ಜಿಲ್ಲೆಗಳು

ಮುರುಘಾ ಶ್ರೀ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಿಂದ ಹಿಂದೆ ಸರಿಯಲು ₹3 ಕೋಟಿ ಆಮಿಷ : ಎಂ.ಎಲ್‌.ಪರಶುರಾಂ

‘ಒಡನಾಡಿ’ ಪರಶುರಾಂ ಆರೋಪ

ಮೈಸೂರು: ‌‘ಬಾಲಕಿಯರ ಮೇಲೆ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ ಲೈಂಗಿಕ ದೌರ್ಜನ್ಯದ ಆರೋಪ ಪ್ರಕರಣದಲ್ಲಿ ಹಿಂದೆ ಸರಿಯುವಂತೆ ಹೇಳಿ ನಮಗೆ ₹ 3 ಕೋಟಿ ಆಮಿಷ ಒಡ್ಡಲಾಗಿತ್ತು. ಸ್ವಾಮೀಜಿ ಅವರನ್ನು ಬಿಟ್ಟು ಬಿಡಿ ಎಂದು ಮಂತ್ರಿ ಮಹೋದಯರೊಬ್ಬರು ಹೇಳಿದ್ದರು’ ಎಂದು ಒಡನಾಡಿ ಸಂಸ್ಥೆ ನಿರ್ದೇಶಕ ಎಂ.ಎಲ್‌.ಪರಶುರಾಂ ಆರೋಪಿಸಿದರು.

ಇಲ್ಲಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಶುಕ್ರವಾರ ‘ವಿದ್ಯಾರ್ಥಿ ಪದಾಧಿಕಾರಿಗಳ ಅಭಿವಿನ್ಯಾಸ’ ಕಾರ್ಯಕ್ರಮದಲ್ಲಿ ಮಾತನಾಡಿ, ‘ಸಂತ್ರಸ್ತ ಮಕ್ಕಳು ಗೊಳೋ ಎಂದು ಒಂದೆಡೆ ಅಳುತ್ತಿದ್ದರೆ, ಇನ್ನೊಂದೆಡೆ ಹಣದ ಆಯ್ಕೆಯನ್ನು ಮುಂದೊಡ್ಡಲಾಗಿತ್ತು. ನಾಚಿಕೆ ಇಲ್ಲದ ನಾಯಕರೊಬ್ಬರು ಸ್ವಾಮೀಜಿ ಪರವಾಗಿ ಮನವಿ ಮಾಡಿದ್ದರು’ ಎಂದರು.

‘3 ರಿಂದ 16 ವರ್ಷದವರೆಗಿನ, ಸುಮಾರು 23 ಹೆಣ್ಣು ಮಕ್ಕಳ ಮೇಲೆ ಮುರುಘಾ ಸ್ವಾಮೀಜಿ ಲೈಂಗಿಕ ದೌರ್ಜನ್ಯ ಎಸಗಿದ್ದರು. 25 ವರ್ಷಗಳಿಂದ ಇಂತಹ ಕೃತ್ಯ ಎಸಗಿದ್ದಾರೆ. ಚಿಕ್ಕ ಹೆಣ್ಣು ಮಗುವೊಂದು ಕಷ್ಟ ಹೇಳಿಕೊಂಡು, ನಮ್ಮ ಬಳಿಗೆ ಬಂದು, ಸ್ವಾಮೀಜಿ ಕಚ್ಚಿದ್ದ ತನ್ನ ಎದೆಭಾಗವನ್ನು ತೋರಿದಾಗ, ತಂದೆ ಸ್ಥಾನದಲ್ಲಿ ನಿಂತು ಮೌನ ವಹಿಸುವುದಾದರೂ ಹೇಗೆ? ಸತ್ಯ– ನ್ಯಾಯಕ್ಕಾಗಿ ಮಕ್ಕಳ ಪರ ಜೀವ ಇರುವವರೆಗೂ ಹೋರಾಡುತ್ತೇವೆ’ ಎಂದರು.

andolanait

Recent Posts

ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…

6 mins ago

ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…

22 mins ago

ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿ ಬಂಧನ

ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…

53 mins ago

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…

1 hour ago

ಓದುಗರ ಪತ್ರ:  ನಂಜನಗೂಡಿನ ಪ್ರಮುಖ ವೃತ್ತಕ್ಕೆ ಬಿ.ವಿ.ಪಂಡಿತರ ಹೆಸರಿಡಿ

ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…

1 hour ago

ಓದುಗರ ಪತ್ರ:  ಭೈರಪ್ಪ ಸ್ಮಾರಕ, ತಿಮ್ಮಕ್ಕ ವಸ್ತು ಸಂಗ್ರಹಾಲಯ ಸ್ವಾಗತಾರ್ಹ

ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…

2 hours ago