ಜಿಲ್ಲೆಗಳು

ಹಂಗಾಮಿ ಕುಲಪತಿಗಳಾಗಿ ಮುಜಾಫರ್ ಅಸಾದಿ ಅಧಿಕಾರ ಸ್ವೀಕಾರ

ಮೈಸೂರು : ಮೈಸೂರು ವಿವಿಯ ಹಂಗಾಮಿ ಕುಲಪತಿಯಾಗಿ ನೇಮಕವಾಗಿರುವ ವಿವಿಯ ಕಲಾ ನಿಕಾಯದ ಡೀನ್, ರಾಜಕೀಯ ಶಾಸ್ತ್ರ ಸಾರ್ವಜನಿಕ ಆಡಳಿತ ವಿಭಾಗದ ಪ್ರಾಧ್ಯಾಪಕ ಮುಜಾಫರ್ ಅಸಾದಿ ಅವರಿಗೆ ಪ್ರಭಾರ ಕುಲಪತಿ ಪ್ರೊ.ಎಚ್.ರಾಜಶೇಖರ್ ಅವರು ಸಂವಿಧಾನದ ಪ್ರಸ್ತಾವನೆ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಮೈಸೂರು ವಿವಿಯ ಪ್ರಾಧ್ಯಾಪಕರಾಗಿರುವ ಪ್ರೊ.ಮುಜಾಫರ್ ಅಸ್ಸಾದಿ ಅವರು ಬುಡಕಟ್ಟು ಸಮುದಾಯದವರ ಬದುಕು, ಜೀವನ ಶೈಲಿಯ ಬಗ್ಗೆ ಅಪಾರವಾದ ಅಧ್ಯಯನ ನಡೆಸಿದ್ದಾರೆ. ಆದಿವಾಸಿಗಳ ಸ್ಥಳಾಂತರಕ್ಕೆ ನೇಮಿಸಿದ್ದ ಸಮಿತಿಯ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೃಷಿ ಅಧ್ಯಯನ ಕ್ಷೇತ್ರ, ಜಾಗತೀಕರಣ, ಗಾಂಧೀವಾದ, ರಾಜಕೀಯ ಸಮಾಜಶಾಸ್ತ್ರ, ಪ್ರಜಾಪ್ರಭುತ್ವ ಸಿದ್ಧಾಂತ, ಸಾಮಾಜಿಕ ಚಳವಳಿಗಳು, ತುಲನಾತ್ಮಕ ಸರ್ಕಾರ ಮತ್ತು ಭಾರತದಲ್ಲಿ ರಾಜಕೀಯ, ಮಾನವ ಹಕ್ಕುಗಳು, ಜಾಗತಿಕ ರಾಜಕೀಯ ಸಿದ್ಧಾಂತ ಮೊದಲಾದ ವಿಚಾರಗಳ ಕುರಿತು ಅಳವಾದ ಅಧ್ಯಯನ ಮಾಡಿ ವಿಷಯ ಮಂಡನೆ ಮಾಡಿ ಗಮನ ಸೆಳೆದಿದ್ದಾರೆ.

ಡಾ. ಮುಜಾಫರ್ ಅಸ್ಸಾದಿ ಅವರು ಮಂಗಳೂರು ವಿ.ವಿ.ಯಿಂದ ಸ್ನಾತಕೋತ್ತರ ಪದವಿ, ನವದೆಹಲಿಯ ಜೆಎನ್ ಯುನಿಂದ ಎಂ.ಫಿಲ್ ಹಾಗೂ ಪಿಎಚ್ ಡಿ ನಂತರ ಶಿಕಾಗೋ ವಿ.ವಿ.ಯಿಂದ ರಾಕ್ ಫೆಲ್ಲರ್ ಫೆಲೋ, ಪೋಸ್ಟ್ ಡಾಕ್ಟೊರಲ್ ಪದವೀಧರರು. ಈವರೆಗೆ 11 ಕೃತಿಗಳನ್ನು ರಚಿಸಿದ್ದಾರೆ. ಬುಡಕಟ್ಟು ಸಮುದಾಯಗಳ ಸ್ಥಳಾಂತರ ಕುರಿತ ಹೈಕೋರ್ಟ್ ಸಮಿತಿ ಅಧ್ಯಕ್ಷರಾಗಿ, ವರದಿ ನೀಡಿದ್ದಾರೆ. ಕರ್ನಾಟಕದಲ್ಲಿ ಬಹುರೂಪಿ ಸ್ತ್ರೀವಾದ ಕಥನಗಳು ಮತ್ತು ಚಳವಳಿ, ಅಸ್ಮಿತೆ, ರಾಜಕಾರಣ ಮತ್ತು ಮೂಲಭೂತವಾದ ಇವರ ಪ್ರಮುಖ ಕೃತಿಗಳು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago