ಗುಂಡ್ಲುಪೇಟೆ: ನೇರ ನೇಮಕ ಮತ್ತು ನೇರ ವೇತನಕ್ಕೆ ಆಗ್ರಹಿಸಿ ಪಟ್ಟಣದ ಪುರಸಭೆಯ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು.
ಪಟ್ಟಣದ ಪುರಸಭಾ ಕಚೇರಿಯ ಮುಂದೆ ನಡೆದ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ನೌಕರ ರವಿ, ಪಟ್ಟಣದ ಪುರಸಭೆಯಲ್ಲಿ 16 ಮಂದಿ ಚಾಲಕರು 6 ಮಂದಿ ಸ್ವಚ್ಛತಾ ಸಿಬ್ಬಂದಿ, 5 ಮಂದಿ ನೀರುಗಂಟಿ ಮತ್ತು ಡಾಟಾ ಆಪರೇಟರ್ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ಮಂದಿ ಕಳೆದ 15-20 ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತಿದ್ದು ಅವರನ್ನು ಖಾಯಂಗಳಿಸಬೇಕೆಂದು ಒತ್ತಾಯಿಸಿದರು.
ಸರ್ಕಾರ ಇತ್ತೀಚೆಗೆ ನೇರ ನೇಮಕಾತಿಯಾದ 13 ಮಂದಿಯನ್ನು ಮಾತ್ರ ಖಾಯಂಗೊಳಿಸಿ ಕಳೆದ 20 ವರ್ಷಗಳಿಂದ ದುಡಿಯುತ್ತಿರುವ ಹೊರಗುತ್ತಿಗೆ ನೌಕರರನ್ನು ಕಡೆಗಣಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೊರಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ ಸರ್ಕಾರ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳುವವರೆಗೂ ಹೊರಗುತ್ತಿಗೆ ನೌಕರರು ಸ್ವಚ್ಛತಾ ಕಾರ್ಯ ಕೈಗೊಳ್ಳದೆ ಕೆಲಸಕ್ಕೆ ಗೈರಾಗುವ ಮೂಲಕ ಮುಷ್ಕರ ನಡೆಸಲಾಗುವುದು ಎಂದು ತಿಳಿಸಿದರು.
ನಾಗರಾಜು, ವಿಮಲ್, ಮುರುಗ ಮತ್ತು ಇನ್ನಿತರ ಹೊರಗುತ್ತಿಗೆ ನೌಕರರು ಧರಣಿಯಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…