ಜಿಲ್ಲೆಗಳು

ಮಾಜಿ ಐಬಿ ಅಧಿಕಾರಿ ಕೊಲೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್

ಚಾಮುಂಡಿ ತಪ್ಪಲಿನಲ್ಲಿ ಆರ್. ಎನ್.ಕುಲಕರ್ಣಿ ಅಂತ್ಯಕ್ರಿಯೆ

ಮೈಸೂರು: ಮಾನಸಗಂಗೋತ್ರಿ ಕ್ಯಾಂಪಸ್ ನಲ್ಲಿ ಅಪರಿಚಿತರಿಂದ ಕೊಲೆಗೀಡಾಗಿರುವ ಕೇಂದ್ರ ಗುಪ್ತಚರ ಇಲಾಖೆಯ ನಿವೃತ್ತ ಅಧಿಕಾರಿ, ಟಿ.ಕೆ. ಲೇ ಔಟ್ ನಿವಾಸಿ ಆರ್. ಎನ್.ಕುಲಕರ್ಣಿ ಅವರ ಅಂತ್ಯಕ್ರಿಯೆ ಸೋಮವಾರ ಬೆಳಿಗ್ಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹರಿಶ್ಚಂದ್ರ ಘಾಟ್ನಲ್ಲಿ ನೆರವೇರಿತು.
ಈ ನಡುವೆ ಕೊಲೆ ಪ್ರಕರಣದ ಸಂಬಂಧ ವಶಕ್ಕೆ ಪಡೆದಿರುವ ಮೂವರ ವಿಚಾರಣೆ ಮುಂದುವರಿದಿದೆ. ಪೊಲೀಸರು ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಕುಲಕರ್ಣಿ ಅವರು ಭಾರತದಲ್ಲಿ ಭಯೋತ್ಪಾದನೆ ಹೆಚ್ಚುತ್ತಿರುವ ಬಗ್ಗೆ ಪುಸ್ಕಕವೊಂದನ್ನು ಬರೆದಿದ್ದು ಇದರಲ್ಲಿ ಜಿಹಾದ್ ಬಗ್ಗೆಯೂ ಉಲ್ಲೇಖವಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿಯೂ ತನಿಖೆಯ ಜಾಡು ಮುಂದುವರಿದಿದೆ. Sins of National Conscience ಮತ್ತು Facets of Terrorism in India ಪುಸ್ತಕದಲ್ಲಿ ಅವರು ತಮ್ಮ ವೃತ್ತಿ ಅನುಭವಗಳನ್ನೂ ದಾಖಲಿಸಿದ್ದರು. ಎರಡನೇ ಪುಸ್ತಕವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೂರು ವರ್ಷಗಳ ಹಿಂದಷ್ಟೇ ಬಿಡುಗಡೆ ಮಾಡಿದ್ದರು.

ಶುಕ್ರವಾರ ಸಂಜೆ ಗಂಗೋತ್ರಿ ಆವರಣದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದರು. ಶನಿವಾರ ಬೆಳಿಗ್ಗೆ 8.45ರ ಸುಮಾರಿನಲ್ಲಿ ಕುಲಕರ್ಣಿ ಅವರ ಅಳಿಯ, ಇದು ಅಪಘಾತವಲ್ಲ, ಕೊಲೆ. ಹತ್ಯೆ ಮಾಡುವ ಉದ್ದೇಶದಿಂದಲೇ ಅಪಘಾತ ಮಾಡಲಾಗಿದೆ ಎಂದು ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಭಾರತೀಯ ದಂಡ ಸಂಹಿತೆ 302 ರಡಿ ಪ್ರಕರಣ ದಾಖಲಾಗಿತ್ತು. ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿತ್ತು. ಆದರೆ, ಮಗ ರೋಹನ್ ಕುಲಕರ್ಣಿ ಮತ್ತು ಮಗಳು ಪರಿಣಿತಾ ಕುಲಕರ್ಣಿ ಅವರು ವಿದೇಶದಿಂದ ಬರಬೇಕಿದ್ದರಿಂದ ಶವವನ್ನು ಖಾಸಗಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿತ್ತು. ಭಾನುವಾರ ರಾತ್ರಿ ಇಬ್ಬರೂ ಮೈಸೂರಿಗೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಶವವನ್ನು ಮನೆಗೆ ತಂದು, ಸುಮಾರು ಬೆಳಗ್ಗೆ 9.30ರವರೆಗೂ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಬಳಿಕ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹರಿಶ್ಚಂದ್ರ ಘಾಟ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

andolanait

Recent Posts

ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡ ಮೈಸೂರಿಗರು

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್‌ ಬ್ಯಾಂಡ್‌ನ ಸದ್ದಿನೊಂದಿಗೆ…

4 hours ago

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕಾಫಿ ಪುಡಿ ಅಂಗಡಿ ಬೆಂಕಿಗಾಹುತಿ

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…

5 hours ago

ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್‌ಪಿಗಳ ವರ್ಗ

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…

5 hours ago

ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…

5 hours ago

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

8 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

9 hours ago