ಜಿಲ್ಲೆಗಳು

ಮೈಸೂರು ಜಿಲ್ಲೆಯಲ್ಲಿ ಎಂಎಸ್‌ಎಂಇ ಕಾಯ್ದೆ ಪರಿಣಾಮಕಾರಿ

ಮೈಸೂರು: ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳಿಗೆ ಭದ್ರತೆ ಒದಗಿಸುವ ಎಂಎಸ್‌ಎಂಇ ಕಾಯ್ದೆ ಮೈಸೂರು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗುತ್ತಿದೆ. ಗ್ರಾಹಕರಿಂದ ವಂಚನೆಗೊಳಗಾಗಿದ್ದ 210 ಮಂದಿ ಕೈಗಾರಿಕಾ ಮಾಲೀಕರಿಗೆ ಈ ಕಾಯ್ದೆ ನ್ಯಾಯ ಒದಗಿಸಿದೆ.
ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳ ಮಾಲೀಕರು ತಾವು ಉತ್ಪಾದಿಸುವ ಸರಕುಗಳನ್ನು ಕೆಲವೊಮ್ಮೆ ಸಾಲದ ರೂಪದಲ್ಲಿ ಗ್ರಾಹಕರಿಗೆ ಮಾರಾಟ ಮಾಡುವ ಅನಿವಾರ್ಯತೆ ಇರುತ್ತದೆ. ಅಂತಹ ವೇಳೆ ಅವರು ನೀಡುವ ಉತ್ಪನ್ನಗಳ ಅಥವಾ ಸೇವೆಯ ಹಣ ವಾಪಸ್ ಬಾರದಿರುವ ಅವಕಾಶಗಳೂ ಹೆಚ್ಚಿರುತ್ತವೆ.
ಈ ಹಿಂದೆ ಇಂತಹ ಹಲವಾರು ಪ್ರಕರಣಗಳು ನಡೆದಿದ್ದರೂ ಕೈಗಾರಿಕೆಗಳ ಮಾಲೀಕರು ಏನೂ ಮಾಡದ ಸ್ಥಿತಿಯಲ್ಲಿದ್ದರು. ಹೀಗಾಗಿ ಕೇಂದ್ರ ಸರ್ಕಾರವು ಎಂಎಸ್‌ಎಂಇ ಕಾಯ್ದೆಯನ್ನು ಜಾರಿಗೊಳಿಸಿತು. ಈ ಮೂಲಕ ಕೈಗಾರಿಕೆಗಳ ,ಮಾಲೀಕರ ಹಣಕ್ಕೆ ಭದ್ರತೆ ನೀಡಿತ್ತು.
ಈ ಕಾಯ್ದೆ 2016ರಿಂದಲೂ ಮೈಸೂರಿನಲ್ಲಿ ಜಾರಿಯಲ್ಲಿದೆ. ಅಂದಿನಿಂದ ಇಲ್ಲಿಯವರೆಗೆ ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳ 346 ಮಂದಿ ಈ ಕಾಯ್ದೆಯನ್ನು ಬಳಸಿಕೊಂಡು ದೂರು ಸಲ್ಲಿಸಿದ್ದಾರೆ. ಅದರಲ್ಲಿ 210 ಮಂದಿ ಮಾಲೀಕರಿಗೆ ಗ್ರಾಹಕರು ಬಡ್ಡಿ ಸಮೇತ ಹಣವನ್ನು ವಾಪಸ್ ನೀಡಿದ್ದಾರೆ.
ಕಾಯ್ದೆ ಯಾರಿಗೆ: 1 ಕೋಟಿ ರೂ. ಒಳಗಿನ ಯಂತ್ರೋಪಕರಣ ಹೊಂದಿದ್ದಲ್ಲಿ ಅಂತಹ ಕೈಗಾರಿಕೆಯನ್ನು ಅತಿಸಣ್ಣ ಎಂದು 1ರಿಂದ 10 ಕೋಟಿ ರೂ. ಮೌಲ್ಯದ ಯಂತ್ರೋಪಕರಣ ಹೊಂದಿದ್ದಲ್ಲಿ ಅಂತಹ ಕೈಗಾರಿಕೆಗಳನ್ನು ಸಣ್ಣ ಕೈಗಾರಿಕೆಗಳು ಎಂದು ವರ್ಗೀಕರಿಸಲಾಗಿದೆ.
ಕೈಗಾರಿಕೆ ಆರಂಭಿಸಿರುವವರು ಕೇಂದ್ರ ಸರ್ಕಾರದ ಎಂಎಸ್‌ಎಂಇ ಸಚಿವಾಲಯದಲ್ಲಿ ಆನ್‌ಲೈನ್ ಮೂಲಕ ಉದ್ಯಮ್ ನೋಂದಣಿಯನ್ನು ಮಾಡಿಸಬೇಕು. ಇದು ಕಡ್ಡಾಯ. ಗ್ರಾಹಕನು ತಾನು ಖರೀದಿಸಿದ ಉತ್ಪನ್ನಗಳ ಹಣ ಪಾವತಿಸದಿದ್ದಲ್ಲಿ ದೂರು ನೀಡಲು ಈ ನೋಂದಣಿ ಪತ್ರ ಕಡ್ಡಾಯ..
ಪ್ರಾದೇಶಿಕ ಆಯುಕ್ತರು ದೂರು ಕೇಂದ್ರದ ಅಧ್ಯಕ್ಷರಾಗಿರುತ್ತಾರೆ. ಆಯಾ ಜಿಲ್ಲೆಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ. ಉಳಿದಂತೆ ಕೈಗಾರಿಕೆ ಸಂಘದ ಪ್ರತಿನಿಧಿ, ಸರ್ಕಾರಿ ಅಭಿಯೋಜಕ ಹಾಗೂ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಸದಸ್ಯರಾಗಿರುತ್ತಾರೆ.
ದೂರು ಸಲ್ಲಿಸುವ ವೇಳೆ ಗ್ರಾಹಕರು ಖರೀದಿ ಮಾಡಿರುವ ವಸ್ತುಗಳು ಅಥವಾ ಸೇವೆಗಳ ವಿವರವುಳ್ಳ ರಸೀದಿ ಹಾಗೂ ಉದ್ಯಮ್ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ದೂರು ಸಲ್ಲಿಸಿದ 90  ದಿನಗಳ ಒಳಗಾಗಿ ಮಾಲೀಕರಿಗೆ ನ್ಯಾಯ ಸಿಗುವ ಎಲ್ಲ ಅವಕಾಶಗಳಿವೆ.
ಉತ್ಪನ್ನಗಳನ್ನು ಖರೀದಿಸಿ ಹಣ ಪಾವತಿಸದವರು ಈ ಕಾಯ್ದೆಯ ಮೂಲಕ ಅಸಲು ಹಾಗೂ ಮೂರುಪಟ್ಟು ಬಡ್ಡಿ ಹಣವನ್ನು ಮಾಲೀಕರಿಗೆ ನೀಡಬೇಕಾಗುತ್ತದೆ. ಈ ಕಾಯ್ದೆ  ಉಪಯೋಗವನ್ನು ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳ ಮಾಲೀಕರು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಟಿ.ದಿನೇಶ್ ಮನವಿ ಮಾಡುತ್ತಾರೆ.

