ಜಿಲ್ಲೆಗಳು

ಮಠ-ದೇವಾಲಯಗಳು ಮಾನಸಿಕ ನೆಮ್ಮದಿಯ ಕೇಂದ್ರಗಳಾಗಿವೆ : ಸುತ್ತೂರು ದೇಶಿಕೇಂದ್ರ ಸ್ವಾಮೀಜಿ

ಹನೂರು: ಮಠಗಳು ದೇವಸ್ಥಾನಗಳು ಮನುಷ್ಯನ ಮಾನಸಿಕ ನೆಮ್ಮದಿ ಮತ್ತು ಸಮಸ್ಯೆಗಳ ಪರಿಹಾರ ಕೇಂದ್ರಗಳಾಗಿವೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಗಳು ತಿಳಿಸಿದರು.

ತಾಲ್ಲೂಕಿನ ಒಡೆಯರ ಪಾಳ್ಯ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗುರುಮಲ್ಲೇಶ್ವರ ಬಿಕ್ಷದ ಮಠ ಸಭಾಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಭಾಭವನಗಳನ್ನು ಮದುವೆ ಕಾರ್ಯಗಳ ಜೊತೆಗೆ ಧಾರ್ಮಿಕ ಕಾರ್ಯಗಳಿಗೂ ಬಳಸಿಕೊಳ್ಳುವ ಮೂಲಕ ಸಾರ್ಥಕತೆ ಮರೆಯಬೇಕು. ಭಾರತೀಯ ಸಂಸ್ಕೃತಿಯಲ್ಲಿ ಒಬ್ಬ ತಾಯಿಗೆ ತನಗಿಂತ ಮಗುವೇ ಮುಖ್ಯ. ಸೇವೆಯಲ್ಲಿ ತೊಡಗಿರುವ ನಿಶಾಂತ್ ರವರು ಅದನ್ನು ಮೀರಿ ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದಾರೆ. ದೀಪ ಬೆಳಗಲು ಅಗತ್ಯವಿರುವಷ್ಟೇ ಎಣ್ಣೆ ಹಾಕಬೇಕು. ಹಾಗೆ ಸಮಾಜದ ಉನ್ನತಿಗೆ ಅಗತ್ಯ ಸೇವೆ ಮುಖ್ಯ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಲು ಮುಂದಾಗಬೇಕು. ಇಲ್ಲಿನ ಜನರು ಧರ್ಮ, ಸಂಸ್ಕೃತಿ ಮತ್ತು ಸಂಸ್ಕಾರಕ್ಕೆ ಒಡೆಯರಾಗಿದ್ದಾರೆ ಎಂದು ಆಶೀರ್ವಚನ ನೀಡಿದರು.

ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ ಮಲೆ ಸೀಮೆಯ ಪ್ರಾಂತ್ಯ ಜಾತಿ ಧರ್ಮಗಳ ಭಾವೈಕ್ಯತೆ ಹೊಂದಿರುವ ಮತ್ತು ಧಾರ್ಮಿಕ ಭಕ್ತಿಯಲ್ಲಿ ಶ್ರೀಮಂತಿಕೆ ಇರುವ ಗ್ರಾಮ ಒಡೆಯರ ಪಾಳ್ಯ. ಧಾರ್ಮಿಕ ಪರಂಪರೆಯ ಅಸ್ತಿತ್ವಕ್ಕೆ ನಮ್ಮೆಲ್ಲರ ಜವಾಬ್ದಾರಿ ಮುಖ್ಯ ಕಾಯಕವೇ ಕೈಲಾಸ ಎನ್ನುವ ಬಸವ ತತ್ವದ ಅನುಯಾಯಿಗಳು ಈ ಭಾಗದವರಾಗಿದ್ದಾರೆ. ಇಂತಹ ನೆಲೆಯಲ್ಲಿ ಅಪೂರ್ಣಗೊಂಡಿರುವ ಗುರುಮಲ್ಲೇಶ್ವರ ಸಭಾಭವನವನ್ನು ಪೂರ್ಣಗೊಳಿಸಿದ ಕೀರ್ತಿ ನಿಶಾಂತ್ ರವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ಬಿಜೆಪಿ ಮುಖಂಡ ನಿಶಾಂತ್ ಮಾತನಾಡಿ ಕೆಲವರು ಸಮಾಜ ಸೇವೆಯನ್ನು ಏಕೆ ನೂರಿನಲ್ಲಿ ಮಾಡಬೇಕು ಬೆಂಗಳೂರಿನಲ್ಲಿ ಮಾಡಬಹುದಲ್ಲ ಎಂದು ಪ್ರಶ್ನಿಸಿದ್ದಾರೆ. ಅಭಿಮಾನದ ಜನರು ಇರುವ ಕಡೆ ನಮ್ಮ ಸೇವೆ ಸಲ್ಲಬೇಕು. ಈ ಭಾಗದ ಜನರಲ್ಲಿ ಕಾಯಕ ಮತ್ತು ದಾಸೋಹ ಕಲ್ಪನೆ ಶಾಶ್ವತವಾಗಿದೆ, ನಮ್ಮ ಮೂಲಭೂತ ಸೌಕರ್ಯ ನಮ್ಮ ಹಕ್ಕು ಅದನ್ನು ಕೇಳಿ ಪಡೆದುಕೊಳ್ಳಬೇಕು. ನಮ್ಮ ಮೇಲೆ ಇಷ್ಟೊಂದು ಅಭಿಮಾನ ಪೂರ್ವಕವಾಗಿ ಹೊಂದಿರುವ ನಿಮ್ಮೆಲ್ಲರಿಗೂ ನಾನು ಸದಾ ಚಿರಋಣಿಯಾಗಿರುತ್ತೇನೆ, ರಾಜ್ಯದ 224 ಕ್ಷೇತ್ರಗಳ ಪೈಕಿ ಹನೂರು ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಓದಿಗೆ, ಊಟಕ್ಕೆ ಆಸ್ಪತ್ರೆಗಳಿಗೆ ಆಹಾಕಾರ ಉಂಟಾಗಿದೆ, ರಾಜ್ಯದಲ್ಲಿ ಇಂತಹ ಕ್ಷೇತ್ರವನ್ನು ನಾನೆಂದು ನೋಡಿಲ್ಲ ಹನೂರು ಕ್ಷೇತ್ರದ ಅಭಿವೃದ್ಧಿಯ ಸಂಕಲ್ಪ ದೊಂದಿಗೆ ನನ್ನ ಕೈಲಾದ ಮಟ್ಟಿಗೆ ಸೇವೆ ಮಾಡುತ್ತಿದ್ದೇನೆ ಹನೂರು ಕ್ಷೇತ್ರದ ಜನತೆ ಮುಂದಿನ ದಿನದಲ್ಲಿ ನನ್ನ ಕೈ ಬಲಪಡಿಸಬೇಕೆಂದು ಮನವಿ ಮಾಡಿದರು.

