ಹನೂರು: ಮಠಗಳು ದೇವಸ್ಥಾನಗಳು ಮನುಷ್ಯನ ಮಾನಸಿಕ ನೆಮ್ಮದಿ ಮತ್ತು ಸಮಸ್ಯೆಗಳ ಪರಿಹಾರ ಕೇಂದ್ರಗಳಾಗಿವೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಗಳು ತಿಳಿಸಿದರು.
ತಾಲ್ಲೂಕಿನ ಒಡೆಯರ ಪಾಳ್ಯ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗುರುಮಲ್ಲೇಶ್ವರ ಬಿಕ್ಷದ ಮಠ ಸಭಾಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಿಜೆಪಿ ಮುಖಂಡ ನಿಶಾಂತ್ ಮಾತನಾಡಿ ಕೆಲವರು ಸಮಾಜ ಸೇವೆಯನ್ನು ಏಕೆ ನೂರಿನಲ್ಲಿ ಮಾಡಬೇಕು ಬೆಂಗಳೂರಿನಲ್ಲಿ ಮಾಡಬಹುದಲ್ಲ ಎಂದು ಪ್ರಶ್ನಿಸಿದ್ದಾರೆ. ಅಭಿಮಾನದ ಜನರು ಇರುವ ಕಡೆ ನಮ್ಮ ಸೇವೆ ಸಲ್ಲಬೇಕು. ಈ ಭಾಗದ ಜನರಲ್ಲಿ ಕಾಯಕ ಮತ್ತು ದಾಸೋಹ ಕಲ್ಪನೆ ಶಾಶ್ವತವಾಗಿದೆ, ನಮ್ಮ ಮೂಲಭೂತ ಸೌಕರ್ಯ ನಮ್ಮ ಹಕ್ಕು ಅದನ್ನು ಕೇಳಿ ಪಡೆದುಕೊಳ್ಳಬೇಕು. ನಮ್ಮ ಮೇಲೆ ಇಷ್ಟೊಂದು ಅಭಿಮಾನ ಪೂರ್ವಕವಾಗಿ ಹೊಂದಿರುವ ನಿಮ್ಮೆಲ್ಲರಿಗೂ ನಾನು ಸದಾ ಚಿರಋಣಿಯಾಗಿರುತ್ತೇನೆ, ರಾಜ್ಯದ 224 ಕ್ಷೇತ್ರಗಳ ಪೈಕಿ ಹನೂರು ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಓದಿಗೆ, ಊಟಕ್ಕೆ ಆಸ್ಪತ್ರೆಗಳಿಗೆ ಆಹಾಕಾರ ಉಂಟಾಗಿದೆ, ರಾಜ್ಯದಲ್ಲಿ ಇಂತಹ ಕ್ಷೇತ್ರವನ್ನು ನಾನೆಂದು ನೋಡಿಲ್ಲ ಹನೂರು ಕ್ಷೇತ್ರದ ಅಭಿವೃದ್ಧಿಯ ಸಂಕಲ್ಪ ದೊಂದಿಗೆ ನನ್ನ ಕೈಲಾದ ಮಟ್ಟಿಗೆ ಸೇವೆ ಮಾಡುತ್ತಿದ್ದೇನೆ ಹನೂರು ಕ್ಷೇತ್ರದ ಜನತೆ ಮುಂದಿನ ದಿನದಲ್ಲಿ ನನ್ನ ಕೈ ಬಲಪಡಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ದೇವನೂರು ದಾಸೋಹ ಮಠದ ಮಹಾಂತ ಸ್ವಾಮಿಗಳು, ಮೈಸೂರು ಕುದುರು ಮಠದ ಗುರು ಶಾಂತ ಸ್ವಾಮಿಗಳು, ಕುಂದೂರು ಮಠದ ಶರತ್ ಚಂದ್ರ ಸ್ವಾಮಿಗಳು, ನಿಶಾಂತ್ ರವರ ತಾಯಿ ಮಂಜುಳ ಮುಖಂಡರಾದ ವೀರಮಾಧು, ತಾಪಂ ಮಾಜಿ ಅಧ್ಯಕ್ಷ ಮುರುಡೇಶ್ವರ ಸ್ವಾಮಿ, ಮುಖಂಡರುಗಳಾದ ಗೌಡ್ರು ಸೋಮಣ್ಣ, ಸದಾನಂದ ಮೂರ್ತಿ, ಗುರುಮಲ್ಲಪ್ಪ,ತೇಜು, ಸಚಿನ್, ಚೇತನ್, ಕಣ್ಣಪ್ಪ, ಅಜ್ಜಿಪುರ ಚಿದಾನಂದ ಮೂರ್ತಿ ಸೇರಿದಂತೆ ಇನ್ನಿತರರು ಹಾಜರಿದ್ದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…