ಮೈಸೂರು: ಚಿತ್ರದುರ್ಗದ ಮುರುಘಾ ರಾಜೇಂದ್ರ ಮಠದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಪ್ರಕರಣ ದಾಖಲಾದ ಬೆನ್ನಿಗೇ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮುರುಘಾ ಮಠದ ಆಡಳಿತಾಧಿಕಾರಿ ಎಸ್ .ಕೆ. ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ಬಸವರಾಜನ್ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಆಡಳಿತಾಧಿಕಾರಿ ಬಸವರಾಜನ್ ಅವರು ಪರಿಶೀಲನೆ ನೆಪದಲ್ಲಿ ಕೊಠಡಿಗೆ ಪ್ರವೇಶಿಸಿ ಕಿರುಕುಳ ನೀಡುತ್ತಿದ್ದರು. ದೇಹದ ಅಂಗಾಂಗಗಳನ್ನು ಮುಟ್ಟಿ ಹಿಂಸೆ ನೀಡುತ್ತಿದ್ದರು. ಬಲಾತ್ಕಾರಕ್ಕೆ ಯತ್ನಿಸಿದಾಗ ಪ್ರತಿರೋಧ ತೋರಲಾಯಿತು. ಇದರಿಂದ ಕುಪಿತಗೊಂಡ ಅವರು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ.
ಮಠದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯರಿಬ್ಬರು ವೈಯಕ್ತಿಕ ಕಾರಣ ನೀಡಿ ಹಾಸ್ಟೆಲ್ ನಿಂದ ಹೊರ ಹೋಗಿದ್ದರು. ಆದರೆ, ಅವರು ಮನೆಗೆ ತೆರಳದೆ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆ ತಲುಪಿದ್ದರು. ಈ ಬಗ್ಗೆ ಮಕ್ಕಳ ಹೆತ್ತವರಿಗಾಗಲೀ, ಮಠಕ್ಕಾಗಲೀ ಮಾಹಿತಿ ನೀಡದೆ ಬಸವರಾಜನ್ ಮಕ್ಕಳನ್ನು ಕರೆತಂದು ಅಕ್ರಮವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ.
ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…
ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…
ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…
ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…
ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…
ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…