ಮೈಸೂರು: ಚಿತ್ರದುರ್ಗದ ಮುರುಘಾ ರಾಜೇಂದ್ರ ಮಠದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಪ್ರಕರಣ ದಾಖಲಾದ ಬೆನ್ನಿಗೇ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮುರುಘಾ ಮಠದ ಆಡಳಿತಾಧಿಕಾರಿ ಎಸ್ .ಕೆ. ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ಬಸವರಾಜನ್ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಆಡಳಿತಾಧಿಕಾರಿ ಬಸವರಾಜನ್ ಅವರು ಪರಿಶೀಲನೆ ನೆಪದಲ್ಲಿ ಕೊಠಡಿಗೆ ಪ್ರವೇಶಿಸಿ ಕಿರುಕುಳ ನೀಡುತ್ತಿದ್ದರು. ದೇಹದ ಅಂಗಾಂಗಗಳನ್ನು ಮುಟ್ಟಿ ಹಿಂಸೆ ನೀಡುತ್ತಿದ್ದರು. ಬಲಾತ್ಕಾರಕ್ಕೆ ಯತ್ನಿಸಿದಾಗ ಪ್ರತಿರೋಧ ತೋರಲಾಯಿತು. ಇದರಿಂದ ಕುಪಿತಗೊಂಡ ಅವರು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ.
ಮಠದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯರಿಬ್ಬರು ವೈಯಕ್ತಿಕ ಕಾರಣ ನೀಡಿ ಹಾಸ್ಟೆಲ್ ನಿಂದ ಹೊರ ಹೋಗಿದ್ದರು. ಆದರೆ, ಅವರು ಮನೆಗೆ ತೆರಳದೆ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆ ತಲುಪಿದ್ದರು. ಈ ಬಗ್ಗೆ ಮಕ್ಕಳ ಹೆತ್ತವರಿಗಾಗಲೀ, ಮಠಕ್ಕಾಗಲೀ ಮಾಹಿತಿ ನೀಡದೆ ಬಸವರಾಜನ್ ಮಕ್ಕಳನ್ನು ಕರೆತಂದು ಅಕ್ರಮವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…