ಜಿಲ್ಲೆಗಳು

ಮುರುಘಾ ಶ್ರೀ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಿಂದ ಹಿಂದೆ ಸರಿಯಲು ₹3 ಕೋಟಿ ಆಮಿಷ : ಎಂ.ಎಲ್‌.ಪರಶುರಾಂ

‘ಒಡನಾಡಿ’ ಪರಶುರಾಂ ಆರೋಪ

ಮೈಸೂರು: ‌‘ಬಾಲಕಿಯರ ಮೇಲೆ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ ಲೈಂಗಿಕ ದೌರ್ಜನ್ಯದ ಆರೋಪ ಪ್ರಕರಣದಲ್ಲಿ ಹಿಂದೆ ಸರಿಯುವಂತೆ ಹೇಳಿ ನಮಗೆ ₹ 3 ಕೋಟಿ ಆಮಿಷ ಒಡ್ಡಲಾಗಿತ್ತು. ಸ್ವಾಮೀಜಿ ಅವರನ್ನು ಬಿಟ್ಟು ಬಿಡಿ ಎಂದು ಮಂತ್ರಿ ಮಹೋದಯರೊಬ್ಬರು ಹೇಳಿದ್ದರು’ ಎಂದು ಒಡನಾಡಿ ಸಂಸ್ಥೆ ನಿರ್ದೇಶಕ ಎಂ.ಎಲ್‌.ಪರಶುರಾಂ ಆರೋಪಿಸಿದರು.

ಇಲ್ಲಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಶುಕ್ರವಾರ ‘ವಿದ್ಯಾರ್ಥಿ ಪದಾಧಿಕಾರಿಗಳ ಅಭಿವಿನ್ಯಾಸ’ ಕಾರ್ಯಕ್ರಮದಲ್ಲಿ ಮಾತನಾಡಿ, ‘ಸಂತ್ರಸ್ತ ಮಕ್ಕಳು ಗೊಳೋ ಎಂದು ಒಂದೆಡೆ ಅಳುತ್ತಿದ್ದರೆ, ಇನ್ನೊಂದೆಡೆ ಹಣದ ಆಯ್ಕೆಯನ್ನು ಮುಂದೊಡ್ಡಲಾಗಿತ್ತು. ನಾಚಿಕೆ ಇಲ್ಲದ ನಾಯಕರೊಬ್ಬರು ಸ್ವಾಮೀಜಿ ಪರವಾಗಿ ಮನವಿ ಮಾಡಿದ್ದರು’ ಎಂದರು.

‘3 ರಿಂದ 16 ವರ್ಷದವರೆಗಿನ, ಸುಮಾರು 23 ಹೆಣ್ಣು ಮಕ್ಕಳ ಮೇಲೆ ಮುರುಘಾ ಸ್ವಾಮೀಜಿ ಲೈಂಗಿಕ ದೌರ್ಜನ್ಯ ಎಸಗಿದ್ದರು. 25 ವರ್ಷಗಳಿಂದ ಇಂತಹ ಕೃತ್ಯ ಎಸಗಿದ್ದಾರೆ. ಚಿಕ್ಕ ಹೆಣ್ಣು ಮಗುವೊಂದು ಕಷ್ಟ ಹೇಳಿಕೊಂಡು, ನಮ್ಮ ಬಳಿಗೆ ಬಂದು, ಸ್ವಾಮೀಜಿ ಕಚ್ಚಿದ್ದ ತನ್ನ ಎದೆಭಾಗವನ್ನು ತೋರಿದಾಗ, ತಂದೆ ಸ್ಥಾನದಲ್ಲಿ ನಿಂತು ಮೌನ ವಹಿಸುವುದಾದರೂ ಹೇಗೆ? ಸತ್ಯ– ನ್ಯಾಯಕ್ಕಾಗಿ ಮಕ್ಕಳ ಪರ ಜೀವ ಇರುವವರೆಗೂ ಹೋರಾಡುತ್ತೇವೆ’ ಎಂದರು.

andolanait

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

8 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

17 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago