ಜಿಲ್ಲೆಗಳು

ಮುರ್ಮು ಆಗಮದ ಹಿನ್ನೆಲೆ ಚಾ.ಬೆಟ್ಟದಲ್ಲಿ ಸಕಲ ಸಿದ್ಧತೆ

ವೇದಿಕೆಯಲ್ಲಿ ರಾಷ್ಟ್ರಪತಿ ಸೇರಿ ೧೩ ಮಂದಿ ಉಪಸ್ಥಿತಿ

ಮೈಸೂರು: ದಸರಾ ಮಹೋತ್ಸವಕ್ಕೆ ಚಾಲನೆ ನೀಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ನಡೆಯುವ ಕಾರ್ಯಕ್ರಮದ ಅಂತಿಮ ಹಂತದ ಸಿದ್ಧತೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪರಿಶೀಲಿಸಿದರು.

ಭಾನುವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಾಲಯ, ವೇದಿಕೆ, ವಿಶ್ರಾಂತಿ ಕೊಠಡಿ, ಪಾರ್ಕಿಂಗ್ ಜಾಗ, ಸಾರ್ವಜನಿಕರು ಆಸೀನರಾಗುವ ವೇದಿಕೆ ನಿರ್ಮಾಣ ಕಾರ್ಯ ಮುಂತಾದವುಗಳ ಅಂತಿಮ ಹಂತದ ತಯಾರಿಯನ್ನು ವೀಕ್ಷಿಸಿದರು. ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರು ಸಚಿವರಿಗೆ ಸಿದ್ಧತೆಗಳ ಬಗ್ಗೆ ವಿವರಿಸಿದರು.

ಬಳಿಕ ಮಾತನಾಡಿದ ಸಚಿವರು, ರಾಷ್ಟ್ರಪತಿಗಳು ಮೈಸೂರು ವಿಮಾನ ನಿಲ್ದಾಣದಿಂದ ಚಾಮುಂಡಿಬೆಟ್ಟಕ್ಕೆ ನೇರವಾಗಿ ಬಂದಿಳಿಯಲಿದ್ದಾರೆ. ವೇದಿಕೆಯಲ್ಲಿ ರಾಷ್ಟ್ರಪತಿ, ಮುಖ್ಯಮಂತ್ರಿ, ರಾಜ್ಯಪಾಲರು ಸೇರಿ ೧೩ ಮಂದಿಗೆ ಅವಕಾಶವಿದೆ. ಶಾಸಕರು, ವಿಧಾನಪರಿಷತ್ ಸದಸ್ಯರಿಗೆ ಮತ್ತೊಂದು ಕಡೆ ವೇದಿಕೆ ಇರುತ್ತದೆ. ರಾಷ್ಟ್ರಪತಿಗಳನ್ನು ಆಹ್ವಾನಿಸುವ ಸಂದರ್ಭದಲ್ಲಿ ಎಚ್.ಡಿ.ಕೋಟೆ, ಹುಣಸೂರು, ಪಿರಿಯಾಪಟ್ಟಣ, ಚಾಮರಾಜನಗರ, ಮಡಿಕೇರಿ ಭಾಗದ ೧೪ ಮಂದಿ ಆದಿವಾಸಿಗಳೊಂದಿಗೆ ಫೋಟೋ ಸೆಷನ್‌ಗೆ ಹತ್ತು ನಿಮಿಷಗಳ ಕಾಲ ಸಮಯ ಕೊಡುವಂತೆ ಕೇಳಿದ ಮನವಿಗೆ ಒಪ್ಪಿದ್ದು, ದೇವಸ್ಥಾನದ ಬಲಭಾಗದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಮಹಾಪೌರ ಶಿವಕುಮಾರ್, ಸಂಸದ ಪ್ರತಾಪ್ ಸಿಂಹ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಜೆಎಲ್‌ಆರ್ ಮಾಜಿ ಅಧ್ಯಕ್ಷ ಎಂ.ಅಪ್ಪಣ್ಣ, ಡಿಸಿಪಿ ಎಂ.ಎಸ್.ಗೀತಾ ಪ್ರಸನ್ನ ಇನ್ನಿತರರು ಹಾಜರಿದ್ದರು.

 

ಚಾಮುಂಡೇಶ್ವರಿ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ

ಮೈಸೂರು: ದಸರಾ ಮಹೋತ್ಸವಕ್ಕೆ ಸೋಮವಾರ ಚಾಲನೆ ನೀಡಲಿರುವ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಾಲಯದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಚಾಮುಂಡೇಶ್ವರಿ ದೇವಿಗೆ ಸೋಮವಾರ ಮುಂಜಾನೆ ೪ ಗಂಟೆಯಿಂದಲೇ ವಿಶೇಷ ಪೂಜೆ ನಡೆಯಲಿದೆ. ನಂತರ ಸಮಾರಂಭ ನಡೆಯುವ ವೇದಿಕೆಗೆ ಚಾಮಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ತಂದು ಅಲಂಕರಿಸಲಾಗುತ್ತದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಮುಂಡಿಬೆಟ್ಟದಿಂದ ನಿರ್ಗಮಿಸುವ ತನಕ ಅಂದರೆ ೧೧.೩೦ರವರೆಗೆ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

andolanait

Recent Posts

ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ…

15 mins ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಡಿಸಿಎಂ ಡಿಕೆಶಿ ಆಪ್ತ ಇನಾಯತ್‌ಗೆ ನೋಟಿಸ್‌ ಜಾರಿ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆಪ್ತನಿಗೂ ನೋಟಿಸ್‌ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್‌ ಮುಖಂಡ ಇನಾಯತ್‌ ಅಲಿ ಅವರಿಗೆ…

48 mins ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ: ಬಸ್ ಟಿಕೆಟ್‌ ದರ ದುಪ್ಪಟ್ಟು ಏರಿಕೆ

ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ…

1 hour ago

2026ರ ಐಪಿಎಲ್‌ ಬೆಂಗಳೂರಿನಲ್ಲೇ ಫಿಕ್ಸ್: ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ

ಬೆಂಗಳೂರು: 2026ರ ಐಪಿಎಲ್‌ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್‌ಸಿಎ ಚುನಾವಣೆ ಮತದಾನದ ವೇಳೆ…

1 hour ago

ದೆಹಲಿ: ಇಂದು 108 ಇಂಡಿಗೋ ವಿಮಾನಗಳ ಹಾರಾಟ ರದ್ದು

ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…

2 hours ago

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…

3 hours ago