ಜಿಲ್ಲೆಗಳು

ಮಾಜಿ ಐಬಿ ಅಧಿಕಾರಿ ಕೊಲೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್

ಚಾಮುಂಡಿ ತಪ್ಪಲಿನಲ್ಲಿ ಆರ್. ಎನ್.ಕುಲಕರ್ಣಿ ಅಂತ್ಯಕ್ರಿಯೆ

ಮೈಸೂರು: ಮಾನಸಗಂಗೋತ್ರಿ ಕ್ಯಾಂಪಸ್ ನಲ್ಲಿ ಅಪರಿಚಿತರಿಂದ ಕೊಲೆಗೀಡಾಗಿರುವ ಕೇಂದ್ರ ಗುಪ್ತಚರ ಇಲಾಖೆಯ ನಿವೃತ್ತ ಅಧಿಕಾರಿ, ಟಿ.ಕೆ. ಲೇ ಔಟ್ ನಿವಾಸಿ ಆರ್. ಎನ್.ಕುಲಕರ್ಣಿ ಅವರ ಅಂತ್ಯಕ್ರಿಯೆ ಸೋಮವಾರ ಬೆಳಿಗ್ಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹರಿಶ್ಚಂದ್ರ ಘಾಟ್ನಲ್ಲಿ ನೆರವೇರಿತು.
ಈ ನಡುವೆ ಕೊಲೆ ಪ್ರಕರಣದ ಸಂಬಂಧ ವಶಕ್ಕೆ ಪಡೆದಿರುವ ಮೂವರ ವಿಚಾರಣೆ ಮುಂದುವರಿದಿದೆ. ಪೊಲೀಸರು ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಕುಲಕರ್ಣಿ ಅವರು ಭಾರತದಲ್ಲಿ ಭಯೋತ್ಪಾದನೆ ಹೆಚ್ಚುತ್ತಿರುವ ಬಗ್ಗೆ ಪುಸ್ಕಕವೊಂದನ್ನು ಬರೆದಿದ್ದು ಇದರಲ್ಲಿ ಜಿಹಾದ್ ಬಗ್ಗೆಯೂ ಉಲ್ಲೇಖವಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿಯೂ ತನಿಖೆಯ ಜಾಡು ಮುಂದುವರಿದಿದೆ. Sins of National Conscience ಮತ್ತು Facets of Terrorism in India ಪುಸ್ತಕದಲ್ಲಿ ಅವರು ತಮ್ಮ ವೃತ್ತಿ ಅನುಭವಗಳನ್ನೂ ದಾಖಲಿಸಿದ್ದರು. ಎರಡನೇ ಪುಸ್ತಕವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೂರು ವರ್ಷಗಳ ಹಿಂದಷ್ಟೇ ಬಿಡುಗಡೆ ಮಾಡಿದ್ದರು.

ಶುಕ್ರವಾರ ಸಂಜೆ ಗಂಗೋತ್ರಿ ಆವರಣದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದರು. ಶನಿವಾರ ಬೆಳಿಗ್ಗೆ 8.45ರ ಸುಮಾರಿನಲ್ಲಿ ಕುಲಕರ್ಣಿ ಅವರ ಅಳಿಯ, ಇದು ಅಪಘಾತವಲ್ಲ, ಕೊಲೆ. ಹತ್ಯೆ ಮಾಡುವ ಉದ್ದೇಶದಿಂದಲೇ ಅಪಘಾತ ಮಾಡಲಾಗಿದೆ ಎಂದು ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಭಾರತೀಯ ದಂಡ ಸಂಹಿತೆ 302 ರಡಿ ಪ್ರಕರಣ ದಾಖಲಾಗಿತ್ತು. ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿತ್ತು. ಆದರೆ, ಮಗ ರೋಹನ್ ಕುಲಕರ್ಣಿ ಮತ್ತು ಮಗಳು ಪರಿಣಿತಾ ಕುಲಕರ್ಣಿ ಅವರು ವಿದೇಶದಿಂದ ಬರಬೇಕಿದ್ದರಿಂದ ಶವವನ್ನು ಖಾಸಗಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿತ್ತು. ಭಾನುವಾರ ರಾತ್ರಿ ಇಬ್ಬರೂ ಮೈಸೂರಿಗೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಶವವನ್ನು ಮನೆಗೆ ತಂದು, ಸುಮಾರು ಬೆಳಗ್ಗೆ 9.30ರವರೆಗೂ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಬಳಿಕ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹರಿಶ್ಚಂದ್ರ ಘಾಟ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago