ಜಿಲ್ಲೆಗಳು

ನಗರಪಾಲಿಕೆ: ಬಿಜೆಪಿ- ಜಾ.ದಳ ಹಗ್ಗಜಗ್ಗಾಟ : ಅಧ್ಯಕ್ಷರಿಲ್ಲದ ಸ್ಥಾಯಿ ಸಮಿತಿಗಳು

ಉಪ ಮಹಾಪೌರ ಪಟ್ಟಕಳೆದುಕೊಂಡ ಜಾ.ದಳದಿಂದ ನಾಲ್ಕು ಸ್ಥಾನಗಳಿಗೂ ಪಟ್ಟು

ವರದಿ: ಕೆ.ಬಿ.ರಮೇಶನಾಯಕ

ಮೈಸೂರು: ಕಾಂಗ್ರೆಸನ್ನು ಅಧಿಕಾರದಿಂದ ದೂರವಿಡಲು ಆಂತರಿಕವಾಗಿ ಅಧಿಕಾರದ ಹೊಂದಾಣಿಕೆ ಮಾಡಿಕೊಂಡಿದ್ದ ಬಿಜೆಪಿ-ಜಾ.ದಳವು ನಾಲ್ಕು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಗಳ ಹಂಚಿಕೆಯಲ್ಲಿ ಒಮ್ಮತಕ್ಕೆ ಬರಲು ಸಾಧ್ಯವಾಗದೆ ಪರಸ್ಪರ ಹಗ್ಗ-ಜಗ್ಗಾಟದಲ್ಲಿ ತೊಡಗಿರುವುದರಿಂದ ಚುನಾವಣೆಯು ನನೆಗುದಿಗೆ ಬಿದ್ದಿದೆ. ಮಹಾಪೌರ ಹಾಗೂ ಉಪ ಮಹಾಪೌರರ ಚುನಾವಣೆ ನಡೆದು ಐವತ್ತು ದಿನಗಳು ಕಳೆಯುತ್ತಿದ್ದರೂ ನಾಲ್ಕು ಸ್ಥಾಯಿ ಸಮಿತಿಗಳ ಚುನಾವಣೆ ನಡೆಯದಿರುವುದು ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಎರಡೂ ಪಕ್ಷಗಳ ಸದಸ್ಯರಲ್ಲಿ ಅಸಮಾಧಾನ ಮೂಡಿಸಿದೆ.

ಇದರಿಂದಾಗಿ ದೀಪಾವಳಿ ಹಬ್ಬ ಮುಗಿಯುತ್ತಿದ್ದಂತೆ ಎರಡೂ ಪಕ್ಷಗಳ ನಾಯಕರು ಒಟ್ಟಿಗೆ ಕುಳಿತು ಅಧಿಕಾರ ಹಂಚಿಕೊಳ್ಳುವ ಕುರಿತು ಸಮಾಲೋಚನೆ ನಡೆಸಬೇಕೆಂಬ ಒತ್ತಡವು ಉಭಯ ಪಕ್ಷಗಳ ಸದಸ್ಯರಲ್ಲಿ ಜೋರಾಗಿದೆ. ಸೆ.೬ ರಂದು ನಡೆದ ಮೈಸೂರು ಮಹಾನಗರಪಾಲಿಕೆ ಮಹಾಪೌರ ಹಾಗೂ ಉಪ ಮಹಾಪೌರರ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಅಧಿಕಾರದಿಂದ ದೂರವಿಡುವ ಜತೆಗೆ ಮಹಾಪೌರ ಸ್ಥಾನವನ್ನು ಬಿಟ್ಟುಕೊಡಲು ನಿರಾಕರಿಸಿ ಕೊನೆಯ ಕ್ಷಣದಲ್ಲಿ ಜಾ.ದಳವು ಬಿಜೆಪಿಯೊಂದಿಗೆ ಕೊಡುಕೊಳ್ಳುವಿಕೆಯ ಜಾಣ ನಡೆಯನ್ನು ಅನುಸರಿಸಿತ್ತು. ಉಪ ಮಹಾಪೌರ ಚುನಾವಣೆಯಲ್ಲಿ ಬಿಜೆಪಿ ಸದಸ್ಯರು ಜಾ.ದಳ ಅಭ್ಯರ್ಥಿ ರೇಷ್ಮಾಬಾನು ಪರ ಕೈಎತ್ತಬೇಕಾಗಿತ್ತಾದರೂ ಅಭ್ಯರ್ಥಿ ನಾಮಪತ್ರವೇ ತಿರಸ್ಕೃತಗೊಂಡಿದ್ದರಿಂದ ಉಪ ಮಹಾಪೌರ ಸ್ಥಾನವು ಬಿಜೆಪಿ ಪಾಲಾಗುವಂತಾಯಿತು. ಇದರಿಂದಾಗಿ ತೀವ್ರ ನಿರಾಶೆ, ಮುಜುಗರ ಅನುಭವಿಸಿದ್ದ ಜಾ.ದಳದ ಮುಖಂಡರು ಸ್ಥಾಯಿ ಸಮಿತಿ ಸ್ಥಾನಕ್ಕೆ ಬೇಡಿಕೆ ಇಟ್ಟು, ಉಪಮಹಾಪೌರರ ಆಯ್ಕೆಗೆ ಬಿಜೆಪಿಗೆ ಬೆಂಬಲ ನೀಡಿದ್ದರು. ಹೀಗಾಗಿಯೇ, ನಾಲ್ಕು ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನಕ್ಕೆ ಜಾ.ದಳದ ಮುಖಂಡರು ಪಟ್ಟು ಹಾಕಿದ್ದರೆ, ಬಿಜೆಪಿ ಎರಡು ಸ್ಥಾನಗಳನ್ನು ಮಾತ್ರ ಕೊಡುವುದಾಗಿ ಪ್ರತಿಪಟ್ಟು ಹಿಡಿದು ಕುಳಿತಿರುವ ಕಾರಣದಿಂದಾಗಿ ಚುನಾವಣೆ ನನೆಗುದಿಗೆ ಬೀಳಲು ಕಾರಣವಾಗಿದೆ.

