ಜಿಲ್ಲೆಗಳು

ಮುರುಘಾ ಶ್ರೀ ವಿರುದ್ಧ ಪ್ರಗತಿಪರರ ಪ್ರತಿಭಟನಾ ಮೆರವಣಿಗೆ

ಮೈಸೂರು: ಮುರುಘಾ ಮಠದ ಶಿವಮೂರ್ತಿ ಶರಣರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸರ್ಕಾರ ಸ್ವಾಮೀಜಿಯ ಪರವಾಗಿ ವರ್ತಿಸುತ್ತಿದೆ ಎಂದು ಆರೋಪಿಸಿ ಪ್ರಗತಿಪರರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಶುಕ್ರವಾರ ನಗರದ ನ್ಯಾಯಾಲಯದ ಮುಂಭಾಗ ಜಮಾವಣೆಗೊಂಡ ಪ್ರಗತಿಪರರು, ರೈತರು ಹಾಗೂ ಕನ್ನಡಪರ ಹೋರಾಟಗಾರರು, ಸ್ವಾಮೀಜಿಯನ್ನು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಬಿಡಬಾರದು ಎಂದು ಘೋಷಣೆಗಳನ್ನು ಕೂಗಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಮಕ್ಕಳ ಮೇಲಿನ ಪ್ರಕರಣದಲ್ಲಿ ಸ್ವಾಮೀಜಿಯನ್ನು ಆರೋಪಿಯನ್ನಾಗಿಸುವ ಬದಲು, ಇಂತಹ ಅನಾಗರೀಕ ಪ್ರಕರಣ ಬೆಳಕಿಗೆ ಬರಲು ಕಾರಣರಾದ ಒಡನಾಡಿ ಸೇವಾ ಸಂಸ್ಥೆಯ ಮೇಲೆ ಪೊಲೀಸರು ಸಂಶಯದಿಂದ ನೋಡುತ್ತಿರುವುದು ಅಮಾನವೀಯ ವರ್ತನೆ ಎಂದು ಹೇಳಿದರು.
ಮಕ್ಕಳ ಮೇಲೆ ಅತ್ಯಾಚಾಋವೆಸಗಿರುವ ಸ್ವಾಮೀಜಿಯ ಬಗ್ಗೆ ಮೃದು ಧೋರಣೆ ತೋರುತ್ತಿರುವ ಪೊಲೀಸರು, ಸಂತ್ರಸ್ತ ಮಕ್ಕಳ ಪೋಷಕರನ್ನು ವೇಶ್ಯಾವಾಟಿಕೆಗೆ ಪೂರೈಸುವ ಏಜೆಂಟರಂತೆ ಕಾಣುತ್ತಿರುವುದು ಪೊಲಿಸರ ಕರ್ತವ್ಯ ಮತ್ತು ವೃತ್ತಿ ಘನತೆಯನ್ನು ಸಮಾಜವು ಅನುಮಾನದಿಂದ ನೋಡುವಂತಾಗಿದೆ ಎಂದರು.
ಇವೆಲ್ಲಂಕಿಂತಲೂ ಘೋರವೆಂದರೆ, ಸಂತ್ರಸ್ಥೆಯ ತಾಯಿ ಹಾಗೂ ಮಕ್ಕಳಪರ ನಿಂತ ಆಡಳಿತಾಧಿಕಾರಿ ಬಸವರಾಜು ಅವರನ್ನು ವಶಕ್ಕೆ ಪಡೆದಿದ್ದಾರೆ. ಅವರು ಎಲ್ಲಿದ್ದಾರೆ ಎಂಬುದೇ ಗೊತ್ತಿಲ್ಲ. ಇದು ಕಳವಳಕಾರಿಯಾದ ವಿಚಾರ ಎಂದು ಹೇಳಿದರು.
ನ್ಯಾಯಾಲಯದ ಮುಂಭಾಗದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಆರ್‌ಟಿಒ ವೃತ್ತ, ಜೆಎಲ್‌ಬಿ ರಸ್ತೆ, ರಾಮಸ್ವಾಮಿ ವೃತ್ತ, ಮುಡಾ ವೃತ್ತದ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅಂತ್ಯಗೊಂಡಿತು.
ಹಿರಿಯ ಸಮಾಜವಾದಿ ಪ.ಮಲ್ಲೇಶ್, ಉಗ್ರನರಸಿಂಹೇಗೌಡ, ಸಿ.ಬಸವಲಿಂಗಯ್ಯ, ಚಂದ್ರಶೇಖರ ಮೇಟಿ, ಎಸ್.ರಘು, ಸಂತೋಷ್ ಮುಂತಾದವರು ಭಾಗವಹಿಸಿದ್ದರು.

andolanait

Recent Posts

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

19 mins ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

20 mins ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

2 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

3 hours ago

ಮುರುಘಾ ಮಠದ ಆಸ್ತಿ ಕೇಸ್:‌ ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್‌

ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ…

3 hours ago

ತಮಿಳುನಾಡು ವಿಧಾನಸಭೆ ಚುನಾವಣೆ: ನಾಳೆ ಮತದಾನಕ್ಕೆ ಸಕಲ ಸಿದ್ಧತೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…

3 hours ago