ಮುಖಂಡ ಪೊನ್ನಾಚಿ ಮಹದೇವ ಸ್ವಾಮಿ ಮಾತನಾಡಿ ಹನೂರು ಕ್ಷೇತ್ರಕ್ಕೆ ಸಮಾಜಸೇವಕ ನಿಶಾಂತ್ ಬಂದಂತಹ ಕಡಿಮೆ ಅವಧಿಯಲ್ಲಿಯೇ ಉತ್ತಮ ಸೇವೆ ನೀಡಿದ್ದಾರೆ. ಕ್ಷೇತ್ರ ವ್ಯಾಪ್ತಿಯ ಸುಮಾರು 140 ದೇವಸ್ಥಾನಗಳ ಅಭಿವೃದ್ಧಿ, 25 ಮಠಗಳ ಜೀರ್ಣೋದ್ಧಾರ, 30 ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಕೊತ್ತನೂರು ಗ್ರಾಮದಲ್ಲಿ 30 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣ. ದೊಡ್ಡಿಂಡುವಾಡಿ ಪರಿಶಿಷ್ಟ ಸಮುದಾಯದವರಿಗೆ 30 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಿವೇಶನ ಖರೀದಿ, ಕಾಮಗೆರೆ ಗ್ರಾಮದ ಆದಿಜಾಂಬವ ಸಮುದಾಯದವರಿಗೆ ಕಂಡಾಯ ನಿರ್ಮಾಣಕ್ಕಾಗಿ 5 ಕೆ.ಜಿ ಬೆಳ್ಳಿ ಖರೀದಿ ಸೇರಿದಂತೆ ಸುಮಾರು 30 ಕೋಟಿಗೂ ಅಧಿಕ ಹಣವನ್ನು ಹನೂರು ಕ್ಷೇತ್ರದ ಅಭಿವೃದ್ಧಿಗೆ ತೊಡಗಿದ್ದಾರೆ ಎಂದು ತಿಳಿಸಿದರು. ಜೊತೆಗೆ ಶ್ರೀ ಗುರು ಮಲ್ಲೇಶ್ವರ ಸಭಾಭವನಕ್ಕೆ ನಿವೇಶನ ನೀಡಿದ ಕುಟುಂಬಸ್ಥರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ದೇವನೂರು ದಾಸೋಹ ಮಠದ ಮಹಾಂತ ಸ್ವಾಮಿಗಳು, ಮೈಸೂರು ಕುದುರು ಮಠದ ಗುರು ಶಾಂತ ಸ್ವಾಮಿಗಳು, ಕುಂದೂರು ಮಠದ ಶರತ್ ಚಂದ್ರ ಸ್ವಾಮಿಗಳು, ನಿಶಾಂತ್ ರವರ ತಾಯಿ ಮಂಜುಳ ಮುಖಂಡರಾದ ವೀರಮಾಧು, ತಾಪಂ ಮಾಜಿ ಅಧ್ಯಕ್ಷ ಮುರುಡೇಶ್ವರ ಸ್ವಾಮಿ, ಮುಖಂಡರುಗಳಾದ ಗೌಡ್ರು ಸೋಮಣ್ಣ, ಸದಾನಂದ ಮೂರ್ತಿ, ಗುರುಮಲ್ಲಪ್ಪ,ತೇಜು, ಸಚಿನ್, ಚೇತನ್, ಕಣ್ಣಪ್ಪ, ಅಜ್ಜಿಪುರ ಚಿದಾನಂದ ಮೂರ್ತಿ ಸೇರಿದಂತೆ ಇನ್ನಿತರರು ಹಾಜರಿದ್ದರು.

andolanait

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

6 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

6 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

6 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

6 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

6 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

6 hours ago