ದೂರು ಹೇಗೆ?

ಮೈಸೂರು: ಯಾವುದೇ ಗ್ರಾಹಕರು ತಾನು ಸಾಲವಾಗಿ ಖರೀದಿಸಿದ ಉತ್ಪನ್ನ ಹಾಗೂ ಪಡೆದ ಸೇವೆಯ ಹಣವನ್ನು ಕೈಗಾರಿಕಾ ಸಂಸ್ಥೆಯ ಮಾಲೀಕರಿಗೆ 45 ದಿನಗಳ ಒಳಗಾಗಿ ಪಾವತಿಸಬೇಕು. ಹಾಗೆ ಹಣ ಪಾವತಿಸದಿದ್ದಲ್ಲಿ. ಮಾಲೀಕರು ಎಂಎಸ್‌ಎಂಇ ಫೆಸಿಲಿಟೇಷನ್ ಕೇಂದ್ರಕ್ಕೆ ಆನ್‌ಲೈನ್ ಮೂಲಕ ದೂರು ಸಲ್ಲಿಸಬಹುದು.


ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳನ್ನು ಹೊಂದಿರುವ ಮಾಲೀಕರು ಕೇಂದ್ರ ಸರ್ಕಾರದ ಎಂಎಸ್‌ಎಂಇ ಸಚಿವಾಲಯದ ಮೂಲಕ ಉದ್ಯಮ್ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬೇಕು. ಹೀಗಾದಲ್ಲಿ ನೀವು ಮಾರಾಟ ಮಾಡಿದ ಉತ್ಪನ್ನಗಳ ಅಥವಾ ನೀಡಿದ ಸೇವೆಯ ಹಣಕ್ಕೆ ಭದ್ರತೆ ಇರುತ್ತದೆ. ಉದ್ಯಮ್ ಪ್ರಮಾಣ ಪತ್ರವನ್ನು ಮನೆಯಲ್ಲಿಯೇ ಕುಳಿತು ಆನ್‌ಲೈನ್ ಮೂಲಕ ಪಡೆದುಕೊಳ್ಳಬಹುದು. ಈ ಕಾಯ್ದೆ ಮೂಲಕ ಬಡ್ಡಿ ಸೇರಿಸಿ 60 ಲಕ್ಷ ರೂ. ವರೆಗೆ ಕೈಗಾರಿಕೆ ಮಾಲೀಕರಿಗೆ ಹಣ ಕೊಡಿಸಿದ ಉದಾಹರಣೆ ಇದೆ.
-ಟಿ.ದಿನೇಶ್, ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ

 

 

 

andolanait

Recent Posts

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

13 mins ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

23 mins ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

31 mins ago

ಸಚಿವ ಡಾ.ಜಿ.ಪರಮೇಶ್ವರ್‌ ಬೆಟ್ಟಿಂಗ್‌ ಕೇಸ್‌ಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿರುದ್ಧದ ಬೆಟ್ಟಿಂಗ್‌ ಹೇಳಿಕೆ ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಬೆಟ್ಟಿಂಗ್…

32 mins ago

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

ನವದೆಹಲಿ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಬಹಳ ಉತ್ಸಾಹದಿಂದ ಭಾಗಿಯಾಗಿದ್ದರು. ತಮಿಳುನಾಡಿನಲ್ಲಿ ಶೇ.82.24% ಮತದಾನ ದಾಖಲಾಗಿದ್ದು,…

35 mins ago

ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದರೂ ನೇಣಿಗೆ ಶರಣಾದ ಬಾಲಕಿ…!

ನಂಜನಗೂಡು: ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು…

47 mins ago