ಚಾಮುಂಡಿಬೆಟ್ಟ ಸೇರಿ ಹಲವೆಡೆ ಬಿಗಿ ಪೊಲೀಸ್ ಬಂದೋಬಸ್ತ್
ಮೈಸೂರು: ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆ.೨೬ರಂದು ಸೋಮವಾರ ಹೊಸದಿಲ್ಲಿಯ ಪಾಲಂ ವಿಮಾನ ನಿಲ್ದಾಣದಿಂದ ಮೈಸೂರಿಗೆ ನೇರವಾಗಿ ಆಗಮಿಸಲಿದ್ದಾರೆ. ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಾಂಸ್ಕೃತಿಕ ನಗರಿಗೆ ಮೊದಲ ಬಾರಿಗೆ ಆಗಮಿಸುತ್ತಿರುವ ಅವರನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಸ್ವಾಗತಿಸಲಿದ್ದಾರೆ.
೨೬ರಂದು ಬೆಳಿಗ್ಗೆ ೫.೫೦ಕ್ಕೆ ರಾಷ್ಟ್ರಪತಿ ಭವನದಿಂದ ಹೊರಟು ೬.೦೫ಕ್ಕೆ ಪಾಲಂ ವಿಮಾನ ನಿಲ್ದಾಣ ತಲುಪಲಿದ್ದಾರೆ. ೬.೧೫ಕ್ಕೆ ಹೊರಟು ೯ ಗಂಟಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ೯.೧೦ಕ್ಕೆ ವಿಮಾನ ನಿಲ್ದಾಣದಿಂದ ಹೊರಟು ೯.೩೦ಕ್ಕೆ ಚಾಮುಂಡೇಶ್ವರಿ ದೇವಸ್ಥಾನ ತಲುಪಲಿದ್ದಾರೆ. ನಂತರ, ೨೦ ನಿಮಿಷಗಳ ಕಾಲ ಚಾಮುಂಡೇಶ್ವರಿ ದೇವಾಲಯದಲ್ಲಿ ಇರಲ್ಲಿದ್ದಾರೆ. ೯.೫೦ಕ್ಕೆ ದೇವಸ್ಥಾನದಿಂದ ಹೊರಟು ೯.೫೫ಕ್ಕೆ ವೇದಿಕೆಯನ್ನೇರಲಿದ್ದಾರೆ. ೧೦ರಿಂದ ೧೦.೪೫ರ ವೇಳೆ ನಾಡಹಬ್ಬಕ್ಕೆ ಚಾಲನೆ ನೀಡಲಿರುವ ರಾಷ್ಟ್ರಪತಿಗಳು ೪೫ ನಿಮಿಷಗಳ ಕಾಲ ಸಮಾರಂಭದಲ್ಲಿ ಹಾಜರಿರುತ್ತಾರೆ. ೧೦.೪೫ಕ್ಕೆ ಚಾಮುಂಡಿಬೆಟ್ಟದಿಂದ ಹೊರಟು ೧೧.೦೫ಕ್ಕೆ ಮೈಸೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಬಳಿಕ ಜಿಲ್ಲಾಡಳಿತದಿಂದ ಬೀಳ್ಕೊಡುಗೆ ಸ್ವೀಕರಿಸಿ ೧೧.೧೫ಕ್ಕೆ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪಲಿದ್ದಾರೆ.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…