ಜಿಲ್ಲೆಗಳು

ಜ.10 ರಂದು ಮುಡಾ ಅದಾಲತ್

ಮೈಸೂರು: ಮೈಸೂರು ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್ ಅವರ ನಿರ್ದೇಶನದಂತೆ ಮುಡಾ ವ್ಯಾಪ್ತಿಯಲ್ಲಿನ ನಾಗರಿಕರ ಸಮಸ್ಯೆಗಳು ಹಾಗೂ ಪರಿಹಾರದ ಹಿತದೃಷ್ಟಿಯಿಂದ ಪ್ರತಿ ತಿಂಗಳ ೨ನೇ ಹಾಗೂ ೪ನೇ ಮಂಗಳವಾರ ಮುಡಾ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.೧೦ರಂದು ಮಧ್ಯಾಹ್ನ ೨ರಿಂದ ೪.೩೦ರವರೆಗೆ ಮೈಸೂರಿನ ನಾಗರಿಕರಿಗೆ ಪ್ರಾಧಿಕಾರವು ನೀಡುವ ಅನುಮೋದನೆ ಹಾಗೂ ಸೇವೆಗಳ ಕುರಿತಂತೆ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ದೂರುಗಳಿದ್ದಲ್ಲಿ ಅವುಗಳನ್ನು ದಾಖಲಾತಿ ಸಮೇತ ನಿವೇದಿಸಲು ಅದಾಲತ್ ವೇದಿಕೆ ಕಲ್ಪಿಸುತ್ತದೆ. ಆದರೆ, ಹೊಸ ನಿವೇಶನಗಳಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ಇರುವುದಿಲ್ಲ. ಅಲ್ಲದೆ, ಅನುಮೋದನೆ ಬಾಕಿ ಇರುವುದು, ವಿಳಂಬ, ಹೊಸ ಸಮಸ್ಯೆಗಳ ಕುರಿತು ದಾಖಲಾತಿಯೊಂದಿಗೆ ಸಮಸ್ಯೆ ಇರುವ ಅರ್ಜಿದಾರರರು ಲಿಖಿತ ದೂರು ಸಲ್ಲಿಸಬಹುದಾಗಿದೆ.
ಅರ್ಜಿದಾರರು ಭೂ ಉಪಯೋಗ ಮಾಹಿತಿ, ಬದಲಾವಣೆ, ಭೂಸ್ವಾಧೀನ ಪರಿಹಾರ ಬಾಕಿ, ಅವಾರ್ಡ್, ನೋಟಿಫಿಕೇಷನ್ ನಕಲು, ಕಟ್ಟಡ ಪೂರ್ಣ ಮುಕ್ತಾಯ ವರದಿ, ಮನೆ-ನಿವೇಶನ ನೋಂದಣಿ-ವರ್ಗಾವಣೆ, ಪೌತಿ ವರ್ಗಾವಣೆ, ಮನೆ ಕಂದಾಯ ನಿಗದಿ, ಬದಲಿ ನಿವೇಶನ ಕೋರಿಕೆ, ಖಾತಾ ಕಂದಾಯ, ಮಂಜೂರಾತಿ ಪತ್ರ, ಸ್ವಾಧೀನ ಪತ್ರ, ದೃಢೀಕೃತ ನಕಲು ಕೋರಿಕೆ ಅರ್ಜಿ, ಕ್ರಯ ಪತ್ರ ಕೋರಿಕೆ ಅರ್ಜಿ ಹಾಗೂ ಇನ್ನಿತರೆ ಮುಡಾ ಪ್ರಕ್ರಿಯೆಗಳ ಕುರಿತಂತೆ ನಾಗರಿಕರು ಖುದ್ದಾಗಿ ಸಂಪರ್ಕಿಸಬಹುದಾಗಿದೆ ಎಂದು ಮುಡಾ ಪ್ರಟಣೆಯಲ್ಲಿ ತಿಳಿಸಿದೆ.

andolanait

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

4 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

8 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

9 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

9 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

9 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

9 hours ago