ಜಿಲ್ಲೆಗಳು

ಮುರುಘಾ ಶ್ರೀ ಪ್ರಕರಣ: ಸಂತ್ರಸ್ತರಿಗೆ ಪುನರ್ವಸತಿ, ತಾಯಿಗೆ ಕೆಲಸ ನೀಡಲು ನಿರ್ಧರಿಸಿ ಪತ್ರ

ಮೈಸೂರು: ಮುರುಘ ಶ್ರೀ ಪ್ರಕರಣದ ಸಂತ್ರಸ್ತ ಬಾಲಕಿಯರ ತಾಯಿಗೆ ಕೆಲಸ ನೀಡಲು, ಸಂತ್ರಸ್ತ ಬಾಲಕಿಯರಿಗೆ ಪುನರ್ವಸತಿ ಕಲ್ಪಿಸಲು ನಿರ್ಧರಿಸಲಾಗಿದ್ದು, ಈ ಸಂಬಂಧ ಸಂತ್ರಸ್ತರಿಗೆ ಮನವರಿಕೆ ಮಾಡಿಕೊಡುವಂತೆ ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕರು ಮೈಸೂರು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

ಚಿತ್ರದುರ್ಗ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯವರು ಸಂತ್ರಸ್ತ ತಾಯಿಯ ಮನವಿಯನ್ನು ಪಡೆದು, ಅಲ್ಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಶಿಫಾರಸ್ಸು ಮಾದ್ದಾರೆ. ಅವರ ಪತ್ರವನ್ನಾಧರಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತ ಬಾಲಕಿಯರು ಮತ್ತು ಅವರ ತಾಯಿಗೆ ಮನವರಿಕೆ ಮಾಡಿಕೊಡುವಂತೆ ಮೈಸೂರಿನ ಮಕ್ಕಳ ಕಲ್ಯಾಣ ಸಮಿತಿಗೆ ಪತ್ರ ಬರೆದಿದ್ದಾರೆ.

ಬಾಲಕಿಯರಿಗೆ ಚಿತ್ರದುರ್ಗದ ವಸತಿ ಶಾಲೆಯಲ್ಲಿ ಶಿಕ್ಷಣ ನೀಡುವುದು ಮತ್ತು ಅವರ ತಾಯಿಗೆ ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡುವ ಸಂಬಂಧ ತಿರ್ಮಾನಿಸಲಾಗಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಈ ಸಂಬಂಧ ಪ್ರತಿಕ್ರಿಯಿಸಿರುವ ಒಡನಾಡಿ ಸೇವಾ ಸಂಸ್ಥೆಯ ನಿರ್ದೇಶಕ ಸ್ಟ್ಯಾನ್ಲಿ, ದೌರ್ಜನ್ಯಕ್ಕೊಳಗಾಗಿದ್ದ ಬಾಲಕಿಯರ ತಾಯಿಯ ಮೇಲೆ ಸರ್ಕಾರವು ಇದ್ದಕ್ಕಿದ್ದಂತೆ ಅನುಕಂಪ ಹಾಗೂ ಕರುಣೆಯನ್ನು ತೋರುತ್ತಿದೆ. ಮೇಲ್ನೋಟಕ್ಕೆ ಇದೊಂದು ಮಾನವೀಯ ನಡೆಯಂತೆ ಕಾಣುವುದು ಸಹಜ. ಸರ್ಕಾರ ಈ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ವಸತಿಯುಕ್ತ ಶಿಕ್ಷಣವೋ, ಹಾಸ್ಟೆಲ್ ವ್ಯವಸ್ಥೆಯೋ ಮಾಡಿದ್ದಾದಲ್ಲಿ, ಅವರ ಘನತೆಗೆ ಜೀವನಕ್ಕೆ ದಾರಿ ತೋರಲು ತಾಯಿಗೊಂದು ಉದ್ಯೋಗ ನೀಡುವುದಾದಲ್ಲಿ ಅದನ್ನು ಸ್ವಾಗತಿಸೋಣ. ಆದರೆ, ಷಡ್ಯಂತ್ರ, ಮೋಸ ಹಾಗೂ ಅಪ್ರಾಪ್ತರನ್ನು ಕಾನೂನು ಬಾಹಿರ ಚಟುವಟಿಕೆಗಳಿಗಾಗಿ ರವಾನಿಸಿದ ಆರೋಪದಡಿ ಈ ತಾಯಿಯನ್ನು ೨ನೇ ಆರೋಪಿ ಮಾಡಿ, ಚಿತ್ರದುರ್ಗ ಜಿಲ್ಲಾ ಪೊಲೀಸರು ಒಂದು ಪ್ರಕರಣವನ್ನು ದಾಖಲಿಸಿದ್ದಾರೆ. ಹೀಗಿರುವಾಗ ಆರೋಪಿ ಎನಿಸಿಕೊಂಡಿರುವ ತಾಯಿಗೆ ಸಂತ್ರಸ್ತೆಗೆ ನೀಡಬಹುದಾದ ಅನುಕಂಪ ಆಧಾರಿತ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಮುಂದೆ ಬಂದಿರುವುದು ಕಾನೂನು ತಿಳಿದವರ ಮನದಲ್ಲಿ ಸಂದೇಹ ಮೂಡಿಸದೇ ಇರದು. ಇದೊಂದು ಹುನ್ನಾರವಾಗಿದೆ. ಬಾಲಕಿಯರಿಗೆ ಪುನರ್ವಸತಿ ಕಲ್ಪಿಸುವುದಾದರೆ ಮತ್ತು ತಾಯಿಗೆ ಉದ್ಯೋಗ ನೀಡುವುದಾದರೆ, ಮೈಸೂರಿನಲ್ಲಿ ಕಲ್ಪಿಸಲಿ ಎಂದು ತಿಳಿಸಿದ್ದಾರೆ.

 

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

13 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago