ಜಿಲ್ಲೆಗಳು

ಜ.10 ರಂದು ಮುಡಾ ಅದಾಲತ್

ಮೈಸೂರು: ಮೈಸೂರು ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್ ಅವರ ನಿರ್ದೇಶನದಂತೆ ಮುಡಾ ವ್ಯಾಪ್ತಿಯಲ್ಲಿನ ನಾಗರಿಕರ ಸಮಸ್ಯೆಗಳು ಹಾಗೂ ಪರಿಹಾರದ ಹಿತದೃಷ್ಟಿಯಿಂದ ಪ್ರತಿ ತಿಂಗಳ ೨ನೇ ಹಾಗೂ ೪ನೇ ಮಂಗಳವಾರ ಮುಡಾ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.೧೦ರಂದು ಮಧ್ಯಾಹ್ನ ೨ರಿಂದ ೪.೩೦ರವರೆಗೆ ಮೈಸೂರಿನ ನಾಗರಿಕರಿಗೆ ಪ್ರಾಧಿಕಾರವು ನೀಡುವ ಅನುಮೋದನೆ ಹಾಗೂ ಸೇವೆಗಳ ಕುರಿತಂತೆ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ದೂರುಗಳಿದ್ದಲ್ಲಿ ಅವುಗಳನ್ನು ದಾಖಲಾತಿ ಸಮೇತ ನಿವೇದಿಸಲು ಅದಾಲತ್ ವೇದಿಕೆ ಕಲ್ಪಿಸುತ್ತದೆ. ಆದರೆ, ಹೊಸ ನಿವೇಶನಗಳಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ಇರುವುದಿಲ್ಲ. ಅಲ್ಲದೆ, ಅನುಮೋದನೆ ಬಾಕಿ ಇರುವುದು, ವಿಳಂಬ, ಹೊಸ ಸಮಸ್ಯೆಗಳ ಕುರಿತು ದಾಖಲಾತಿಯೊಂದಿಗೆ ಸಮಸ್ಯೆ ಇರುವ ಅರ್ಜಿದಾರರರು ಲಿಖಿತ ದೂರು ಸಲ್ಲಿಸಬಹುದಾಗಿದೆ.
ಅರ್ಜಿದಾರರು ಭೂ ಉಪಯೋಗ ಮಾಹಿತಿ, ಬದಲಾವಣೆ, ಭೂಸ್ವಾಧೀನ ಪರಿಹಾರ ಬಾಕಿ, ಅವಾರ್ಡ್, ನೋಟಿಫಿಕೇಷನ್ ನಕಲು, ಕಟ್ಟಡ ಪೂರ್ಣ ಮುಕ್ತಾಯ ವರದಿ, ಮನೆ-ನಿವೇಶನ ನೋಂದಣಿ-ವರ್ಗಾವಣೆ, ಪೌತಿ ವರ್ಗಾವಣೆ, ಮನೆ ಕಂದಾಯ ನಿಗದಿ, ಬದಲಿ ನಿವೇಶನ ಕೋರಿಕೆ, ಖಾತಾ ಕಂದಾಯ, ಮಂಜೂರಾತಿ ಪತ್ರ, ಸ್ವಾಧೀನ ಪತ್ರ, ದೃಢೀಕೃತ ನಕಲು ಕೋರಿಕೆ ಅರ್ಜಿ, ಕ್ರಯ ಪತ್ರ ಕೋರಿಕೆ ಅರ್ಜಿ ಹಾಗೂ ಇನ್ನಿತರೆ ಮುಡಾ ಪ್ರಕ್ರಿಯೆಗಳ ಕುರಿತಂತೆ ನಾಗರಿಕರು ಖುದ್ದಾಗಿ ಸಂಪರ್ಕಿಸಬಹುದಾಗಿದೆ ಎಂದು ಮುಡಾ ಪ್ರಟಣೆಯಲ್ಲಿ ತಿಳಿಸಿದೆ.

andolanait

Recent Posts

ರಾಜ್ಯದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ನಾಯಕತ್ವ ಗೊಂದಲ ಸೃಷ್ಟಿ ಮಾಡಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್‌ ಸೃಷ್ಟಿ ಮಾಡಿಲ್ಲ. ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್‌…

30 mins ago

ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ

ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…

59 mins ago

ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಾಕಿದ ದುಷ್ಕರ್ಮಿಗಳು

ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…

1 hour ago

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್:‌ ನಾಳೆಯಿಂದಲೇ ಬ್ಯಾಂಕ್‌ ಖಾತೆಗೆ ಗೃಹಲಕ್ಷ್ಮೀ ಹಣ

ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…

2 hours ago

ಹುಲಿ ಸೆರೆಗೆ ಚಾಮರಾಜನಗರದಲ್ಲಿ ಆಪರೇಷನ್‌ ಬೀಸ್ಟ್‌ ಆರಂಭ: ಡ್ರೋನ್‌ ಮೂಲಕ ಕಾರ್ಯಾಚರಣೆ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

2 hours ago

ಅಕ್ರಮವಾಗಿ ಕೇರಳಕ್ಕೆ ಜಾನುವಾರು ಸಾಗಾಟ: ಇಬ್ಬರ ಬಂಧನ

ಮಡಿಕೇರಿ: ಗೋವುಗಳನ್ನು ಸಾಕಣೆ ಮಾಡಲೆಂದು ಖರೀದಿಸಿ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರನ್ನು ವಿರಾಜಪೇಟೆ ನಗರ ಠಾಣೆ…

2 hours ago