ಜಿಲ್ಲೆಗಳು

ಆ.18ರಂದು ಡಾ. ರಾಜೇಂದ್ರ ಸ್ವಾಮಿಗಳ ಜನ್ಮ ಜಯಂತಿ ಆಚರಣೆ

ಮೈಸೂರು : ಜೆಎಸ್ ಎಸ್ ಮಹಾವಿದ್ಯಾಪೀಠದ ೨೩ನೇ ಪೀಠಾಧಿಪತಿ ಡಾ. ರಾಜೇಂದ್ರ ಸ್ವಾಮೀಜಿ ಅವರ ಜನ್ಮ ಜಯಂತಿಯನ್ನು ಆಗಸ್ಟ್ ೧೮ರಂದು ಚಾಮುಂಡಿ ಬೆಟ್ಟದ ತಪ್ಪಲಿನ ಪುತ್ತೂರು ಮಠದಲ್ಲಿ ಆಯೋಜಿಸಲಾಗಿದೆ.

ಈ ವರ್ಷ ಅಮೆರಿಕದ ಮೇರಿಲ್ಯಾಂಡ್‌ನ ಗೇಥರ್ಸ್ ಬರ್ಗ್ ನಲ್ಲಿರುವ ಜೆಎಸ್ ಎಸ್ ಸ್ಪಿರಿಚ್ಯುಯಲ್ ಮಿಷನ್ ನಲ್ಲಿ ಆಚರಿಸುತ್ತಿರುವ ಹಿನ್ನಲೆಯಲ್ಲಿ  ಶ್ರೀ ಮಠದಲ್ಲಿ ಮುಂಚಿತವಾಗಿ ಆಚರಿಸಲಾಗುತ್ತದೆ ಎಂದು ಜೆಎಸ್ ಎಸ್ ಮಹಾವಿದ್ಯಾಪೀಠದ ಮುಖ್ಯ ಕಾರ್ಯ ನಿರ್ವಹಕಾಧಿಕಾರಿ ಡಾ.ಸಿ.ಜಿ.ಬೆಟಸೂರಮಠ ಹೇಳಿದರು.

ಆ.೧೮ರಂದು ಸುತ್ತೂರು‌ಮಠದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ರಾಜ್ಯಪಾಲಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದು,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ,ಶಾಸಕ ಎಸ್.ಎ.ರಾಮದಾಸ್ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಶ್ರೀಗಳ ಜನ್ಮ ಜಯಂತಿ ಅಂಗವಾಗಿ ಚಾಮರಾಜೇಂದ್ರ ಮೃಗಾಲಯಕ್ಕೆ ಪ್ರತಿ ವರ್ಷದಂತೆ ಈ ಬಾರಿಯೂ ಒಂದು ಲಕ್ಷ ರೂ.ಗಳ ಚೆಕ್ ನೀಡಲಾಗುತ್ತದೆ. ರಕ್ತದಾನ,ನೇತ್ರದಾನ,ದೇಹದಾನಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದರು. ಕಾರ್ಯದರ್ಶಿ ಎಸ್.ಶಿವಕುಮಾರಸ್ವಾಮಿ, ಬಿ.ನಿರಂಜನಮೂರ್ತಿ ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

1 hour ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

1 hour ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

1 hour ago

ಓದುಗರ ಪತ್ರ: ನಕಲಿ ಔಷಧ ಜಾಲ ಬೇರುಸಹಿತ ಕಿತ್ತೊಗೆಯಲಿ

ರಾಜ್ಯದಲ್ಲಿ ನಕಲಿ ಔಷಧಗಳ ಜಲವು ನಾಗರಿಕರ ಪ್ರಾಣದೊಂದಿಗೆ ಚೆಟವಾಡುತ್ತಿರುವುದು ತೀವ್ರ ಆತಂಕಕಾರಿ ಮತ್ತು ಅಕ್ಷಮ್ಯ. ತನಿಖೆಯಲ್ಲಿ ಸುಮಾರು ೩,೫೦೦ ಔಷಧ…

2 hours ago

ಕೊಡಗಿನಲ್ಲಿ ಮತ್ತೆ ಭಾರೀ ಮಳೆ: ತ್ರಿವೇಣಿ ಸಂಗಮ ಜಲಾವೃತ

ಮಡಿಕೇರಿ: ಮೋಡ ಬಿತ್ತನೆಯ ಚರ್ಚೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯ ಹಲವೆಡೆ…

2 hours ago

ಬರಕ್ಕೆ ತತ್ತರಿಸುತ್ತಿರುವ ಕೃಷ್ಣ ಗೊಲ್ಲರು

ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…

7 hours ago