ಜಿಲ್ಲೆಗಳು

ನಗರಪಾಲಿಕೆ: ಬಿಜೆಪಿ- ಜಾ.ದಳ ಹಗ್ಗಜಗ್ಗಾಟ : ಅಧ್ಯಕ್ಷರಿಲ್ಲದ ಸ್ಥಾಯಿ ಸಮಿತಿಗಳು

ಉಪ ಮಹಾಪೌರ ಪಟ್ಟಕಳೆದುಕೊಂಡ ಜಾ.ದಳದಿಂದ ನಾಲ್ಕು ಸ್ಥಾನಗಳಿಗೂ ಪಟ್ಟು

ವರದಿ: ಕೆ.ಬಿ.ರಮೇಶನಾಯಕ

ಮೈಸೂರು: ಕಾಂಗ್ರೆಸನ್ನು ಅಧಿಕಾರದಿಂದ ದೂರವಿಡಲು ಆಂತರಿಕವಾಗಿ ಅಧಿಕಾರದ ಹೊಂದಾಣಿಕೆ ಮಾಡಿಕೊಂಡಿದ್ದ ಬಿಜೆಪಿ-ಜಾ.ದಳವು ನಾಲ್ಕು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಗಳ ಹಂಚಿಕೆಯಲ್ಲಿ ಒಮ್ಮತಕ್ಕೆ ಬರಲು ಸಾಧ್ಯವಾಗದೆ ಪರಸ್ಪರ ಹಗ್ಗ-ಜಗ್ಗಾಟದಲ್ಲಿ ತೊಡಗಿರುವುದರಿಂದ ಚುನಾವಣೆಯು ನನೆಗುದಿಗೆ ಬಿದ್ದಿದೆ. ಮಹಾಪೌರ ಹಾಗೂ ಉಪ ಮಹಾಪೌರರ ಚುನಾವಣೆ ನಡೆದು ಐವತ್ತು ದಿನಗಳು ಕಳೆಯುತ್ತಿದ್ದರೂ ನಾಲ್ಕು ಸ್ಥಾಯಿ ಸಮಿತಿಗಳ ಚುನಾವಣೆ ನಡೆಯದಿರುವುದು ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಎರಡೂ ಪಕ್ಷಗಳ ಸದಸ್ಯರಲ್ಲಿ ಅಸಮಾಧಾನ ಮೂಡಿಸಿದೆ.

ಇದರಿಂದಾಗಿ ದೀಪಾವಳಿ ಹಬ್ಬ ಮುಗಿಯುತ್ತಿದ್ದಂತೆ ಎರಡೂ ಪಕ್ಷಗಳ ನಾಯಕರು ಒಟ್ಟಿಗೆ ಕುಳಿತು ಅಧಿಕಾರ ಹಂಚಿಕೊಳ್ಳುವ ಕುರಿತು ಸಮಾಲೋಚನೆ ನಡೆಸಬೇಕೆಂಬ ಒತ್ತಡವು ಉಭಯ ಪಕ್ಷಗಳ ಸದಸ್ಯರಲ್ಲಿ ಜೋರಾಗಿದೆ. ಸೆ.೬ ರಂದು ನಡೆದ ಮೈಸೂರು ಮಹಾನಗರಪಾಲಿಕೆ ಮಹಾಪೌರ ಹಾಗೂ ಉಪ ಮಹಾಪೌರರ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಅಧಿಕಾರದಿಂದ ದೂರವಿಡುವ ಜತೆಗೆ ಮಹಾಪೌರ ಸ್ಥಾನವನ್ನು ಬಿಟ್ಟುಕೊಡಲು ನಿರಾಕರಿಸಿ ಕೊನೆಯ ಕ್ಷಣದಲ್ಲಿ ಜಾ.ದಳವು ಬಿಜೆಪಿಯೊಂದಿಗೆ ಕೊಡುಕೊಳ್ಳುವಿಕೆಯ ಜಾಣ ನಡೆಯನ್ನು ಅನುಸರಿಸಿತ್ತು. ಉಪ ಮಹಾಪೌರ ಚುನಾವಣೆಯಲ್ಲಿ ಬಿಜೆಪಿ ಸದಸ್ಯರು ಜಾ.ದಳ ಅಭ್ಯರ್ಥಿ ರೇಷ್ಮಾಬಾನು ಪರ ಕೈಎತ್ತಬೇಕಾಗಿತ್ತಾದರೂ ಅಭ್ಯರ್ಥಿ ನಾಮಪತ್ರವೇ ತಿರಸ್ಕೃತಗೊಂಡಿದ್ದರಿಂದ ಉಪ ಮಹಾಪೌರ ಸ್ಥಾನವು ಬಿಜೆಪಿ ಪಾಲಾಗುವಂತಾಯಿತು. ಇದರಿಂದಾಗಿ ತೀವ್ರ ನಿರಾಶೆ, ಮುಜುಗರ ಅನುಭವಿಸಿದ್ದ ಜಾ.ದಳದ ಮುಖಂಡರು ಸ್ಥಾಯಿ ಸಮಿತಿ ಸ್ಥಾನಕ್ಕೆ ಬೇಡಿಕೆ ಇಟ್ಟು, ಉಪಮಹಾಪೌರರ ಆಯ್ಕೆಗೆ ಬಿಜೆಪಿಗೆ ಬೆಂಬಲ ನೀಡಿದ್ದರು. ಹೀಗಾಗಿಯೇ, ನಾಲ್ಕು ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನಕ್ಕೆ ಜಾ.ದಳದ ಮುಖಂಡರು ಪಟ್ಟು ಹಾಕಿದ್ದರೆ, ಬಿಜೆಪಿ ಎರಡು ಸ್ಥಾನಗಳನ್ನು ಮಾತ್ರ ಕೊಡುವುದಾಗಿ ಪ್ರತಿಪಟ್ಟು ಹಿಡಿದು ಕುಳಿತಿರುವ ಕಾರಣದಿಂದಾಗಿ ಚುನಾವಣೆ ನನೆಗುದಿಗೆ ಬೀಳಲು ಕಾರಣವಾಗಿದೆ.

