ಮೈಸೂರು: ಮುರುಘ ಶ್ರೀ ಪ್ರಕರಣದಲ್ಲಿ ವಿಚಾರಣೆಗೆಂದು ಚಿತ್ರದುರ್ಗಕ್ಕೆ ಕರೆದುಕೊಂಡು ಹೋಗಿದ್ದ ಸಂತ್ರಸ್ತ ಬಾಲಕಿಯರ ತಾಯಿಯನ್ನು ನ.೩೦ರಂದು ರಾತ್ರಿ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ.
ನ.೩೦ರಂದು ಒಡನಾಡಿ ಸೇವಾ ಸಂಸ್ಥೆಯ ಮಡಿಲು ಪುರ್ನವಸತಿ ಕೇಂದ್ರಕ್ಕೆ ಕಾನೂನು ಬಾಹಿರವಾಗಿ ಮಫ್ತಿಯಲ್ಲಿ ನುಗ್ಗಿರುವ ೧೦ ಮಂದಿ ಚಿತ್ರದುರ್ಗದ ಪೊಲೀಸರು ಸಂಸ್ಥೆಯೊಳಗೆ ಹುಡುಕಾಟ ನಡೆಸಿದ್ದರು. ಆ ವೇಳೆ ಅವರನ್ನು ತಡೆದಿದ್ದ ಒಡನಾಡಿ ಸಂಸ್ಥೆಯ ನಿರ್ದೇಶಕರು, ‘ಬಾಲಕಿಯರ ತಾಯಿಯನ್ನು ವಿಚಾರಣೆ ಮಾಡಿ ಕಳುಹಿಸುತ್ತೇವೆ ಎಂದು ಕರೆದುಕೊಂಡು ಹೋದವರು ವಾಪಸ್ ಕರೆದುಕೊಂಡು ಬಂದಿಲ್ಲವೇಕೆ’ ಎಂದು ಪ್ರಶ್ನಿಸಿದ್ದರು. ಆನಂತರ ಪೊಲೀಸರು ತಪ್ಪೊಪ್ಪಿಕೊಂಡು ಅಲ್ಲಿಂದ ತೆರಳಿದ್ದರು. ಆ ನಂತರ ಅಂದು ರಾತ್ರಿಯೇ ವಿಚಾರಣೆಗೆಂದು ಕರೆದುಕೊಂಡು ಹೋಗಿದ್ದ ತಾಯಿಯನ್ನು ವಾಪಸ್ ಕಳುಹಿಸಿದ್ದಾರೆ. ಗುರುವಾರ ನಾವು ನೀಡಿದ ದೂರಿಗೆ ಇನ್ನೂ ಯಾರಿಂದಲು ಪ್ರತಿಕ್ರಿಯೆ ಬಂದಿಲ್ಲ ಎಂದು ಸಂಸ್ಥೆಯ ನಿರ್ದೇಶಕ ಸ್ಟ್ಯಾನ್ಲಿ ತಿಳಿಸಿದರು.
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…
ಬೆಂಗಳೂರು : ಕಾಂಗ್ರೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…