ಜಿಲ್ಲೆಗಳು

ಮುರುಘಾ ಶ್ರೀ ವಿರುದ್ಧ ಪ್ರಗತಿಪರರ ಪ್ರತಿಭಟನಾ ಮೆರವಣಿಗೆ

ಮೈಸೂರು: ಮುರುಘಾ ಮಠದ ಶಿವಮೂರ್ತಿ ಶರಣರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸರ್ಕಾರ ಸ್ವಾಮೀಜಿಯ ಪರವಾಗಿ ವರ್ತಿಸುತ್ತಿದೆ ಎಂದು ಆರೋಪಿಸಿ ಪ್ರಗತಿಪರರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಶುಕ್ರವಾರ ನಗರದ ನ್ಯಾಯಾಲಯದ ಮುಂಭಾಗ ಜಮಾವಣೆಗೊಂಡ ಪ್ರಗತಿಪರರು, ರೈತರು ಹಾಗೂ ಕನ್ನಡಪರ ಹೋರಾಟಗಾರರು, ಸ್ವಾಮೀಜಿಯನ್ನು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಬಿಡಬಾರದು ಎಂದು ಘೋಷಣೆಗಳನ್ನು ಕೂಗಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಮಕ್ಕಳ ಮೇಲಿನ ಪ್ರಕರಣದಲ್ಲಿ ಸ್ವಾಮೀಜಿಯನ್ನು ಆರೋಪಿಯನ್ನಾಗಿಸುವ ಬದಲು, ಇಂತಹ ಅನಾಗರೀಕ ಪ್ರಕರಣ ಬೆಳಕಿಗೆ ಬರಲು ಕಾರಣರಾದ ಒಡನಾಡಿ ಸೇವಾ ಸಂಸ್ಥೆಯ ಮೇಲೆ ಪೊಲೀಸರು ಸಂಶಯದಿಂದ ನೋಡುತ್ತಿರುವುದು ಅಮಾನವೀಯ ವರ್ತನೆ ಎಂದು ಹೇಳಿದರು.
ಮಕ್ಕಳ ಮೇಲೆ ಅತ್ಯಾಚಾಋವೆಸಗಿರುವ ಸ್ವಾಮೀಜಿಯ ಬಗ್ಗೆ ಮೃದು ಧೋರಣೆ ತೋರುತ್ತಿರುವ ಪೊಲೀಸರು, ಸಂತ್ರಸ್ತ ಮಕ್ಕಳ ಪೋಷಕರನ್ನು ವೇಶ್ಯಾವಾಟಿಕೆಗೆ ಪೂರೈಸುವ ಏಜೆಂಟರಂತೆ ಕಾಣುತ್ತಿರುವುದು ಪೊಲಿಸರ ಕರ್ತವ್ಯ ಮತ್ತು ವೃತ್ತಿ ಘನತೆಯನ್ನು ಸಮಾಜವು ಅನುಮಾನದಿಂದ ನೋಡುವಂತಾಗಿದೆ ಎಂದರು.
ಇವೆಲ್ಲಂಕಿಂತಲೂ ಘೋರವೆಂದರೆ, ಸಂತ್ರಸ್ಥೆಯ ತಾಯಿ ಹಾಗೂ ಮಕ್ಕಳಪರ ನಿಂತ ಆಡಳಿತಾಧಿಕಾರಿ ಬಸವರಾಜು ಅವರನ್ನು ವಶಕ್ಕೆ ಪಡೆದಿದ್ದಾರೆ. ಅವರು ಎಲ್ಲಿದ್ದಾರೆ ಎಂಬುದೇ ಗೊತ್ತಿಲ್ಲ. ಇದು ಕಳವಳಕಾರಿಯಾದ ವಿಚಾರ ಎಂದು ಹೇಳಿದರು.
ನ್ಯಾಯಾಲಯದ ಮುಂಭಾಗದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಆರ್‌ಟಿಒ ವೃತ್ತ, ಜೆಎಲ್‌ಬಿ ರಸ್ತೆ, ರಾಮಸ್ವಾಮಿ ವೃತ್ತ, ಮುಡಾ ವೃತ್ತದ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅಂತ್ಯಗೊಂಡಿತು.
ಹಿರಿಯ ಸಮಾಜವಾದಿ ಪ.ಮಲ್ಲೇಶ್, ಉಗ್ರನರಸಿಂಹೇಗೌಡ, ಸಿ.ಬಸವಲಿಂಗಯ್ಯ, ಚಂದ್ರಶೇಖರ ಮೇಟಿ, ಎಸ್.ರಘು, ಸಂತೋಷ್ ಮುಂತಾದವರು ಭಾಗವಹಿಸಿದ್ದರು.

andolanait

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

7 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

11 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

11 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

11 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

12 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

12 hours ago