ಮೈಸೂರು: ಮೈಸೂರು ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್ ಅವರ ನಿರ್ದೇಶನದಂತೆ ಮುಡಾ ವ್ಯಾಪ್ತಿಯಲ್ಲಿನ ನಾಗರಿಕರ ಸಮಸ್ಯೆಗಳು ಹಾಗೂ ಪರಿಹಾರದ ಹಿತದೃಷ್ಟಿಯಿಂದ ಪ್ರತಿ ತಿಂಗಳ ೨ನೇ ಹಾಗೂ ೪ನೇ ಮಂಗಳವಾರ ಮುಡಾ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.೧೦ರಂದು ಮಧ್ಯಾಹ್ನ ೨ರಿಂದ ೪.೩೦ರವರೆಗೆ ಮೈಸೂರಿನ ನಾಗರಿಕರಿಗೆ ಪ್ರಾಧಿಕಾರವು ನೀಡುವ ಅನುಮೋದನೆ ಹಾಗೂ ಸೇವೆಗಳ ಕುರಿತಂತೆ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ದೂರುಗಳಿದ್ದಲ್ಲಿ ಅವುಗಳನ್ನು ದಾಖಲಾತಿ ಸಮೇತ ನಿವೇದಿಸಲು ಅದಾಲತ್ ವೇದಿಕೆ ಕಲ್ಪಿಸುತ್ತದೆ. ಆದರೆ, ಹೊಸ ನಿವೇಶನಗಳಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ಇರುವುದಿಲ್ಲ. ಅಲ್ಲದೆ, ಅನುಮೋದನೆ ಬಾಕಿ ಇರುವುದು, ವಿಳಂಬ, ಹೊಸ ಸಮಸ್ಯೆಗಳ ಕುರಿತು ದಾಖಲಾತಿಯೊಂದಿಗೆ ಸಮಸ್ಯೆ ಇರುವ ಅರ್ಜಿದಾರರರು ಲಿಖಿತ ದೂರು ಸಲ್ಲಿಸಬಹುದಾಗಿದೆ.
ಅರ್ಜಿದಾರರು ಭೂ ಉಪಯೋಗ ಮಾಹಿತಿ, ಬದಲಾವಣೆ, ಭೂಸ್ವಾಧೀನ ಪರಿಹಾರ ಬಾಕಿ, ಅವಾರ್ಡ್, ನೋಟಿಫಿಕೇಷನ್ ನಕಲು, ಕಟ್ಟಡ ಪೂರ್ಣ ಮುಕ್ತಾಯ ವರದಿ, ಮನೆ-ನಿವೇಶನ ನೋಂದಣಿ-ವರ್ಗಾವಣೆ, ಪೌತಿ ವರ್ಗಾವಣೆ, ಮನೆ ಕಂದಾಯ ನಿಗದಿ, ಬದಲಿ ನಿವೇಶನ ಕೋರಿಕೆ, ಖಾತಾ ಕಂದಾಯ, ಮಂಜೂರಾತಿ ಪತ್ರ, ಸ್ವಾಧೀನ ಪತ್ರ, ದೃಢೀಕೃತ ನಕಲು ಕೋರಿಕೆ ಅರ್ಜಿ, ಕ್ರಯ ಪತ್ರ ಕೋರಿಕೆ ಅರ್ಜಿ ಹಾಗೂ ಇನ್ನಿತರೆ ಮುಡಾ ಪ್ರಕ್ರಿಯೆಗಳ ಕುರಿತಂತೆ ನಾಗರಿಕರು ಖುದ್ದಾಗಿ ಸಂಪರ್ಕಿಸಬಹುದಾಗಿದೆ ಎಂದು ಮುಡಾ ಪ್ರಟಣೆಯಲ್ಲಿ ತಿಳಿಸಿದೆ.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…