ಮೈಸೂರು: ಮುರುಘ ಶ್ರೀ ಪ್ರಕರಣದಲ್ಲಿ ವಿಚಾರಣೆಗೆಂದು ಚಿತ್ರದುರ್ಗಕ್ಕೆ ಕರೆದುಕೊಂಡು ಹೋಗಿದ್ದ ಸಂತ್ರಸ್ತ ಬಾಲಕಿಯರ ತಾಯಿಯನ್ನು ನ.೩೦ರಂದು ರಾತ್ರಿ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ.
ನ.೩೦ರಂದು ಒಡನಾಡಿ ಸೇವಾ ಸಂಸ್ಥೆಯ ಮಡಿಲು ಪುರ್ನವಸತಿ ಕೇಂದ್ರಕ್ಕೆ ಕಾನೂನು ಬಾಹಿರವಾಗಿ ಮಫ್ತಿಯಲ್ಲಿ ನುಗ್ಗಿರುವ ೧೦ ಮಂದಿ ಚಿತ್ರದುರ್ಗದ ಪೊಲೀಸರು ಸಂಸ್ಥೆಯೊಳಗೆ ಹುಡುಕಾಟ ನಡೆಸಿದ್ದರು. ಆ ವೇಳೆ ಅವರನ್ನು ತಡೆದಿದ್ದ ಒಡನಾಡಿ ಸಂಸ್ಥೆಯ ನಿರ್ದೇಶಕರು, ‘ಬಾಲಕಿಯರ ತಾಯಿಯನ್ನು ವಿಚಾರಣೆ ಮಾಡಿ ಕಳುಹಿಸುತ್ತೇವೆ ಎಂದು ಕರೆದುಕೊಂಡು ಹೋದವರು ವಾಪಸ್ ಕರೆದುಕೊಂಡು ಬಂದಿಲ್ಲವೇಕೆ’ ಎಂದು ಪ್ರಶ್ನಿಸಿದ್ದರು. ಆನಂತರ ಪೊಲೀಸರು ತಪ್ಪೊಪ್ಪಿಕೊಂಡು ಅಲ್ಲಿಂದ ತೆರಳಿದ್ದರು. ಆ ನಂತರ ಅಂದು ರಾತ್ರಿಯೇ ವಿಚಾರಣೆಗೆಂದು ಕರೆದುಕೊಂಡು ಹೋಗಿದ್ದ ತಾಯಿಯನ್ನು ವಾಪಸ್ ಕಳುಹಿಸಿದ್ದಾರೆ. ಗುರುವಾರ ನಾವು ನೀಡಿದ ದೂರಿಗೆ ಇನ್ನೂ ಯಾರಿಂದಲು ಪ್ರತಿಕ್ರಿಯೆ ಬಂದಿಲ್ಲ ಎಂದು ಸಂಸ್ಥೆಯ ನಿರ್ದೇಶಕ ಸ್ಟ್ಯಾನ್ಲಿ ತಿಳಿಸಿದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…