ಜಿಲ್ಲೆಗಳು

ಮಠ-ದೇವಾಲಯಗಳು ಮಾನಸಿಕ ನೆಮ್ಮದಿಯ ಕೇಂದ್ರಗಳಾಗಿವೆ : ಸುತ್ತೂರು ದೇಶಿಕೇಂದ್ರ ಸ್ವಾಮೀಜಿ

ಹನೂರು: ಮಠಗಳು ದೇವಸ್ಥಾನಗಳು ಮನುಷ್ಯನ ಮಾನಸಿಕ ನೆಮ್ಮದಿ ಮತ್ತು ಸಮಸ್ಯೆಗಳ ಪರಿಹಾರ ಕೇಂದ್ರಗಳಾಗಿವೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಗಳು ತಿಳಿಸಿದರು.

ತಾಲ್ಲೂಕಿನ ಒಡೆಯರ ಪಾಳ್ಯ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗುರುಮಲ್ಲೇಶ್ವರ ಬಿಕ್ಷದ ಮಠ ಸಭಾಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಭಾಭವನಗಳನ್ನು ಮದುವೆ ಕಾರ್ಯಗಳ ಜೊತೆಗೆ ಧಾರ್ಮಿಕ ಕಾರ್ಯಗಳಿಗೂ ಬಳಸಿಕೊಳ್ಳುವ ಮೂಲಕ ಸಾರ್ಥಕತೆ ಮರೆಯಬೇಕು. ಭಾರತೀಯ ಸಂಸ್ಕೃತಿಯಲ್ಲಿ ಒಬ್ಬ ತಾಯಿಗೆ ತನಗಿಂತ ಮಗುವೇ ಮುಖ್ಯ. ಸೇವೆಯಲ್ಲಿ ತೊಡಗಿರುವ ನಿಶಾಂತ್ ರವರು ಅದನ್ನು ಮೀರಿ ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದಾರೆ. ದೀಪ ಬೆಳಗಲು ಅಗತ್ಯವಿರುವಷ್ಟೇ ಎಣ್ಣೆ ಹಾಕಬೇಕು. ಹಾಗೆ ಸಮಾಜದ ಉನ್ನತಿಗೆ ಅಗತ್ಯ ಸೇವೆ ಮುಖ್ಯ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಲು ಮುಂದಾಗಬೇಕು. ಇಲ್ಲಿನ ಜನರು ಧರ್ಮ, ಸಂಸ್ಕೃತಿ ಮತ್ತು ಸಂಸ್ಕಾರಕ್ಕೆ ಒಡೆಯರಾಗಿದ್ದಾರೆ ಎಂದು ಆಶೀರ್ವಚನ ನೀಡಿದರು.

ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ ಮಲೆ ಸೀಮೆಯ ಪ್ರಾಂತ್ಯ ಜಾತಿ ಧರ್ಮಗಳ ಭಾವೈಕ್ಯತೆ ಹೊಂದಿರುವ ಮತ್ತು ಧಾರ್ಮಿಕ ಭಕ್ತಿಯಲ್ಲಿ ಶ್ರೀಮಂತಿಕೆ ಇರುವ ಗ್ರಾಮ ಒಡೆಯರ ಪಾಳ್ಯ. ಧಾರ್ಮಿಕ ಪರಂಪರೆಯ ಅಸ್ತಿತ್ವಕ್ಕೆ ನಮ್ಮೆಲ್ಲರ ಜವಾಬ್ದಾರಿ ಮುಖ್ಯ ಕಾಯಕವೇ ಕೈಲಾಸ ಎನ್ನುವ ಬಸವ ತತ್ವದ ಅನುಯಾಯಿಗಳು ಈ ಭಾಗದವರಾಗಿದ್ದಾರೆ. ಇಂತಹ ನೆಲೆಯಲ್ಲಿ ಅಪೂರ್ಣಗೊಂಡಿರುವ ಗುರುಮಲ್ಲೇಶ್ವರ ಸಭಾಭವನವನ್ನು ಪೂರ್ಣಗೊಳಿಸಿದ ಕೀರ್ತಿ ನಿಶಾಂತ್ ರವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ಬಿಜೆಪಿ ಮುಖಂಡ ನಿಶಾಂತ್ ಮಾತನಾಡಿ ಕೆಲವರು ಸಮಾಜ ಸೇವೆಯನ್ನು ಏಕೆ ನೂರಿನಲ್ಲಿ ಮಾಡಬೇಕು ಬೆಂಗಳೂರಿನಲ್ಲಿ ಮಾಡಬಹುದಲ್ಲ ಎಂದು ಪ್ರಶ್ನಿಸಿದ್ದಾರೆ. ಅಭಿಮಾನದ ಜನರು ಇರುವ ಕಡೆ ನಮ್ಮ ಸೇವೆ ಸಲ್ಲಬೇಕು. ಈ ಭಾಗದ ಜನರಲ್ಲಿ ಕಾಯಕ ಮತ್ತು ದಾಸೋಹ ಕಲ್ಪನೆ ಶಾಶ್ವತವಾಗಿದೆ, ನಮ್ಮ ಮೂಲಭೂತ ಸೌಕರ್ಯ ನಮ್ಮ ಹಕ್ಕು ಅದನ್ನು ಕೇಳಿ ಪಡೆದುಕೊಳ್ಳಬೇಕು. ನಮ್ಮ ಮೇಲೆ ಇಷ್ಟೊಂದು ಅಭಿಮಾನ ಪೂರ್ವಕವಾಗಿ ಹೊಂದಿರುವ ನಿಮ್ಮೆಲ್ಲರಿಗೂ ನಾನು ಸದಾ ಚಿರಋಣಿಯಾಗಿರುತ್ತೇನೆ, ರಾಜ್ಯದ 224 ಕ್ಷೇತ್ರಗಳ ಪೈಕಿ ಹನೂರು ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಓದಿಗೆ, ಊಟಕ್ಕೆ ಆಸ್ಪತ್ರೆಗಳಿಗೆ ಆಹಾಕಾರ ಉಂಟಾಗಿದೆ, ರಾಜ್ಯದಲ್ಲಿ ಇಂತಹ ಕ್ಷೇತ್ರವನ್ನು ನಾನೆಂದು ನೋಡಿಲ್ಲ ಹನೂರು ಕ್ಷೇತ್ರದ ಅಭಿವೃದ್ಧಿಯ ಸಂಕಲ್ಪ ದೊಂದಿಗೆ ನನ್ನ ಕೈಲಾದ ಮಟ್ಟಿಗೆ ಸೇವೆ ಮಾಡುತ್ತಿದ್ದೇನೆ ಹನೂರು ಕ್ಷೇತ್ರದ ಜನತೆ ಮುಂದಿನ ದಿನದಲ್ಲಿ ನನ್ನ ಕೈ ಬಲಪಡಿಸಬೇಕೆಂದು ಮನವಿ ಮಾಡಿದರು.

