ಹನೂರು: ಮಠಗಳು ದೇವಸ್ಥಾನಗಳು ಮನುಷ್ಯನ ಮಾನಸಿಕ ನೆಮ್ಮದಿ ಮತ್ತು ಸಮಸ್ಯೆಗಳ ಪರಿಹಾರ ಕೇಂದ್ರಗಳಾಗಿವೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಗಳು ತಿಳಿಸಿದರು.
ತಾಲ್ಲೂಕಿನ ಒಡೆಯರ ಪಾಳ್ಯ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗುರುಮಲ್ಲೇಶ್ವರ ಬಿಕ್ಷದ ಮಠ ಸಭಾಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಿಜೆಪಿ ಮುಖಂಡ ನಿಶಾಂತ್ ಮಾತನಾಡಿ ಕೆಲವರು ಸಮಾಜ ಸೇವೆಯನ್ನು ಏಕೆ ನೂರಿನಲ್ಲಿ ಮಾಡಬೇಕು ಬೆಂಗಳೂರಿನಲ್ಲಿ ಮಾಡಬಹುದಲ್ಲ ಎಂದು ಪ್ರಶ್ನಿಸಿದ್ದಾರೆ. ಅಭಿಮಾನದ ಜನರು ಇರುವ ಕಡೆ ನಮ್ಮ ಸೇವೆ ಸಲ್ಲಬೇಕು. ಈ ಭಾಗದ ಜನರಲ್ಲಿ ಕಾಯಕ ಮತ್ತು ದಾಸೋಹ ಕಲ್ಪನೆ ಶಾಶ್ವತವಾಗಿದೆ, ನಮ್ಮ ಮೂಲಭೂತ ಸೌಕರ್ಯ ನಮ್ಮ ಹಕ್ಕು ಅದನ್ನು ಕೇಳಿ ಪಡೆದುಕೊಳ್ಳಬೇಕು. ನಮ್ಮ ಮೇಲೆ ಇಷ್ಟೊಂದು ಅಭಿಮಾನ ಪೂರ್ವಕವಾಗಿ ಹೊಂದಿರುವ ನಿಮ್ಮೆಲ್ಲರಿಗೂ ನಾನು ಸದಾ ಚಿರಋಣಿಯಾಗಿರುತ್ತೇನೆ, ರಾಜ್ಯದ 224 ಕ್ಷೇತ್ರಗಳ ಪೈಕಿ ಹನೂರು ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಓದಿಗೆ, ಊಟಕ್ಕೆ ಆಸ್ಪತ್ರೆಗಳಿಗೆ ಆಹಾಕಾರ ಉಂಟಾಗಿದೆ, ರಾಜ್ಯದಲ್ಲಿ ಇಂತಹ ಕ್ಷೇತ್ರವನ್ನು ನಾನೆಂದು ನೋಡಿಲ್ಲ ಹನೂರು ಕ್ಷೇತ್ರದ ಅಭಿವೃದ್ಧಿಯ ಸಂಕಲ್ಪ ದೊಂದಿಗೆ ನನ್ನ ಕೈಲಾದ ಮಟ್ಟಿಗೆ ಸೇವೆ ಮಾಡುತ್ತಿದ್ದೇನೆ ಹನೂರು ಕ್ಷೇತ್ರದ ಜನತೆ ಮುಂದಿನ ದಿನದಲ್ಲಿ ನನ್ನ ಕೈ ಬಲಪಡಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ದೇವನೂರು ದಾಸೋಹ ಮಠದ ಮಹಾಂತ ಸ್ವಾಮಿಗಳು, ಮೈಸೂರು ಕುದುರು ಮಠದ ಗುರು ಶಾಂತ ಸ್ವಾಮಿಗಳು, ಕುಂದೂರು ಮಠದ ಶರತ್ ಚಂದ್ರ ಸ್ವಾಮಿಗಳು, ನಿಶಾಂತ್ ರವರ ತಾಯಿ ಮಂಜುಳ ಮುಖಂಡರಾದ ವೀರಮಾಧು, ತಾಪಂ ಮಾಜಿ ಅಧ್ಯಕ್ಷ ಮುರುಡೇಶ್ವರ ಸ್ವಾಮಿ, ಮುಖಂಡರುಗಳಾದ ಗೌಡ್ರು ಸೋಮಣ್ಣ, ಸದಾನಂದ ಮೂರ್ತಿ, ಗುರುಮಲ್ಲಪ್ಪ,ತೇಜು, ಸಚಿನ್, ಚೇತನ್, ಕಣ್ಣಪ್ಪ, ಅಜ್ಜಿಪುರ ಚಿದಾನಂದ ಮೂರ್ತಿ ಸೇರಿದಂತೆ ಇನ್ನಿತರರು ಹಾಜರಿದ್ದರು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…