ಮೈಸೂರು: ಮುರುಘಾ ಮಠದ ಶಿವಮೂರ್ತಿ ಶರಣರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸರ್ಕಾರ ಸ್ವಾಮೀಜಿಯ ಪರವಾಗಿ ವರ್ತಿಸುತ್ತಿದೆ ಎಂದು ಆರೋಪಿಸಿ ಪ್ರಗತಿಪರರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಶುಕ್ರವಾರ ನಗರದ ನ್ಯಾಯಾಲಯದ ಮುಂಭಾಗ ಜಮಾವಣೆಗೊಂಡ ಪ್ರಗತಿಪರರು, ರೈತರು ಹಾಗೂ ಕನ್ನಡಪರ ಹೋರಾಟಗಾರರು, ಸ್ವಾಮೀಜಿಯನ್ನು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಬಿಡಬಾರದು ಎಂದು ಘೋಷಣೆಗಳನ್ನು ಕೂಗಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಮಕ್ಕಳ ಮೇಲಿನ ಪ್ರಕರಣದಲ್ಲಿ ಸ್ವಾಮೀಜಿಯನ್ನು ಆರೋಪಿಯನ್ನಾಗಿಸುವ ಬದಲು, ಇಂತಹ ಅನಾಗರೀಕ ಪ್ರಕರಣ ಬೆಳಕಿಗೆ ಬರಲು ಕಾರಣರಾದ ಒಡನಾಡಿ ಸೇವಾ ಸಂಸ್ಥೆಯ ಮೇಲೆ ಪೊಲೀಸರು ಸಂಶಯದಿಂದ ನೋಡುತ್ತಿರುವುದು ಅಮಾನವೀಯ ವರ್ತನೆ ಎಂದು ಹೇಳಿದರು.
ಮಕ್ಕಳ ಮೇಲೆ ಅತ್ಯಾಚಾಋವೆಸಗಿರುವ ಸ್ವಾಮೀಜಿಯ ಬಗ್ಗೆ ಮೃದು ಧೋರಣೆ ತೋರುತ್ತಿರುವ ಪೊಲೀಸರು, ಸಂತ್ರಸ್ತ ಮಕ್ಕಳ ಪೋಷಕರನ್ನು ವೇಶ್ಯಾವಾಟಿಕೆಗೆ ಪೂರೈಸುವ ಏಜೆಂಟರಂತೆ ಕಾಣುತ್ತಿರುವುದು ಪೊಲಿಸರ ಕರ್ತವ್ಯ ಮತ್ತು ವೃತ್ತಿ ಘನತೆಯನ್ನು ಸಮಾಜವು ಅನುಮಾನದಿಂದ ನೋಡುವಂತಾಗಿದೆ ಎಂದರು.
ಇವೆಲ್ಲಂಕಿಂತಲೂ ಘೋರವೆಂದರೆ, ಸಂತ್ರಸ್ಥೆಯ ತಾಯಿ ಹಾಗೂ ಮಕ್ಕಳಪರ ನಿಂತ ಆಡಳಿತಾಧಿಕಾರಿ ಬಸವರಾಜು ಅವರನ್ನು ವಶಕ್ಕೆ ಪಡೆದಿದ್ದಾರೆ. ಅವರು ಎಲ್ಲಿದ್ದಾರೆ ಎಂಬುದೇ ಗೊತ್ತಿಲ್ಲ. ಇದು ಕಳವಳಕಾರಿಯಾದ ವಿಚಾರ ಎಂದು ಹೇಳಿದರು.
ನ್ಯಾಯಾಲಯದ ಮುಂಭಾಗದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಆರ್ಟಿಒ ವೃತ್ತ, ಜೆಎಲ್ಬಿ ರಸ್ತೆ, ರಾಮಸ್ವಾಮಿ ವೃತ್ತ, ಮುಡಾ ವೃತ್ತದ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅಂತ್ಯಗೊಂಡಿತು.
ಹಿರಿಯ ಸಮಾಜವಾದಿ ಪ.ಮಲ್ಲೇಶ್, ಉಗ್ರನರಸಿಂಹೇಗೌಡ, ಸಿ.ಬಸವಲಿಂಗಯ್ಯ, ಚಂದ್ರಶೇಖರ ಮೇಟಿ, ಎಸ್.ರಘು, ಸಂತೋಷ್ ಮುಂತಾದವರು ಭಾಗವಹಿಸಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…