್ರಾಹಕರಿಂದ ವಂಚನೆಗೊಳಗಾಗಿದ್ದ 210 ಮಂದಿ ಕೈಗಾರಿಕಾ ಮಾಲೀಕರಿಗೆ ಈ ಕಾಯ್ದೆ ನ್ಯಾಯ ಒದಗಿಸಿದೆ.
ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳ ಮಾಲೀಕರು ತಾವು ಉತ್ಪಾದಿಸುವ ಸರಕುಗಳನ್ನು ಕೆಲವೊಮ್ಮೆ ಸಾಲದ ರೂಪದಲ್ಲಿ ಗ್ರಾಹಕರಿಗೆ ಮಾರಾಟ ಮಾಡುವ ಅನಿವಾರ್ಯತೆ ಇರುತ್ತದೆ. ಅಂತಹ ವೇಳೆ ಅವರು ನೀಡುವ ಉತ್ಪನ್ನಗಳ ಅಥವಾ ಸೇವೆಯ ಹಣ ವಾಪಸ್ ಬಾರದಿರುವ ಅವಕಾಶಗಳೂ ಹೆಚ್ಚಿರುತ್ತವೆ.
ಈ ಹಿಂದೆ ಇಂತಹ ಹಲವಾರು ಪ್ರಕರಣಗಳು ನಡೆದಿದ್ದರೂ ಕೈಗಾರಿಕೆಗಳ ಮಾಲೀಕರು ಏನೂ ಮಾಡದ ಸ್ಥಿತಿಯಲ್ಲಿದ್ದರು. ಹೀಗಾಗಿ ಕೇಂದ್ರ ಸರ್ಕಾರವು ಎಂಎಸ್‌ಎಂಇ ಕಾಯ್ದೆಯನ್ನು ಜಾರಿಗೊಳಿಸಿತು. ಈ ಮೂಲಕ ಕೈಗಾರಿಕೆಗಳ ,ಮಾಲೀಕರ ಹಣಕ್ಕೆ ಭದ್ರತೆ ನೀಡಿತ್ತು.
ಈ ಕಾಯ್ದೆ 2016ರಿಂದಲೂ ಮೈಸೂರಿನಲ್ಲಿ ಜಾರಿಯಲ್ಲಿದೆ. ಅಂದಿನಿಂದ ಇಲ್ಲಿಯವರೆಗೆ ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳ 346 ಮಂದಿ ಈ ಕಾಯ್ದೆಯನ್ನು ಬಳಸಿಕೊಂಡು ದೂರು ಸಲ್ಲಿಸಿದ್ದಾರೆ. ಅದರಲ್ಲಿ 210 ಮಂದಿ ಮಾಲೀಕರಿಗೆ ಗ್ರಾಹಕರು ಬಡ್ಡಿ ಸಮೇತ ಹಣವನ್ನು ವಾಪಸ್ ನೀಡಿದ್ದಾರೆ.
ಕಾಯ್ದೆ ಯಾರಿಗೆ: 1 ಕೋಟಿ ರೂ. ಒಳಗಿನ ಯಂತ್ರೋಪಕರಣ ಹೊಂದಿದ್ದಲ್ಲಿ ಅಂತಹ ಕೈಗಾರಿಕೆಯನ್ನು ಅತಿಸಣ್ಣ ಎಂದು 1ರಿಂದ 10 ಕೋಟಿ ರೂ. ಮೌಲ್ಯದ ಯಂತ್ರೋಪಕರಣ ಹೊಂದಿದ್ದಲ್ಲಿ ಅಂತಹ ಕೈಗಾರಿಕೆಗಳನ್ನು ಸಣ್ಣ ಕೈಗಾರಿಕೆಗಳು ಎಂದು ವರ್ಗೀಕರಿಸಲಾಗಿದೆ.
ಕೈಗಾರಿಕೆ ಆರಂಭಿಸಿರುವವರು ಕೇಂದ್ರ ಸರ್ಕಾರದ ಎಂಎಸ್‌ಎಂಇ ಸಚಿವಾಲಯದಲ್ಲಿ ಆನ್‌ಲೈನ್ ಮೂಲಕ ಉದ್ಯಮ್ ನೋಂದಣಿಯನ್ನು ಮಾಡಿಸಬೇಕು. ಇದು ಕಡ್ಡಾಯ. ಗ್ರಾಹಕನು ತಾನು ಖರೀದಿಸಿದ ಉತ್ಪನ್ನಗಳ ಹಣ ಪಾವತಿಸದಿದ್ದಲ್ಲಿ ದೂರು ನೀಡಲು ಈ ನೋಂದಣಿ ಪತ್ರ ಕಡ್ಡಾಯ..
ಪ್ರಾದೇಶಿಕ ಆಯುಕ್ತರು ದೂರು ಕೇಂದ್ರದ ಅಧ್ಯಕ್ಷರಾಗಿರುತ್ತಾರೆ. ಆಯಾ ಜಿಲ್ಲೆಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ. ಉಳಿದಂತೆ ಕೈಗಾರಿಕೆ ಸಂಘದ ಪ್ರತಿನಿಧಿ, ಸರ್ಕಾರಿ ಅಭಿಯೋಜಕ ಹಾಗೂ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಸದಸ್ಯರಾಗಿರುತ್ತಾರೆ.
ದೂರು ಸಲ್ಲಿಸುವ ವೇಳೆ ಗ್ರಾಹಕರು ಖರೀದಿ ಮಾಡಿರುವ ವಸ್ತುಗಳು ಅಥವಾ ಸೇವೆಗಳ ವಿವರವುಳ್ಳ ರಸೀದಿ ಹಾಗೂ ಉದ್ಯಮ್ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ದೂರು ಸಲ್ಲಿಸಿದ 90  ದಿನಗಳ ಒಳಗಾಗಿ ಮಾಲೀಕರಿಗೆ ನ್ಯಾಯ ಸಿಗುವ ಎಲ್ಲ ಅವಕಾಶಗಳಿವೆ.
ಉತ್ಪನ್ನಗಳನ್ನು ಖರೀದಿಸಿ ಹಣ ಪಾವತಿಸದವರು ಈ ಕಾಯ್ದೆಯ ಮೂಲಕ ಅಸಲು ಹಾಗೂ ಮೂರುಪಟ್ಟು ಬಡ್ಡಿ ಹಣವನ್ನು ಮಾಲೀಕರಿಗೆ ನೀಡಬೇಕಾಗುತ್ತದೆ. ಈ ಕಾಯ್ದೆ  ಉಪಯೋಗವನ್ನು ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳ ಮಾಲೀಕರು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಟಿ.ದಿನೇಶ್ ಮನವಿ ಮಾಡುತ್ತಾರೆ.

