ಜಿಲ್ಲೆಗಳು

ಮೖೆಸೂರು : ಧ್ವಜ ಸಂಗ್ರಹಣಾ ಅಭಿಯಾನಕ್ಕೆ ಕಾರಾಗೃಹ ಮುಖ್ಯ ಅಧೀಕ್ಷಕಿ ದಿವ್ಯಶ್ರೀ ಚಾಲನೆ

ಮೈಸೂರು :ಕೇಂದ್ರ ಸರ್ಕಾರದ ಹರ್ ಘರ್  ತಿರಂಗ  ಅಭಿಯಾನದ ನಂತರ ವಜಾ ಸಂಗ್ರಹ ಅಭಿಯಾನಕ್ಕೆ ಕಾರಾಗೃಹದ ಮುಖ್ಯ ಅಧೀಕ್ಷಕಿ ದಿವ್ಯಶ್ರೀ ಇಂದಿಲ್ಲಿ  ಚಾಲನೆ ನೀಡಿದ್ದಾರೆ .

ನಗರದ ಇಂಡಿಯನ್ ಆಯಿಲ್ ಕಾರ್ಪೋರೆಷನ್ ಕಂಪನಿಯ ವಸಂತ್ ಸರ್ವಿಸ್ ಸ್ಟೇಷನ್ ,ಮಾರುತಿ ಸರ್ವಿಸ್ ಸ್ಟೇಷನ್ ಗಳಲ್ಲಿ ಆಯೋಜಿಸಿದ್ದ ಧ್ವಜ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು  ಹರ್ ಘರ್ ತಿರಂಗಾ ಅಭಿಯಾನದಲ್ಲಿ ಬಳಸಲಾದ ಧ್ವಜಗಳನ್ನು ಎಲ್ಲಾ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಸಂಗ್ರಹಿಸಲಾಗುತ್ತದೆ. ಭವಿಷ್ಯದ ಬಳಕೆಗಾಗಿ ಉತ್ತಮ ಧ್ವಜಗಳನ್ನು ಸಂರಕ್ಷಿಸಲಾಗುವುದು ಮತ್ತು ಹಾನಿಗೊಳಗಾದ ಧ್ವಜಗಳನ್ನು ಗೌರವದಿಂದ ವಿಲೇವಾರಿ ಮಾಡಲಾಗುತ್ತದೆ ಎಂದರು . ಇದೇ ಸಂದರ್ಭದಲ್ಲಿ ಇಂಡಿಯನ್ ಆಯಿಲ್ ಕಾರ್ಪೋರೆಷನ್ ಕಂಪನಿಯ ಮೈಸೂರು ವಿಭಾಗದ ವ್ಯವಸ್ಥಾಪಕರಾದ ಸುನೀಲ್ ಕುಮಾರ್ ಮಿಶ್ರ ಮಾತನಾಡಿ,ತ್ರಿವರ್ಣ ಧ್ವಜ ಸಂರಕ್ಷಣೆ’ಗೌರವ ಸಮರ್ಪಣೆ  ಭಾರತೀಯರ ಕರ್ತವ್ಯವಾಗಿದೆ ಈ ದಿಸೆಯಲ್ಲಿ ಕಂಪನಿ ವತಿಯಿಂದ  ಭಾಗವಹಿಸುವಿಕೆಯನ್ನು ಉತ್ತೇಜಿಸಲು ಧ್ವಜಗಳನ್ನು ಹಸ್ತಾಂತರಿಸುವವರಿಗೆ  ಕಂಪನಿಯ XP95 ಬ್ರ್ಯಾಂಡಿಂಗ್ ಹೊಂದಿರುವ ಟಿ ಶರ್ಟ್‌ಗಳನ್ನು ನೀಡಲಾಗಿದೆ.ನಗರದ ಪ್ರತಿಯೊಬ್ಬ ಪ್ರಜೆಯೂ ಧ್ವಜಗಳನ್ನು ಈ ಸಂಗ್ರಹಣಾ ಕೇಂದ್ರಕ್ಕೆ ನೀಡುವಂತೆ ಅವರು ಕರೆ ನೀಡಿದರು .

ಅಭಿಯಾನದಲ್ಲಿ   ಅಧ್ಯಕ್ಷ ಫಾರ್ಮ್ ಅಧ್ಯಕ್ಷ  ಪ್ರಶಾಂತ್ ಸೇರಿದಂತೆ ಇಂಡಿಯನ್ ಆಯಿಲ್ ಕಾರ್ಪೋರೆಷನ್ ಕಂಪನಿಯ ಸಿಬ್ಬಂದಿಗಳು ಡೀಲರ್ ಗಳು ಸಾರ್ವಜನಿಕರು ಉಪಸ್ಥಿತರಿದ್ದರು.

 

andolanait

Recent Posts

ಕದನ ವಿರಾಮ ಬೆನ್ನಲ್ಲೇ ಕಚ್ಚಾ ತೈಲದ ದರ ದಿಢೀರ್‌ ಕುಸಿತ

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನೊಂದಿಗೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ…

16 mins ago

ಪೊನ್ನಂಪೇಟೆ | ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

ಮಡಿಕೇರಿ : ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ ಸಾವನ್ನಪ್ಪಿದವರನ್ನು…

31 mins ago

PUC RESULT | ನಾಳೆ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ…

38 mins ago

ಅಮೆರಿಕ ಎದುರು 10ಷರತ್ತು ಮುಂದಿಟ್ಟಿ ಇರಾನ್ ; ಷರತ್ತು ಒಪ್ಪಿಕೊಳ್ಳುತ್ತಾ ಟ್ರಂಪ್‌ ಆಡಳಿತ?

ಟೆಹ್ರಾನ್‌ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…

2 hours ago

ಓದುಗರ ಪತ್ರ | ಬಸವರಾಜ ಬೊಮ್ಮಾಯಿ ನಿರ್ಧಾರ ಸ್ವಾಗತಾರ್ಹ

ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…

2 hours ago

ಓದುಗರ ಪತ್ರ | ಅಮಾನವೀಯ ಲಿಫ್ಟ್ ಸಂಸ್ಕೃತಿ ಅಂತ್ಯವಾಗಲಿ

ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್‌ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್‌ಗೆ ಲಿಫ್ಟ್…

2 hours ago