ಮೈಸೂರು : ಮೈಸೂರು ವಿವಿಯ ಹಂಗಾಮಿ ಕುಲಪತಿಯಾಗಿ ನೇಮಕವಾಗಿರುವ ವಿವಿಯ ಕಲಾ ನಿಕಾಯದ ಡೀನ್, ರಾಜಕೀಯ ಶಾಸ್ತ್ರ ಸಾರ್ವಜನಿಕ ಆಡಳಿತ ವಿಭಾಗದ ಪ್ರಾಧ್ಯಾಪಕ ಮುಜಾಫರ್ ಅಸಾದಿ ಅವರಿಗೆ ಪ್ರಭಾರ ಕುಲಪತಿ ಪ್ರೊ.ಎಚ್.ರಾಜಶೇಖರ್ ಅವರು ಸಂವಿಧಾನದ ಪ್ರಸ್ತಾವನೆ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.
ಮೈಸೂರು ವಿವಿಯ ಪ್ರಾಧ್ಯಾಪಕರಾಗಿರುವ ಪ್ರೊ.ಮುಜಾಫರ್ ಅಸ್ಸಾದಿ ಅವರು ಬುಡಕಟ್ಟು ಸಮುದಾಯದವರ ಬದುಕು, ಜೀವನ ಶೈಲಿಯ ಬಗ್ಗೆ ಅಪಾರವಾದ ಅಧ್ಯಯನ ನಡೆಸಿದ್ದಾರೆ. ಆದಿವಾಸಿಗಳ ಸ್ಥಳಾಂತರಕ್ಕೆ ನೇಮಿಸಿದ್ದ ಸಮಿತಿಯ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೃಷಿ ಅಧ್ಯಯನ ಕ್ಷೇತ್ರ, ಜಾಗತೀಕರಣ, ಗಾಂಧೀವಾದ, ರಾಜಕೀಯ ಸಮಾಜಶಾಸ್ತ್ರ, ಪ್ರಜಾಪ್ರಭುತ್ವ ಸಿದ್ಧಾಂತ, ಸಾಮಾಜಿಕ ಚಳವಳಿಗಳು, ತುಲನಾತ್ಮಕ ಸರ್ಕಾರ ಮತ್ತು ಭಾರತದಲ್ಲಿ ರಾಜಕೀಯ, ಮಾನವ ಹಕ್ಕುಗಳು, ಜಾಗತಿಕ ರಾಜಕೀಯ ಸಿದ್ಧಾಂತ ಮೊದಲಾದ ವಿಚಾರಗಳ ಕುರಿತು ಅಳವಾದ ಅಧ್ಯಯನ ಮಾಡಿ ವಿಷಯ ಮಂಡನೆ ಮಾಡಿ ಗಮನ ಸೆಳೆದಿದ್ದಾರೆ.
ಡಾ. ಮುಜಾಫರ್ ಅಸ್ಸಾದಿ ಅವರು ಮಂಗಳೂರು ವಿ.ವಿ.ಯಿಂದ ಸ್ನಾತಕೋತ್ತರ ಪದವಿ, ನವದೆಹಲಿಯ ಜೆಎನ್ ಯುನಿಂದ ಎಂ.ಫಿಲ್ ಹಾಗೂ ಪಿಎಚ್ ಡಿ ನಂತರ ಶಿಕಾಗೋ ವಿ.ವಿ.ಯಿಂದ ರಾಕ್ ಫೆಲ್ಲರ್ ಫೆಲೋ, ಪೋಸ್ಟ್ ಡಾಕ್ಟೊರಲ್ ಪದವೀಧರರು. ಈವರೆಗೆ 11 ಕೃತಿಗಳನ್ನು ರಚಿಸಿದ್ದಾರೆ. ಬುಡಕಟ್ಟು ಸಮುದಾಯಗಳ ಸ್ಥಳಾಂತರ ಕುರಿತ ಹೈಕೋರ್ಟ್ ಸಮಿತಿ ಅಧ್ಯಕ್ಷರಾಗಿ, ವರದಿ ನೀಡಿದ್ದಾರೆ. ಕರ್ನಾಟಕದಲ್ಲಿ ಬಹುರೂಪಿ ಸ್ತ್ರೀವಾದ ಕಥನಗಳು ಮತ್ತು ಚಳವಳಿ, ಅಸ್ಮಿತೆ, ರಾಜಕಾರಣ ಮತ್ತು ಮೂಲಭೂತವಾದ ಇವರ ಪ್ರಮುಖ ಕೃತಿಗಳು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…