ಹನೂರು: ಮಠಗಳು ದೇವಸ್ಥಾನಗಳು ಮನುಷ್ಯನ ಮಾನಸಿಕ ನೆಮ್ಮದಿ ಮತ್ತು ಸಮಸ್ಯೆಗಳ ಪರಿಹಾರ ಕೇಂದ್ರಗಳಾಗಿವೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಗಳು ತಿಳಿಸಿದರು.
ತಾಲ್ಲೂಕಿನ ಒಡೆಯರ ಪಾಳ್ಯ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗುರುಮಲ್ಲೇಶ್ವರ ಬಿಕ್ಷದ ಮಠ ಸಭಾಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಿಜೆಪಿ ಮುಖಂಡ ನಿಶಾಂತ್ ಮಾತನಾಡಿ ಕೆಲವರು ಸಮಾಜ ಸೇವೆಯನ್ನು ಏಕೆ ನೂರಿನಲ್ಲಿ ಮಾಡಬೇಕು ಬೆಂಗಳೂರಿನಲ್ಲಿ ಮಾಡಬಹುದಲ್ಲ ಎಂದು ಪ್ರಶ್ನಿಸಿದ್ದಾರೆ. ಅಭಿಮಾನದ ಜನರು ಇರುವ ಕಡೆ ನಮ್ಮ ಸೇವೆ ಸಲ್ಲಬೇಕು. ಈ ಭಾಗದ ಜನರಲ್ಲಿ ಕಾಯಕ ಮತ್ತು ದಾಸೋಹ ಕಲ್ಪನೆ ಶಾಶ್ವತವಾಗಿದೆ, ನಮ್ಮ ಮೂಲಭೂತ ಸೌಕರ್ಯ ನಮ್ಮ ಹಕ್ಕು ಅದನ್ನು ಕೇಳಿ ಪಡೆದುಕೊಳ್ಳಬೇಕು. ನಮ್ಮ ಮೇಲೆ ಇಷ್ಟೊಂದು ಅಭಿಮಾನ ಪೂರ್ವಕವಾಗಿ ಹೊಂದಿರುವ ನಿಮ್ಮೆಲ್ಲರಿಗೂ ನಾನು ಸದಾ ಚಿರಋಣಿಯಾಗಿರುತ್ತೇನೆ, ರಾಜ್ಯದ 224 ಕ್ಷೇತ್ರಗಳ ಪೈಕಿ ಹನೂರು ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಓದಿಗೆ, ಊಟಕ್ಕೆ ಆಸ್ಪತ್ರೆಗಳಿಗೆ ಆಹಾಕಾರ ಉಂಟಾಗಿದೆ, ರಾಜ್ಯದಲ್ಲಿ ಇಂತಹ ಕ್ಷೇತ್ರವನ್ನು ನಾನೆಂದು ನೋಡಿಲ್ಲ ಹನೂರು ಕ್ಷೇತ್ರದ ಅಭಿವೃದ್ಧಿಯ ಸಂಕಲ್ಪ ದೊಂದಿಗೆ ನನ್ನ ಕೈಲಾದ ಮಟ್ಟಿಗೆ ಸೇವೆ ಮಾಡುತ್ತಿದ್ದೇನೆ ಹನೂರು ಕ್ಷೇತ್ರದ ಜನತೆ ಮುಂದಿನ ದಿನದಲ್ಲಿ ನನ್ನ ಕೈ ಬಲಪಡಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ದೇವನೂರು ದಾಸೋಹ ಮಠದ ಮಹಾಂತ ಸ್ವಾಮಿಗಳು, ಮೈಸೂರು ಕುದುರು ಮಠದ ಗುರು ಶಾಂತ ಸ್ವಾಮಿಗಳು, ಕುಂದೂರು ಮಠದ ಶರತ್ ಚಂದ್ರ ಸ್ವಾಮಿಗಳು, ನಿಶಾಂತ್ ರವರ ತಾಯಿ ಮಂಜುಳ ಮುಖಂಡರಾದ ವೀರಮಾಧು, ತಾಪಂ ಮಾಜಿ ಅಧ್ಯಕ್ಷ ಮುರುಡೇಶ್ವರ ಸ್ವಾಮಿ, ಮುಖಂಡರುಗಳಾದ ಗೌಡ್ರು ಸೋಮಣ್ಣ, ಸದಾನಂದ ಮೂರ್ತಿ, ಗುರುಮಲ್ಲಪ್ಪ,ತೇಜು, ಸಚಿನ್, ಚೇತನ್, ಕಣ್ಣಪ್ಪ, ಅಜ್ಜಿಪುರ ಚಿದಾನಂದ ಮೂರ್ತಿ ಸೇರಿದಂತೆ ಇನ್ನಿತರರು ಹಾಜರಿದ್ದರು.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…