ಹನೂರು: ಮಠಗಳು ದೇವಸ್ಥಾನಗಳು ಮನುಷ್ಯನ ಮಾನಸಿಕ ನೆಮ್ಮದಿ ಮತ್ತು ಸಮಸ್ಯೆಗಳ ಪರಿಹಾರ ಕೇಂದ್ರಗಳಾಗಿವೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಗಳು ತಿಳಿಸಿದರು.
ತಾಲ್ಲೂಕಿನ ಒಡೆಯರ ಪಾಳ್ಯ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗುರುಮಲ್ಲೇಶ್ವರ ಬಿಕ್ಷದ ಮಠ ಸಭಾಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಿಜೆಪಿ ಮುಖಂಡ ನಿಶಾಂತ್ ಮಾತನಾಡಿ ಕೆಲವರು ಸಮಾಜ ಸೇವೆಯನ್ನು ಏಕೆ ನೂರಿನಲ್ಲಿ ಮಾಡಬೇಕು ಬೆಂಗಳೂರಿನಲ್ಲಿ ಮಾಡಬಹುದಲ್ಲ ಎಂದು ಪ್ರಶ್ನಿಸಿದ್ದಾರೆ. ಅಭಿಮಾನದ ಜನರು ಇರುವ ಕಡೆ ನಮ್ಮ ಸೇವೆ ಸಲ್ಲಬೇಕು. ಈ ಭಾಗದ ಜನರಲ್ಲಿ ಕಾಯಕ ಮತ್ತು ದಾಸೋಹ ಕಲ್ಪನೆ ಶಾಶ್ವತವಾಗಿದೆ, ನಮ್ಮ ಮೂಲಭೂತ ಸೌಕರ್ಯ ನಮ್ಮ ಹಕ್ಕು ಅದನ್ನು ಕೇಳಿ ಪಡೆದುಕೊಳ್ಳಬೇಕು. ನಮ್ಮ ಮೇಲೆ ಇಷ್ಟೊಂದು ಅಭಿಮಾನ ಪೂರ್ವಕವಾಗಿ ಹೊಂದಿರುವ ನಿಮ್ಮೆಲ್ಲರಿಗೂ ನಾನು ಸದಾ ಚಿರಋಣಿಯಾಗಿರುತ್ತೇನೆ, ರಾಜ್ಯದ 224 ಕ್ಷೇತ್ರಗಳ ಪೈಕಿ ಹನೂರು ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಓದಿಗೆ, ಊಟಕ್ಕೆ ಆಸ್ಪತ್ರೆಗಳಿಗೆ ಆಹಾಕಾರ ಉಂಟಾಗಿದೆ, ರಾಜ್ಯದಲ್ಲಿ ಇಂತಹ ಕ್ಷೇತ್ರವನ್ನು ನಾನೆಂದು ನೋಡಿಲ್ಲ ಹನೂರು ಕ್ಷೇತ್ರದ ಅಭಿವೃದ್ಧಿಯ ಸಂಕಲ್ಪ ದೊಂದಿಗೆ ನನ್ನ ಕೈಲಾದ ಮಟ್ಟಿಗೆ ಸೇವೆ ಮಾಡುತ್ತಿದ್ದೇನೆ ಹನೂರು ಕ್ಷೇತ್ರದ ಜನತೆ ಮುಂದಿನ ದಿನದಲ್ಲಿ ನನ್ನ ಕೈ ಬಲಪಡಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ದೇವನೂರು ದಾಸೋಹ ಮಠದ ಮಹಾಂತ ಸ್ವಾಮಿಗಳು, ಮೈಸೂರು ಕುದುರು ಮಠದ ಗುರು ಶಾಂತ ಸ್ವಾಮಿಗಳು, ಕುಂದೂರು ಮಠದ ಶರತ್ ಚಂದ್ರ ಸ್ವಾಮಿಗಳು, ನಿಶಾಂತ್ ರವರ ತಾಯಿ ಮಂಜುಳ ಮುಖಂಡರಾದ ವೀರಮಾಧು, ತಾಪಂ ಮಾಜಿ ಅಧ್ಯಕ್ಷ ಮುರುಡೇಶ್ವರ ಸ್ವಾಮಿ, ಮುಖಂಡರುಗಳಾದ ಗೌಡ್ರು ಸೋಮಣ್ಣ, ಸದಾನಂದ ಮೂರ್ತಿ, ಗುರುಮಲ್ಲಪ್ಪ,ತೇಜು, ಸಚಿನ್, ಚೇತನ್, ಕಣ್ಣಪ್ಪ, ಅಜ್ಜಿಪುರ ಚಿದಾನಂದ ಮೂರ್ತಿ ಸೇರಿದಂತೆ ಇನ್ನಿತರರು ಹಾಜರಿದ್ದರು.
ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…
• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…
ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…