ಹಣಕಾಸು ಸ್ಥಾಯಿ ಸಮಿತಿ ಬಿಡದಿರಲು ಬಿಜೆಪಿ ನಿರ್ಧಾರ: ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲು ಸ್ಥಾಯಿ ಸಮಿತಿ, ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿ, ಲೆಕ್ಕಪತ್ರ ಸ್ಥಾಯಿ ಸಮಿತಿಗಳು ಇವೆ. ನಾಲ್ಕು ಸ್ಥಾನಗಳನ್ನೂ ಬಿಟ್ಟುಕೊಡಲು ಕೆಲವು ನಾಯಕರು ಒಲವು ತೋರಿದರೂ ಪಕ್ಷದ ಪ್ರಮುಖರು ಮಾತ್ರ ಎರಡನ್ನು ಉಳಿಸಿಕೊಳ್ಳಲು ಮುಂದಾಗಿದ್ದಾರೆ. ಮಹಾಪೌರ, ಉಪ ಮಹಾಪೌರ ಸ್ಥಾನ ಬಿಜೆಪಿಗೆ ಇರುವ ಕಾರಣ ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲು ಸ್ಥಾಯಿ ಸಮಿತಿ, ಲೆಕ್ಕಪತ್ರ ಸ್ಥಾಯಿ ಸಮಿತಿಯನ್ನು ತನ್ನ ಬಳಿಯೇ ಇಟ್ಟುಕೊಂಡರೆ ಒಂದಿಷ್ಟು ಜನಪರವಾದ ನಿಲುವುಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ ಎನ್ನುವ ಲೆಕ್ಕಾಚಾರ ಹೊಂದಲಾಗಿದೆ. ವಿಶೇಷವಾಗಿ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನದ ಮೇಲೆ ಎಂ.ಯು.ಸುಬ್ಬಯ್ಯ, ಮ.ವಿ.ರಾಮಪ್ರಸಾದ್ ಕಣ್ಣಿಟ್ಟಿದ್ದಾರೆ.

ದೀಪಾವಳಿ ಹಬ್ಬದ ನಂತರ ಸ್ಥಾಯಿ ಸಮಿತಿ ಚುನಾವಣೆ ನಡೆಸಲು ದಿನಾಂಕ ಪ್ರಕಟ ಮಾಡುತ್ತೇವೆ ಅಂತ ಹೇಳಿದ್ದಾರೆ. ಜಾ.ದಳಕ್ಕೆ ನಾಲ್ಕು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಗಳನ್ನು ಬಿಟ್ಟುಕೊಡಲು ಅವರೇ(ಬಿಜೆಪಿ) ಒಪ್ಪಿಕೊಂಡಿದ್ದಾರೆ. ಕೊಟ್ಟ ಮಾತನ್ನು ಉಳಿಸಿಕೊಂಡು ನಮಗೆ ಬಿಡುವ ವಿಶ್ವಾಸವಿದೆ.
-ಕೆ.ಟಿ.ಚೆಲುವೇಗೌಡ, ನಗರಾಧ್ಯಕ್ಷ, ಜಾ.ದಳ.

ನಗರಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳನ್ನು ಜಾ.ದಳಕ್ಕೆ ಬಿಟ್ಟುಕೊಡಬೇಕೆಂಬ ತೀರ್ಮಾನವಾಗಲಿ, ಚರ್ಚೆಯಾಗಲೀ ನಡೆದಿಲ್ಲ. ನಾಲ್ಕರಲ್ಲಿ ತಲಾ ಎರಡು ಅಧ್ಯಕ್ಷ ಸ್ಥಾನಗಳನ್ನು ಹಂಚಿಕೊಳ್ಳುವುದಕ್ಕೆ ನಮ್ಮದೇನೂ ಅಭ್ಯಂತರವಿಲ್ಲ. ಪಕ್ಷದ ವೇದಿಕೆಯಲ್ಲಿ ಈ ಬಗ್ಗೆ ಯಾವುದೇ ಚರ್ಚೆ ಮಾಡದೆ ನಿರ್ಧರಿಸಲಾಗದು. -ಟಿ.ಎಸ್.ಶ್ರೀವತ್ಸ, ನಗರಾಧ್ಯಕ್ಷ, ಬಿಜೆಪಿ.

ದಸರಾ ಮಹೋತ್ಸವ ಸೇರಿದಂತೆ ಇನ್ನಿತರ ಕಾರಣಕ್ಕಾಗಿ ಸ್ಥಾಯಿ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ದೀಪಾವಳಿ ಹಬ್ಬ ಮುಗಿದ ಬಳಿಕ ಆಯುಕ್ತರೊಂದಿಗೆ ಸಮಾಲೋಚಿಸಿ ದಿನಾಂಕ ಪ್ರಕಟಿಸಿ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. -ಶಿವಕುಮಾರ್, ಮಹಾಪೌರರು.

 

 

andolana

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

7 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

8 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

9 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

10 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

15 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

17 hours ago