Mysore
24
scattered clouds

Social Media

ಗುರುವಾರ, 14 ಮೇ 2026
Light
Dark

ಹಂಗಾಮಿ ಕುಲಪತಿಗಳಾಗಿ ಮುಜಾಫರ್ ಅಸಾದಿ ಅಧಿಕಾರ ಸ್ವೀಕಾರ

ಮೈಸೂರು : ಮೈಸೂರು ವಿವಿಯ ಹಂಗಾಮಿ ಕುಲಪತಿಯಾಗಿ ನೇಮಕವಾಗಿರುವ ವಿವಿಯ ಕಲಾ ನಿಕಾಯದ ಡೀನ್, ರಾಜಕೀಯ ಶಾಸ್ತ್ರ ಸಾರ್ವಜನಿಕ ಆಡಳಿತ ವಿಭಾಗದ ಪ್ರಾಧ್ಯಾಪಕ ಮುಜಾಫರ್ ಅಸಾದಿ ಅವರಿಗೆ ಪ್ರಭಾರ ಕುಲಪತಿ ಪ್ರೊ.ಎಚ್.ರಾಜಶೇಖರ್ ಅವರು ಸಂವಿಧಾನದ ಪ್ರಸ್ತಾವನೆ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಮೈಸೂರು ವಿವಿಯ ಪ್ರಾಧ್ಯಾಪಕರಾಗಿರುವ ಪ್ರೊ.ಮುಜಾಫರ್ ಅಸ್ಸಾದಿ ಅವರು ಬುಡಕಟ್ಟು ಸಮುದಾಯದವರ ಬದುಕು, ಜೀವನ ಶೈಲಿಯ ಬಗ್ಗೆ ಅಪಾರವಾದ ಅಧ್ಯಯನ ನಡೆಸಿದ್ದಾರೆ. ಆದಿವಾಸಿಗಳ ಸ್ಥಳಾಂತರಕ್ಕೆ ನೇಮಿಸಿದ್ದ ಸಮಿತಿಯ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೃಷಿ ಅಧ್ಯಯನ ಕ್ಷೇತ್ರ, ಜಾಗತೀಕರಣ, ಗಾಂಧೀವಾದ, ರಾಜಕೀಯ ಸಮಾಜಶಾಸ್ತ್ರ, ಪ್ರಜಾಪ್ರಭುತ್ವ ಸಿದ್ಧಾಂತ, ಸಾಮಾಜಿಕ ಚಳವಳಿಗಳು, ತುಲನಾತ್ಮಕ ಸರ್ಕಾರ ಮತ್ತು ಭಾರತದಲ್ಲಿ ರಾಜಕೀಯ, ಮಾನವ ಹಕ್ಕುಗಳು, ಜಾಗತಿಕ ರಾಜಕೀಯ ಸಿದ್ಧಾಂತ ಮೊದಲಾದ ವಿಚಾರಗಳ ಕುರಿತು ಅಳವಾದ ಅಧ್ಯಯನ ಮಾಡಿ ವಿಷಯ ಮಂಡನೆ ಮಾಡಿ ಗಮನ ಸೆಳೆದಿದ್ದಾರೆ.

ಡಾ. ಮುಜಾಫರ್ ಅಸ್ಸಾದಿ ಅವರು ಮಂಗಳೂರು ವಿ.ವಿ.ಯಿಂದ ಸ್ನಾತಕೋತ್ತರ ಪದವಿ, ನವದೆಹಲಿಯ ಜೆಎನ್ ಯುನಿಂದ ಎಂ.ಫಿಲ್ ಹಾಗೂ ಪಿಎಚ್ ಡಿ ನಂತರ ಶಿಕಾಗೋ ವಿ.ವಿ.ಯಿಂದ ರಾಕ್ ಫೆಲ್ಲರ್ ಫೆಲೋ, ಪೋಸ್ಟ್ ಡಾಕ್ಟೊರಲ್ ಪದವೀಧರರು. ಈವರೆಗೆ 11 ಕೃತಿಗಳನ್ನು ರಚಿಸಿದ್ದಾರೆ. ಬುಡಕಟ್ಟು ಸಮುದಾಯಗಳ ಸ್ಥಳಾಂತರ ಕುರಿತ ಹೈಕೋರ್ಟ್ ಸಮಿತಿ ಅಧ್ಯಕ್ಷರಾಗಿ, ವರದಿ ನೀಡಿದ್ದಾರೆ. ಕರ್ನಾಟಕದಲ್ಲಿ ಬಹುರೂಪಿ ಸ್ತ್ರೀವಾದ ಕಥನಗಳು ಮತ್ತು ಚಳವಳಿ, ಅಸ್ಮಿತೆ, ರಾಜಕಾರಣ ಮತ್ತು ಮೂಲಭೂತವಾದ ಇವರ ಪ್ರಮುಖ ಕೃತಿಗಳು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!