ಜಿಲ್ಲೆಗಳು

ಮುರ್ಮು ಆಗಮದ ಹಿನ್ನೆಲೆ ಚಾ.ಬೆಟ್ಟದಲ್ಲಿ ಸಕಲ ಸಿದ್ಧತೆ

ವೇದಿಕೆಯಲ್ಲಿ ರಾಷ್ಟ್ರಪತಿ ಸೇರಿ ೧೩ ಮಂದಿ ಉಪಸ್ಥಿತಿ

ಮೈಸೂರು: ದಸರಾ ಮಹೋತ್ಸವಕ್ಕೆ ಚಾಲನೆ ನೀಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ನಡೆಯುವ ಕಾರ್ಯಕ್ರಮದ ಅಂತಿಮ ಹಂತದ ಸಿದ್ಧತೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪರಿಶೀಲಿಸಿದರು.

ಭಾನುವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಾಲಯ, ವೇದಿಕೆ, ವಿಶ್ರಾಂತಿ ಕೊಠಡಿ, ಪಾರ್ಕಿಂಗ್ ಜಾಗ, ಸಾರ್ವಜನಿಕರು ಆಸೀನರಾಗುವ ವೇದಿಕೆ ನಿರ್ಮಾಣ ಕಾರ್ಯ ಮುಂತಾದವುಗಳ ಅಂತಿಮ ಹಂತದ ತಯಾರಿಯನ್ನು ವೀಕ್ಷಿಸಿದರು. ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರು ಸಚಿವರಿಗೆ ಸಿದ್ಧತೆಗಳ ಬಗ್ಗೆ ವಿವರಿಸಿದರು.

ಬಳಿಕ ಮಾತನಾಡಿದ ಸಚಿವರು, ರಾಷ್ಟ್ರಪತಿಗಳು ಮೈಸೂರು ವಿಮಾನ ನಿಲ್ದಾಣದಿಂದ ಚಾಮುಂಡಿಬೆಟ್ಟಕ್ಕೆ ನೇರವಾಗಿ ಬಂದಿಳಿಯಲಿದ್ದಾರೆ. ವೇದಿಕೆಯಲ್ಲಿ ರಾಷ್ಟ್ರಪತಿ, ಮುಖ್ಯಮಂತ್ರಿ, ರಾಜ್ಯಪಾಲರು ಸೇರಿ ೧೩ ಮಂದಿಗೆ ಅವಕಾಶವಿದೆ. ಶಾಸಕರು, ವಿಧಾನಪರಿಷತ್ ಸದಸ್ಯರಿಗೆ ಮತ್ತೊಂದು ಕಡೆ ವೇದಿಕೆ ಇರುತ್ತದೆ. ರಾಷ್ಟ್ರಪತಿಗಳನ್ನು ಆಹ್ವಾನಿಸುವ ಸಂದರ್ಭದಲ್ಲಿ ಎಚ್.ಡಿ.ಕೋಟೆ, ಹುಣಸೂರು, ಪಿರಿಯಾಪಟ್ಟಣ, ಚಾಮರಾಜನಗರ, ಮಡಿಕೇರಿ ಭಾಗದ ೧೪ ಮಂದಿ ಆದಿವಾಸಿಗಳೊಂದಿಗೆ ಫೋಟೋ ಸೆಷನ್‌ಗೆ ಹತ್ತು ನಿಮಿಷಗಳ ಕಾಲ ಸಮಯ ಕೊಡುವಂತೆ ಕೇಳಿದ ಮನವಿಗೆ ಒಪ್ಪಿದ್ದು, ದೇವಸ್ಥಾನದ ಬಲಭಾಗದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಮಹಾಪೌರ ಶಿವಕುಮಾರ್, ಸಂಸದ ಪ್ರತಾಪ್ ಸಿಂಹ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಜೆಎಲ್‌ಆರ್ ಮಾಜಿ ಅಧ್ಯಕ್ಷ ಎಂ.ಅಪ್ಪಣ್ಣ, ಡಿಸಿಪಿ ಎಂ.ಎಸ್.ಗೀತಾ ಪ್ರಸನ್ನ ಇನ್ನಿತರರು ಹಾಜರಿದ್ದರು.

 

ಚಾಮುಂಡೇಶ್ವರಿ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ

ಮೈಸೂರು: ದಸರಾ ಮಹೋತ್ಸವಕ್ಕೆ ಸೋಮವಾರ ಚಾಲನೆ ನೀಡಲಿರುವ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಾಲಯದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಚಾಮುಂಡೇಶ್ವರಿ ದೇವಿಗೆ ಸೋಮವಾರ ಮುಂಜಾನೆ ೪ ಗಂಟೆಯಿಂದಲೇ ವಿಶೇಷ ಪೂಜೆ ನಡೆಯಲಿದೆ. ನಂತರ ಸಮಾರಂಭ ನಡೆಯುವ ವೇದಿಕೆಗೆ ಚಾಮಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ತಂದು ಅಲಂಕರಿಸಲಾಗುತ್ತದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಮುಂಡಿಬೆಟ್ಟದಿಂದ ನಿರ್ಗಮಿಸುವ ತನಕ ಅಂದರೆ ೧೧.೩೦ರವರೆಗೆ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

9 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

9 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

1 day ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

1 day ago