ಹಣಕಾಸು ಸ್ಥಾಯಿ ಸಮಿತಿ ಬಿಡದಿರಲು ಬಿಜೆಪಿ ನಿರ್ಧಾರ: ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲು ಸ್ಥಾಯಿ ಸಮಿತಿ, ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿ, ಲೆಕ್ಕಪತ್ರ ಸ್ಥಾಯಿ ಸಮಿತಿಗಳು ಇವೆ. ನಾಲ್ಕು ಸ್ಥಾನಗಳನ್ನೂ ಬಿಟ್ಟುಕೊಡಲು ಕೆಲವು ನಾಯಕರು ಒಲವು ತೋರಿದರೂ ಪಕ್ಷದ ಪ್ರಮುಖರು ಮಾತ್ರ ಎರಡನ್ನು ಉಳಿಸಿಕೊಳ್ಳಲು ಮುಂದಾಗಿದ್ದಾರೆ. ಮಹಾಪೌರ, ಉಪ ಮಹಾಪೌರ ಸ್ಥಾನ ಬಿಜೆಪಿಗೆ ಇರುವ ಕಾರಣ ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲು ಸ್ಥಾಯಿ ಸಮಿತಿ, ಲೆಕ್ಕಪತ್ರ ಸ್ಥಾಯಿ ಸಮಿತಿಯನ್ನು ತನ್ನ ಬಳಿಯೇ ಇಟ್ಟುಕೊಂಡರೆ ಒಂದಿಷ್ಟು ಜನಪರವಾದ ನಿಲುವುಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ ಎನ್ನುವ ಲೆಕ್ಕಾಚಾರ ಹೊಂದಲಾಗಿದೆ. ವಿಶೇಷವಾಗಿ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನದ ಮೇಲೆ ಎಂ.ಯು.ಸುಬ್ಬಯ್ಯ, ಮ.ವಿ.ರಾಮಪ್ರಸಾದ್ ಕಣ್ಣಿಟ್ಟಿದ್ದಾರೆ.

ದೀಪಾವಳಿ ಹಬ್ಬದ ನಂತರ ಸ್ಥಾಯಿ ಸಮಿತಿ ಚುನಾವಣೆ ನಡೆಸಲು ದಿನಾಂಕ ಪ್ರಕಟ ಮಾಡುತ್ತೇವೆ ಅಂತ ಹೇಳಿದ್ದಾರೆ. ಜಾ.ದಳಕ್ಕೆ ನಾಲ್ಕು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಗಳನ್ನು ಬಿಟ್ಟುಕೊಡಲು ಅವರೇ(ಬಿಜೆಪಿ) ಒಪ್ಪಿಕೊಂಡಿದ್ದಾರೆ. ಕೊಟ್ಟ ಮಾತನ್ನು ಉಳಿಸಿಕೊಂಡು ನಮಗೆ ಬಿಡುವ ವಿಶ್ವಾಸವಿದೆ.
-ಕೆ.ಟಿ.ಚೆಲುವೇಗೌಡ, ನಗರಾಧ್ಯಕ್ಷ, ಜಾ.ದಳ.

ನಗರಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳನ್ನು ಜಾ.ದಳಕ್ಕೆ ಬಿಟ್ಟುಕೊಡಬೇಕೆಂಬ ತೀರ್ಮಾನವಾಗಲಿ, ಚರ್ಚೆಯಾಗಲೀ ನಡೆದಿಲ್ಲ. ನಾಲ್ಕರಲ್ಲಿ ತಲಾ ಎರಡು ಅಧ್ಯಕ್ಷ ಸ್ಥಾನಗಳನ್ನು ಹಂಚಿಕೊಳ್ಳುವುದಕ್ಕೆ ನಮ್ಮದೇನೂ ಅಭ್ಯಂತರವಿಲ್ಲ. ಪಕ್ಷದ ವೇದಿಕೆಯಲ್ಲಿ ಈ ಬಗ್ಗೆ ಯಾವುದೇ ಚರ್ಚೆ ಮಾಡದೆ ನಿರ್ಧರಿಸಲಾಗದು. -ಟಿ.ಎಸ್.ಶ್ರೀವತ್ಸ, ನಗರಾಧ್ಯಕ್ಷ, ಬಿಜೆಪಿ.

ದಸರಾ ಮಹೋತ್ಸವ ಸೇರಿದಂತೆ ಇನ್ನಿತರ ಕಾರಣಕ್ಕಾಗಿ ಸ್ಥಾಯಿ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ದೀಪಾವಳಿ ಹಬ್ಬ ಮುಗಿದ ಬಳಿಕ ಆಯುಕ್ತರೊಂದಿಗೆ ಸಮಾಲೋಚಿಸಿ ದಿನಾಂಕ ಪ್ರಕಟಿಸಿ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. -ಶಿವಕುಮಾರ್, ಮಹಾಪೌರರು.

 

 

andolana

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

2 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

2 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

3 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

3 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

3 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago