ಜಿಲ್ಲೆಗಳು

ಮೖೆಸೂರು : ಧ್ವಜ ಸಂಗ್ರಹಣಾ ಅಭಿಯಾನಕ್ಕೆ ಕಾರಾಗೃಹ ಮುಖ್ಯ ಅಧೀಕ್ಷಕಿ ದಿವ್ಯಶ್ರೀ ಚಾಲನೆ

ಮೈಸೂರು :ಕೇಂದ್ರ ಸರ್ಕಾರದ ಹರ್ ಘರ್  ತಿರಂಗ  ಅಭಿಯಾನದ ನಂತರ ವಜಾ ಸಂಗ್ರಹ ಅಭಿಯಾನಕ್ಕೆ ಕಾರಾಗೃಹದ ಮುಖ್ಯ ಅಧೀಕ್ಷಕಿ ದಿವ್ಯಶ್ರೀ ಇಂದಿಲ್ಲಿ  ಚಾಲನೆ ನೀಡಿದ್ದಾರೆ .

ನಗರದ ಇಂಡಿಯನ್ ಆಯಿಲ್ ಕಾರ್ಪೋರೆಷನ್ ಕಂಪನಿಯ ವಸಂತ್ ಸರ್ವಿಸ್ ಸ್ಟೇಷನ್ ,ಮಾರುತಿ ಸರ್ವಿಸ್ ಸ್ಟೇಷನ್ ಗಳಲ್ಲಿ ಆಯೋಜಿಸಿದ್ದ ಧ್ವಜ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು  ಹರ್ ಘರ್ ತಿರಂಗಾ ಅಭಿಯಾನದಲ್ಲಿ ಬಳಸಲಾದ ಧ್ವಜಗಳನ್ನು ಎಲ್ಲಾ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಸಂಗ್ರಹಿಸಲಾಗುತ್ತದೆ. ಭವಿಷ್ಯದ ಬಳಕೆಗಾಗಿ ಉತ್ತಮ ಧ್ವಜಗಳನ್ನು ಸಂರಕ್ಷಿಸಲಾಗುವುದು ಮತ್ತು ಹಾನಿಗೊಳಗಾದ ಧ್ವಜಗಳನ್ನು ಗೌರವದಿಂದ ವಿಲೇವಾರಿ ಮಾಡಲಾಗುತ್ತದೆ ಎಂದರು . ಇದೇ ಸಂದರ್ಭದಲ್ಲಿ ಇಂಡಿಯನ್ ಆಯಿಲ್ ಕಾರ್ಪೋರೆಷನ್ ಕಂಪನಿಯ ಮೈಸೂರು ವಿಭಾಗದ ವ್ಯವಸ್ಥಾಪಕರಾದ ಸುನೀಲ್ ಕುಮಾರ್ ಮಿಶ್ರ ಮಾತನಾಡಿ,ತ್ರಿವರ್ಣ ಧ್ವಜ ಸಂರಕ್ಷಣೆ’ಗೌರವ ಸಮರ್ಪಣೆ  ಭಾರತೀಯರ ಕರ್ತವ್ಯವಾಗಿದೆ ಈ ದಿಸೆಯಲ್ಲಿ ಕಂಪನಿ ವತಿಯಿಂದ  ಭಾಗವಹಿಸುವಿಕೆಯನ್ನು ಉತ್ತೇಜಿಸಲು ಧ್ವಜಗಳನ್ನು ಹಸ್ತಾಂತರಿಸುವವರಿಗೆ  ಕಂಪನಿಯ XP95 ಬ್ರ್ಯಾಂಡಿಂಗ್ ಹೊಂದಿರುವ ಟಿ ಶರ್ಟ್‌ಗಳನ್ನು ನೀಡಲಾಗಿದೆ.ನಗರದ ಪ್ರತಿಯೊಬ್ಬ ಪ್ರಜೆಯೂ ಧ್ವಜಗಳನ್ನು ಈ ಸಂಗ್ರಹಣಾ ಕೇಂದ್ರಕ್ಕೆ ನೀಡುವಂತೆ ಅವರು ಕರೆ ನೀಡಿದರು .

ಅಭಿಯಾನದಲ್ಲಿ   ಅಧ್ಯಕ್ಷ ಫಾರ್ಮ್ ಅಧ್ಯಕ್ಷ  ಪ್ರಶಾಂತ್ ಸೇರಿದಂತೆ ಇಂಡಿಯನ್ ಆಯಿಲ್ ಕಾರ್ಪೋರೆಷನ್ ಕಂಪನಿಯ ಸಿಬ್ಬಂದಿಗಳು ಡೀಲರ್ ಗಳು ಸಾರ್ವಜನಿಕರು ಉಪಸ್ಥಿತರಿದ್ದರು.

 

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

8 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

9 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

10 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

15 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

15 hours ago