ಜಿಲ್ಲೆಗಳು

ಮೊದಲ ಬಾರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಚಾಮುಂಡಿಬೆಟ್ಟ ಸೇರಿ ಹಲವೆಡೆ ಬಿಗಿ ಪೊಲೀಸ್ ಬಂದೋಬಸ್ತ್

ಮೈಸೂರು: ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆ.೨೬ರಂದು ಸೋಮವಾರ ಹೊಸದಿಲ್ಲಿಯ ಪಾಲಂ ವಿಮಾನ ನಿಲ್ದಾಣದಿಂದ ಮೈಸೂರಿಗೆ ನೇರವಾಗಿ ಆಗಮಿಸಲಿದ್ದಾರೆ. ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಾಂಸ್ಕೃತಿಕ ನಗರಿಗೆ ಮೊದಲ ಬಾರಿಗೆ ಆಗಮಿಸುತ್ತಿರುವ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಸ್ವಾಗತಿಸಲಿದ್ದಾರೆ.
೨೬ರಂದು ಬೆಳಿಗ್ಗೆ ೫.೫೦ಕ್ಕೆ ರಾಷ್ಟ್ರಪತಿ ಭವನದಿಂದ ಹೊರಟು ೬.೦೫ಕ್ಕೆ ಪಾಲಂ ವಿಮಾನ ನಿಲ್ದಾಣ ತಲುಪಲಿದ್ದಾರೆ. ೬.೧೫ಕ್ಕೆ ಹೊರಟು ೯ ಗಂಟಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ೯.೧೦ಕ್ಕೆ ವಿಮಾನ ನಿಲ್ದಾಣದಿಂದ ಹೊರಟು ೯.೩೦ಕ್ಕೆ ಚಾಮುಂಡೇಶ್ವರಿ ದೇವಸ್ಥಾನ ತಲುಪಲಿದ್ದಾರೆ. ನಂತರ, ೨೦ ನಿಮಿಷಗಳ ಕಾಲ ಚಾಮುಂಡೇಶ್ವರಿ ದೇವಾಲಯದಲ್ಲಿ ಇರಲ್ಲಿದ್ದಾರೆ. ೯.೫೦ಕ್ಕೆ ದೇವಸ್ಥಾನದಿಂದ ಹೊರಟು ೯.೫೫ಕ್ಕೆ ವೇದಿಕೆಯನ್ನೇರಲಿದ್ದಾರೆ. ೧೦ರಿಂದ ೧೦.೪೫ರ ವೇಳೆ ನಾಡಹಬ್ಬಕ್ಕೆ ಚಾಲನೆ ನೀಡಲಿರುವ ರಾಷ್ಟ್ರಪತಿಗಳು ೪೫ ನಿಮಿಷಗಳ ಕಾಲ ಸಮಾರಂಭದಲ್ಲಿ ಹಾಜರಿರುತ್ತಾರೆ. ೧೦.೪೫ಕ್ಕೆ ಚಾಮುಂಡಿಬೆಟ್ಟದಿಂದ ಹೊರಟು ೧೧.೦೫ಕ್ಕೆ ಮೈಸೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಬಳಿಕ ಜಿಲ್ಲಾಡಳಿತದಿಂದ ಬೀಳ್ಕೊಡುಗೆ ಸ್ವೀಕರಿಸಿ ೧೧.೧೫ಕ್ಕೆ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪಲಿದ್ದಾರೆ.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

8 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

8 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

23 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

24 hours ago