ಜಿಲ್ಲೆಗಳು

ಜ.10 ರಂದು ಮುಡಾ ಅದಾಲತ್

ಮೈಸೂರು: ಮೈಸೂರು ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್ ಅವರ ನಿರ್ದೇಶನದಂತೆ ಮುಡಾ ವ್ಯಾಪ್ತಿಯಲ್ಲಿನ ನಾಗರಿಕರ ಸಮಸ್ಯೆಗಳು ಹಾಗೂ ಪರಿಹಾರದ ಹಿತದೃಷ್ಟಿಯಿಂದ ಪ್ರತಿ ತಿಂಗಳ ೨ನೇ ಹಾಗೂ ೪ನೇ ಮಂಗಳವಾರ ಮುಡಾ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.೧೦ರಂದು ಮಧ್ಯಾಹ್ನ ೨ರಿಂದ ೪.೩೦ರವರೆಗೆ ಮೈಸೂರಿನ ನಾಗರಿಕರಿಗೆ ಪ್ರಾಧಿಕಾರವು ನೀಡುವ ಅನುಮೋದನೆ ಹಾಗೂ ಸೇವೆಗಳ ಕುರಿತಂತೆ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ದೂರುಗಳಿದ್ದಲ್ಲಿ ಅವುಗಳನ್ನು ದಾಖಲಾತಿ ಸಮೇತ ನಿವೇದಿಸಲು ಅದಾಲತ್ ವೇದಿಕೆ ಕಲ್ಪಿಸುತ್ತದೆ. ಆದರೆ, ಹೊಸ ನಿವೇಶನಗಳಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ಇರುವುದಿಲ್ಲ. ಅಲ್ಲದೆ, ಅನುಮೋದನೆ ಬಾಕಿ ಇರುವುದು, ವಿಳಂಬ, ಹೊಸ ಸಮಸ್ಯೆಗಳ ಕುರಿತು ದಾಖಲಾತಿಯೊಂದಿಗೆ ಸಮಸ್ಯೆ ಇರುವ ಅರ್ಜಿದಾರರರು ಲಿಖಿತ ದೂರು ಸಲ್ಲಿಸಬಹುದಾಗಿದೆ.
ಅರ್ಜಿದಾರರು ಭೂ ಉಪಯೋಗ ಮಾಹಿತಿ, ಬದಲಾವಣೆ, ಭೂಸ್ವಾಧೀನ ಪರಿಹಾರ ಬಾಕಿ, ಅವಾರ್ಡ್, ನೋಟಿಫಿಕೇಷನ್ ನಕಲು, ಕಟ್ಟಡ ಪೂರ್ಣ ಮುಕ್ತಾಯ ವರದಿ, ಮನೆ-ನಿವೇಶನ ನೋಂದಣಿ-ವರ್ಗಾವಣೆ, ಪೌತಿ ವರ್ಗಾವಣೆ, ಮನೆ ಕಂದಾಯ ನಿಗದಿ, ಬದಲಿ ನಿವೇಶನ ಕೋರಿಕೆ, ಖಾತಾ ಕಂದಾಯ, ಮಂಜೂರಾತಿ ಪತ್ರ, ಸ್ವಾಧೀನ ಪತ್ರ, ದೃಢೀಕೃತ ನಕಲು ಕೋರಿಕೆ ಅರ್ಜಿ, ಕ್ರಯ ಪತ್ರ ಕೋರಿಕೆ ಅರ್ಜಿ ಹಾಗೂ ಇನ್ನಿತರೆ ಮುಡಾ ಪ್ರಕ್ರಿಯೆಗಳ ಕುರಿತಂತೆ ನಾಗರಿಕರು ಖುದ್ದಾಗಿ ಸಂಪರ್ಕಿಸಬಹುದಾಗಿದೆ ಎಂದು ಮುಡಾ ಪ್ರಟಣೆಯಲ್ಲಿ ತಿಳಿಸಿದೆ.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago