ಮೈಸೂರು: ಮೈಸೂರು ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್ ಅವರ ನಿರ್ದೇಶನದಂತೆ ಮುಡಾ ವ್ಯಾಪ್ತಿಯಲ್ಲಿನ ನಾಗರಿಕರ ಸಮಸ್ಯೆಗಳು ಹಾಗೂ ಪರಿಹಾರದ ಹಿತದೃಷ್ಟಿಯಿಂದ ಪ್ರತಿ ತಿಂಗಳ ೨ನೇ ಹಾಗೂ ೪ನೇ ಮಂಗಳವಾರ ಮುಡಾ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.೧೦ರಂದು ಮಧ್ಯಾಹ್ನ ೨ರಿಂದ ೪.೩೦ರವರೆಗೆ ಮೈಸೂರಿನ ನಾಗರಿಕರಿಗೆ ಪ್ರಾಧಿಕಾರವು ನೀಡುವ ಅನುಮೋದನೆ ಹಾಗೂ ಸೇವೆಗಳ ಕುರಿತಂತೆ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ದೂರುಗಳಿದ್ದಲ್ಲಿ ಅವುಗಳನ್ನು ದಾಖಲಾತಿ ಸಮೇತ ನಿವೇದಿಸಲು ಅದಾಲತ್ ವೇದಿಕೆ ಕಲ್ಪಿಸುತ್ತದೆ. ಆದರೆ, ಹೊಸ ನಿವೇಶನಗಳಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ಇರುವುದಿಲ್ಲ. ಅಲ್ಲದೆ, ಅನುಮೋದನೆ ಬಾಕಿ ಇರುವುದು, ವಿಳಂಬ, ಹೊಸ ಸಮಸ್ಯೆಗಳ ಕುರಿತು ದಾಖಲಾತಿಯೊಂದಿಗೆ ಸಮಸ್ಯೆ ಇರುವ ಅರ್ಜಿದಾರರರು ಲಿಖಿತ ದೂರು ಸಲ್ಲಿಸಬಹುದಾಗಿದೆ.
ಅರ್ಜಿದಾರರು ಭೂ ಉಪಯೋಗ ಮಾಹಿತಿ, ಬದಲಾವಣೆ, ಭೂಸ್ವಾಧೀನ ಪರಿಹಾರ ಬಾಕಿ, ಅವಾರ್ಡ್, ನೋಟಿಫಿಕೇಷನ್ ನಕಲು, ಕಟ್ಟಡ ಪೂರ್ಣ ಮುಕ್ತಾಯ ವರದಿ, ಮನೆ-ನಿವೇಶನ ನೋಂದಣಿ-ವರ್ಗಾವಣೆ, ಪೌತಿ ವರ್ಗಾವಣೆ, ಮನೆ ಕಂದಾಯ ನಿಗದಿ, ಬದಲಿ ನಿವೇಶನ ಕೋರಿಕೆ, ಖಾತಾ ಕಂದಾಯ, ಮಂಜೂರಾತಿ ಪತ್ರ, ಸ್ವಾಧೀನ ಪತ್ರ, ದೃಢೀಕೃತ ನಕಲು ಕೋರಿಕೆ ಅರ್ಜಿ, ಕ್ರಯ ಪತ್ರ ಕೋರಿಕೆ ಅರ್ಜಿ ಹಾಗೂ ಇನ್ನಿತರೆ ಮುಡಾ ಪ್ರಕ್ರಿಯೆಗಳ ಕುರಿತಂತೆ ನಾಗರಿಕರು ಖುದ್ದಾಗಿ ಸಂಪರ್ಕಿಸಬಹುದಾಗಿದೆ ಎಂದು ಮುಡಾ ಪ್ರಟಣೆಯಲ್ಲಿ ತಿಳಿಸಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…