ದೂರು ಹೇಗೆ?

ಮೈಸೂರು: ಯಾವುದೇ ಗ್ರಾಹಕರು ತಾನು ಸಾಲವಾಗಿ ಖರೀದಿಸಿದ ಉತ್ಪನ್ನ ಹಾಗೂ ಪಡೆದ ಸೇವೆಯ ಹಣವನ್ನು ಕೈಗಾರಿಕಾ ಸಂಸ್ಥೆಯ ಮಾಲೀಕರಿಗೆ 45 ದಿನಗಳ ಒಳಗಾಗಿ ಪಾವತಿಸಬೇಕು. ಹಾಗೆ ಹಣ ಪಾವತಿಸದಿದ್ದಲ್ಲಿ. ಮಾಲೀಕರು ಎಂಎಸ್‌ಎಂಇ ಫೆಸಿಲಿಟೇಷನ್ ಕೇಂದ್ರಕ್ಕೆ ಆನ್‌ಲೈನ್ ಮೂಲಕ ದೂರು ಸಲ್ಲಿಸಬಹುದು.


ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳನ್ನು ಹೊಂದಿರುವ ಮಾಲೀಕರು ಕೇಂದ್ರ ಸರ್ಕಾರದ ಎಂಎಸ್‌ಎಂಇ ಸಚಿವಾಲಯದ ಮೂಲಕ ಉದ್ಯಮ್ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬೇಕು. ಹೀಗಾದಲ್ಲಿ ನೀವು ಮಾರಾಟ ಮಾಡಿದ ಉತ್ಪನ್ನಗಳ ಅಥವಾ ನೀಡಿದ ಸೇವೆಯ ಹಣಕ್ಕೆ ಭದ್ರತೆ ಇರುತ್ತದೆ. ಉದ್ಯಮ್ ಪ್ರಮಾಣ ಪತ್ರವನ್ನು ಮನೆಯಲ್ಲಿಯೇ ಕುಳಿತು ಆನ್‌ಲೈನ್ ಮೂಲಕ ಪಡೆದುಕೊಳ್ಳಬಹುದು. ಈ ಕಾಯ್ದೆ ಮೂಲಕ ಬಡ್ಡಿ ಸೇರಿಸಿ 60 ಲಕ್ಷ ರೂ. ವರೆಗೆ ಕೈಗಾರಿಕೆ ಮಾಲೀಕರಿಗೆ ಹಣ ಕೊಡಿಸಿದ ಉದಾಹರಣೆ ಇದೆ.
-ಟಿ.ದಿನೇಶ್, ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ

 

 

 

andolanait

Recent Posts

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

1 hour ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

1 hour ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

2 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

2 hours ago

ರಸ್ತೆ ಇಲ್ಲದೆ ಯೋಧನ ಕುಟುಂಬ ಪರದಾಟ

ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…

2 hours ago

ಕುತೂಹಲ ಮೂಡಿಸಿದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ

ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…

2 hours ago