ಮೈಸೂರು: ಚಿತ್ರದುರ್ಗದ ಮುರುಘಾ ರಾಜೇಂದ್ರ ಮಠದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಪ್ರಕರಣ ದಾಖಲಾದ ಬೆನ್ನಿಗೇ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮುರುಘಾ ಮಠದ ಆಡಳಿತಾಧಿಕಾರಿ ಎಸ್ .ಕೆ. ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ಬಸವರಾಜನ್ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಆಡಳಿತಾಧಿಕಾರಿ ಬಸವರಾಜನ್ ಅವರು ಪರಿಶೀಲನೆ ನೆಪದಲ್ಲಿ ಕೊಠಡಿಗೆ ಪ್ರವೇಶಿಸಿ ಕಿರುಕುಳ ನೀಡುತ್ತಿದ್ದರು. ದೇಹದ ಅಂಗಾಂಗಗಳನ್ನು ಮುಟ್ಟಿ ಹಿಂಸೆ ನೀಡುತ್ತಿದ್ದರು. ಬಲಾತ್ಕಾರಕ್ಕೆ ಯತ್ನಿಸಿದಾಗ ಪ್ರತಿರೋಧ ತೋರಲಾಯಿತು. ಇದರಿಂದ ಕುಪಿತಗೊಂಡ ಅವರು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ.
ಮಠದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯರಿಬ್ಬರು ವೈಯಕ್ತಿಕ ಕಾರಣ ನೀಡಿ ಹಾಸ್ಟೆಲ್ ನಿಂದ ಹೊರ ಹೋಗಿದ್ದರು. ಆದರೆ, ಅವರು ಮನೆಗೆ ತೆರಳದೆ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆ ತಲುಪಿದ್ದರು. ಈ ಬಗ್ಗೆ ಮಕ್ಕಳ ಹೆತ್ತವರಿಗಾಗಲೀ, ಮಠಕ್ಕಾಗಲೀ ಮಾಹಿತಿ ನೀಡದೆ ಬಸವರಾಜನ್ ಮಕ್ಕಳನ್ನು ಕರೆತಂದು ಅಕ್ರಮವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…