ಹನೂರು: ಮಠಗಳು ದೇವಸ್ಥಾನಗಳು ಮನುಷ್ಯನ ಮಾನಸಿಕ ನೆಮ್ಮದಿ ಮತ್ತು ಸಮಸ್ಯೆಗಳ ಪರಿಹಾರ ಕೇಂದ್ರಗಳಾಗಿವೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಗಳು ತಿಳಿಸಿದರು.
ತಾಲ್ಲೂಕಿನ ಒಡೆಯರ ಪಾಳ್ಯ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗುರುಮಲ್ಲೇಶ್ವರ ಬಿಕ್ಷದ ಮಠ ಸಭಾಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಿಜೆಪಿ ಮುಖಂಡ ನಿಶಾಂತ್ ಮಾತನಾಡಿ ಕೆಲವರು ಸಮಾಜ ಸೇವೆಯನ್ನು ಏಕೆ ನೂರಿನಲ್ಲಿ ಮಾಡಬೇಕು ಬೆಂಗಳೂರಿನಲ್ಲಿ ಮಾಡಬಹುದಲ್ಲ ಎಂದು ಪ್ರಶ್ನಿಸಿದ್ದಾರೆ. ಅಭಿಮಾನದ ಜನರು ಇರುವ ಕಡೆ ನಮ್ಮ ಸೇವೆ ಸಲ್ಲಬೇಕು. ಈ ಭಾಗದ ಜನರಲ್ಲಿ ಕಾಯಕ ಮತ್ತು ದಾಸೋಹ ಕಲ್ಪನೆ ಶಾಶ್ವತವಾಗಿದೆ, ನಮ್ಮ ಮೂಲಭೂತ ಸೌಕರ್ಯ ನಮ್ಮ ಹಕ್ಕು ಅದನ್ನು ಕೇಳಿ ಪಡೆದುಕೊಳ್ಳಬೇಕು. ನಮ್ಮ ಮೇಲೆ ಇಷ್ಟೊಂದು ಅಭಿಮಾನ ಪೂರ್ವಕವಾಗಿ ಹೊಂದಿರುವ ನಿಮ್ಮೆಲ್ಲರಿಗೂ ನಾನು ಸದಾ ಚಿರಋಣಿಯಾಗಿರುತ್ತೇನೆ, ರಾಜ್ಯದ 224 ಕ್ಷೇತ್ರಗಳ ಪೈಕಿ ಹನೂರು ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಓದಿಗೆ, ಊಟಕ್ಕೆ ಆಸ್ಪತ್ರೆಗಳಿಗೆ ಆಹಾಕಾರ ಉಂಟಾಗಿದೆ, ರಾಜ್ಯದಲ್ಲಿ ಇಂತಹ ಕ್ಷೇತ್ರವನ್ನು ನಾನೆಂದು ನೋಡಿಲ್ಲ ಹನೂರು ಕ್ಷೇತ್ರದ ಅಭಿವೃದ್ಧಿಯ ಸಂಕಲ್ಪ ದೊಂದಿಗೆ ನನ್ನ ಕೈಲಾದ ಮಟ್ಟಿಗೆ ಸೇವೆ ಮಾಡುತ್ತಿದ್ದೇನೆ ಹನೂರು ಕ್ಷೇತ್ರದ ಜನತೆ ಮುಂದಿನ ದಿನದಲ್ಲಿ ನನ್ನ ಕೈ ಬಲಪಡಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ದೇವನೂರು ದಾಸೋಹ ಮಠದ ಮಹಾಂತ ಸ್ವಾಮಿಗಳು, ಮೈಸೂರು ಕುದುರು ಮಠದ ಗುರು ಶಾಂತ ಸ್ವಾಮಿಗಳು, ಕುಂದೂರು ಮಠದ ಶರತ್ ಚಂದ್ರ ಸ್ವಾಮಿಗಳು, ನಿಶಾಂತ್ ರವರ ತಾಯಿ ಮಂಜುಳ ಮುಖಂಡರಾದ ವೀರಮಾಧು, ತಾಪಂ ಮಾಜಿ ಅಧ್ಯಕ್ಷ ಮುರುಡೇಶ್ವರ ಸ್ವಾಮಿ, ಮುಖಂಡರುಗಳಾದ ಗೌಡ್ರು ಸೋಮಣ್ಣ, ಸದಾನಂದ ಮೂರ್ತಿ, ಗುರುಮಲ್ಲಪ್ಪ,ತೇಜು, ಸಚಿನ್, ಚೇತನ್, ಕಣ್ಣಪ್ಪ, ಅಜ್ಜಿಪುರ ಚಿದಾನಂದ ಮೂರ್ತಿ ಸೇರಿದಂತೆ ಇನ್ನಿತರರು ಹಾಜರಿದ್ದರು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…