ಮುಖಂಡ ಪೊನ್ನಾಚಿ ಮಹದೇವ ಸ್ವಾಮಿ ಮಾತನಾಡಿ ಹನೂರು ಕ್ಷೇತ್ರಕ್ಕೆ ಸಮಾಜಸೇವಕ ನಿಶಾಂತ್ ಬಂದಂತಹ ಕಡಿಮೆ ಅವಧಿಯಲ್ಲಿಯೇ ಉತ್ತಮ ಸೇವೆ ನೀಡಿದ್ದಾರೆ. ಕ್ಷೇತ್ರ ವ್ಯಾಪ್ತಿಯ ಸುಮಾರು 140 ದೇವಸ್ಥಾನಗಳ ಅಭಿವೃದ್ಧಿ, 25 ಮಠಗಳ ಜೀರ್ಣೋದ್ಧಾರ, 30 ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಕೊತ್ತನೂರು ಗ್ರಾಮದಲ್ಲಿ 30 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣ. ದೊಡ್ಡಿಂಡುವಾಡಿ ಪರಿಶಿಷ್ಟ ಸಮುದಾಯದವರಿಗೆ 30 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಿವೇಶನ ಖರೀದಿ, ಕಾಮಗೆರೆ ಗ್ರಾಮದ ಆದಿಜಾಂಬವ ಸಮುದಾಯದವರಿಗೆ ಕಂಡಾಯ ನಿರ್ಮಾಣಕ್ಕಾಗಿ 5 ಕೆ.ಜಿ ಬೆಳ್ಳಿ ಖರೀದಿ ಸೇರಿದಂತೆ ಸುಮಾರು 30 ಕೋಟಿಗೂ ಅಧಿಕ ಹಣವನ್ನು ಹನೂರು ಕ್ಷೇತ್ರದ ಅಭಿವೃದ್ಧಿಗೆ ತೊಡಗಿದ್ದಾರೆ ಎಂದು ತಿಳಿಸಿದರು. ಜೊತೆಗೆ ಶ್ರೀ ಗುರು ಮಲ್ಲೇಶ್ವರ ಸಭಾಭವನಕ್ಕೆ ನಿವೇಶನ ನೀಡಿದ ಕುಟುಂಬಸ್ಥರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ದೇವನೂರು ದಾಸೋಹ ಮಠದ ಮಹಾಂತ ಸ್ವಾಮಿಗಳು, ಮೈಸೂರು ಕುದುರು ಮಠದ ಗುರು ಶಾಂತ ಸ್ವಾಮಿಗಳು, ಕುಂದೂರು ಮಠದ ಶರತ್ ಚಂದ್ರ ಸ್ವಾಮಿಗಳು, ನಿಶಾಂತ್ ರವರ ತಾಯಿ ಮಂಜುಳ ಮುಖಂಡರಾದ ವೀರಮಾಧು, ತಾಪಂ ಮಾಜಿ ಅಧ್ಯಕ್ಷ ಮುರುಡೇಶ್ವರ ಸ್ವಾಮಿ, ಮುಖಂಡರುಗಳಾದ ಗೌಡ್ರು ಸೋಮಣ್ಣ, ಸದಾನಂದ ಮೂರ್ತಿ, ಗುರುಮಲ್ಲಪ್ಪ,ತೇಜು, ಸಚಿನ್, ಚೇತನ್, ಕಣ್ಣಪ್ಪ, ಅಜ್ಜಿಪುರ ಚಿದಾನಂದ ಮೂರ್ತಿ ಸೇರಿದಂತೆ ಇನ್ನಿತರರು ಹಾಜರಿದ್ದರು.

andolanait

Recent Posts

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

12 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

8 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

9 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

15 hours ago

ಸೆಟ್ಟೇರಿತು ರಮೇಶ್ ಅರವಿಂದ್, ಗಣೇಶ್ ಹೊಸ ಸಿನಿಮಾ …

ರಮೇಶ್‍ ಅರವಿಂದ್ ಮತ್ತು ಗಣೇಶ್‍ ಒಟ್ಟಿಗೆ ನಟಿಸುತ್ತಾರೆ ಎಂಬುದು ಕಳೆದ ವರ್ಷದ ಸುದ್ದಿ. ‘ಇನ್‍ಸ್ಪೆಕ್ಟರ್‍ ವಿಕ್ರಂ’, ‘ಮಾನ್ಸೂನ್‍ ರಾಗ’, ‘ರಂಗನಾಯಕ’…

15 hours ago