ಜಿಲ್ಲೆಗಳು

ಜ.10 ರಂದು ಮುಡಾ ಅದಾಲತ್

ಮೈಸೂರು: ಮೈಸೂರು ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್ ಅವರ ನಿರ್ದೇಶನದಂತೆ ಮುಡಾ ವ್ಯಾಪ್ತಿಯಲ್ಲಿನ ನಾಗರಿಕರ ಸಮಸ್ಯೆಗಳು ಹಾಗೂ ಪರಿಹಾರದ ಹಿತದೃಷ್ಟಿಯಿಂದ ಪ್ರತಿ ತಿಂಗಳ ೨ನೇ ಹಾಗೂ ೪ನೇ ಮಂಗಳವಾರ ಮುಡಾ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.೧೦ರಂದು ಮಧ್ಯಾಹ್ನ ೨ರಿಂದ ೪.೩೦ರವರೆಗೆ ಮೈಸೂರಿನ ನಾಗರಿಕರಿಗೆ ಪ್ರಾಧಿಕಾರವು ನೀಡುವ ಅನುಮೋದನೆ ಹಾಗೂ ಸೇವೆಗಳ ಕುರಿತಂತೆ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ದೂರುಗಳಿದ್ದಲ್ಲಿ ಅವುಗಳನ್ನು ದಾಖಲಾತಿ ಸಮೇತ ನಿವೇದಿಸಲು ಅದಾಲತ್ ವೇದಿಕೆ ಕಲ್ಪಿಸುತ್ತದೆ. ಆದರೆ, ಹೊಸ ನಿವೇಶನಗಳಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ಇರುವುದಿಲ್ಲ. ಅಲ್ಲದೆ, ಅನುಮೋದನೆ ಬಾಕಿ ಇರುವುದು, ವಿಳಂಬ, ಹೊಸ ಸಮಸ್ಯೆಗಳ ಕುರಿತು ದಾಖಲಾತಿಯೊಂದಿಗೆ ಸಮಸ್ಯೆ ಇರುವ ಅರ್ಜಿದಾರರರು ಲಿಖಿತ ದೂರು ಸಲ್ಲಿಸಬಹುದಾಗಿದೆ.
ಅರ್ಜಿದಾರರು ಭೂ ಉಪಯೋಗ ಮಾಹಿತಿ, ಬದಲಾವಣೆ, ಭೂಸ್ವಾಧೀನ ಪರಿಹಾರ ಬಾಕಿ, ಅವಾರ್ಡ್, ನೋಟಿಫಿಕೇಷನ್ ನಕಲು, ಕಟ್ಟಡ ಪೂರ್ಣ ಮುಕ್ತಾಯ ವರದಿ, ಮನೆ-ನಿವೇಶನ ನೋಂದಣಿ-ವರ್ಗಾವಣೆ, ಪೌತಿ ವರ್ಗಾವಣೆ, ಮನೆ ಕಂದಾಯ ನಿಗದಿ, ಬದಲಿ ನಿವೇಶನ ಕೋರಿಕೆ, ಖಾತಾ ಕಂದಾಯ, ಮಂಜೂರಾತಿ ಪತ್ರ, ಸ್ವಾಧೀನ ಪತ್ರ, ದೃಢೀಕೃತ ನಕಲು ಕೋರಿಕೆ ಅರ್ಜಿ, ಕ್ರಯ ಪತ್ರ ಕೋರಿಕೆ ಅರ್ಜಿ ಹಾಗೂ ಇನ್ನಿತರೆ ಮುಡಾ ಪ್ರಕ್ರಿಯೆಗಳ ಕುರಿತಂತೆ ನಾಗರಿಕರು ಖುದ್ದಾಗಿ ಸಂಪರ್ಕಿಸಬಹುದಾಗಿದೆ ಎಂದು ಮುಡಾ ಪ್ರಟಣೆಯಲ್ಲಿ ತಿಳಿಸಿದೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

17 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

21 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

21 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

21 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

21 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

22 hours ago