ಗುಂಡ್ಲುಪೇಟೆ: ನೇರ ನೇಮಕ ಮತ್ತು ನೇರ ವೇತನಕ್ಕೆ ಆಗ್ರಹಿಸಿ ಪಟ್ಟಣದ ಪುರಸಭೆಯ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು.
ಪಟ್ಟಣದ ಪುರಸಭಾ ಕಚೇರಿಯ ಮುಂದೆ ನಡೆದ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ನೌಕರ ರವಿ, ಪಟ್ಟಣದ ಪುರಸಭೆಯಲ್ಲಿ 16 ಮಂದಿ ಚಾಲಕರು 6 ಮಂದಿ ಸ್ವಚ್ಛತಾ ಸಿಬ್ಬಂದಿ, 5 ಮಂದಿ ನೀರುಗಂಟಿ ಮತ್ತು ಡಾಟಾ ಆಪರೇಟರ್ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ಮಂದಿ ಕಳೆದ 15-20 ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತಿದ್ದು ಅವರನ್ನು ಖಾಯಂಗಳಿಸಬೇಕೆಂದು ಒತ್ತಾಯಿಸಿದರು.
ಸರ್ಕಾರ ಇತ್ತೀಚೆಗೆ ನೇರ ನೇಮಕಾತಿಯಾದ 13 ಮಂದಿಯನ್ನು ಮಾತ್ರ ಖಾಯಂಗೊಳಿಸಿ ಕಳೆದ 20 ವರ್ಷಗಳಿಂದ ದುಡಿಯುತ್ತಿರುವ ಹೊರಗುತ್ತಿಗೆ ನೌಕರರನ್ನು ಕಡೆಗಣಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೊರಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ ಸರ್ಕಾರ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳುವವರೆಗೂ ಹೊರಗುತ್ತಿಗೆ ನೌಕರರು ಸ್ವಚ್ಛತಾ ಕಾರ್ಯ ಕೈಗೊಳ್ಳದೆ ಕೆಲಸಕ್ಕೆ ಗೈರಾಗುವ ಮೂಲಕ ಮುಷ್ಕರ ನಡೆಸಲಾಗುವುದು ಎಂದು ತಿಳಿಸಿದರು.
ನಾಗರಾಜು, ವಿಮಲ್, ಮುರುಗ ಮತ್ತು ಇನ್ನಿತರ ಹೊರಗುತ್ತಿಗೆ ನೌಕರರು ಧರಣಿಯಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…