ಜಿಲ್ಲೆಗಳು

ಮೈಸೂರು : 2ನೇ ಹಂತದ ಗಜಪಡೆಯ ಕುಶಾಲತೋಪು ತಾಲೀಮು ವಸ್ತು ಪ್ರದರ್ಶನ ಆವರಣಕ್ಕೆ ಸ್ಥಳಾಂತರ

ಮೈಸೂರು: ಅರಮನೆ ಹಾಗೂ ಕೋಟೆಗಳು ಪುರಾತನ ಕಟ್ಟಡಗಳಾಗಿರುವುದರಿಂದ ಕುಶಾಲತೋಪು ತಾಲೀಮಿನಿಂದ ಧಕ್ಕೆ ಆಗದಿರಲಿ ಎಂದು ಗಜಪಡೆಯ ಎರಡನೇ ಹಂತದ ಕುಶಾಲತೋಪು ತಾಲೀಮು ವಸ್ತು ಪ್ರದರ್ಶನ ಆವರಣಕ್ಕೆ ಸ್ಥಳಾಂತರಿಸಲಾಯಿತು. ವಿಶ್ವ ವಿಖ್ಯಾತ ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಆಗಮಿಸಿರುವ ಗಜಪಡೆಗೆ ಇಂದು ಎರಡನೇ ಕುಶಾಲತೋಪು ತಾಲೀಮನ್ನು ವಸ್ತು ಪ್ರದರ್ಶನ ಪಾರ್ಕಿಂಗ್ ಆವರಣದಲ್ಲಿ ನಡೆಸಲಾಯಿತು.
ಮೊದಲ ಬಾರಿಗೆ ಕುಶಾಲತೋಪು ತಾಲೀಮನ್ನು ಅರಮನೆ ಆವರಣದ ಪಕ್ಕದ ಕೋಟೆ ಮಾರಮ್ಮ ದೇವಾಲಯದ ಮುಂಭಾಗದಲ್ಲಿ ಆಯೋಜನೆ ಮಾಡಲಾಯಿತು. ಈ ಸಂದರ್ಭದಲ್ಲಿ ಮೂರು ಸುತ್ತಿನ 21 ಕುಶಾಲತೋಪುಗಳನ್ನು ಹಾರಿಸಲಾಗಿತ್ತು. ಆದರೇ, ಕುಶಾಲತೋಪಿನ ಶಬ್ಧಕ್ಕೆ ಪುರಾತನ ಅರಮನೆ ಕಟ್ಟಡಗಳಿಗೆ ಹಾನಿಯಾಗುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಅರಮನೆ ಆಡಳಿತ ಮಂಡಳಿಯ ಸೂಚನೆ ಮೇರೆಗೆ ಎರಡನೇ ತಾಲೀಮನ್ನು ವಸ್ತು ಪ್ರದರ್ಶನದ ಪಾರ್ಕಿಂಗ್ ಆವರಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ಡಿಸಿಎಫ್ ಕರಿಕಾಲನ್ ಮಾಹಿತಿ ನೀಡಿದರು.

ಬೆದರಿದ ಆನೆ, ಕುದುರೆಗಳು: ಎರಡನೇ ಹಂತದ ಕುಶಾಲತೋಪು ತಾಲೀಮಿನಲ್ಲಿ 12 ಆನೆಗಳು ಭಾಗವಹಿಸಿದ್ದವು. ಅದರಲ್ಲಿ ಪಾರ್ಥಸಾರಥಿ ಸ್ವಲ್ಪ ಬೆದರಿದಂತೆ ಕಂಡು ಬಂತು. ಜೊತೆಗೆ ಉಳಿದ 11 ಆನೆಗಳು ಬೆದರದೇ ನಿಂತಿದ್ದವು. ಕುಶಾಲತೋಪು ಸಿಡಿಸುವ ಸಂದರ್ಭದಲ್ಲಿ ಕೆಲವು ಆನೆಗಳು ಶಬ್ದ ಮಾಡಿದವು. 7 ಫಿರಂಗಿ ಗಾಡಿಗಳಲ್ಲಿ 3 ಸುತ್ತಿನಲ್ಲಿ 21 ಕುಶಾಲತೋಪುಗಳನ್ನು ಸಿಡಿಸಲಾಗಿದ್ದು, ಇದರಲ್ಲಿ ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಗಳು ಭಾಗವಹಿಸಿದ್ದರು.ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿಸಿಪಿ ಶಿವರಾಜ್ ಕುಶಾಲತೋಪು ತಾಲೀಮಿನ ನಂತರ ಮಾಧ್ಯಮಗಳ ಜೊತೆ ಮಾತನಾಡಿ, ಎರಡನೇ ತಾಲೀಮಿನಲ್ಲಿ 12 ಆನೆಗಳು ಹಾಗೂ 41 ಅಶ್ವಾರೋಹಿ ದಳದ ಕುದುರೆಗಳು ಭಾಗವಹಿಸಿದ್ದವು.

ಕುಶಾಲತೋಪು ಸಿಡಿಸಿದಾಗ ಸುಮಾರು ಸರಾಸರಿ 92.2 ಡೆಸಿಬಲ್ ಶಬ್ದ ಹೊರ ಹೊಮ್ಮಿದೆ. ಮೈಸೂರು ಅರಮನೆಯ ಆಡಳಿತ ಮಂಡಳಿಯ ಸೂಚನೆ ಮೇರೆಗೆ ಎರಡನೇ ಹಂತದ ತಾಲೀಮನ್ನು ವಸ್ತು ಪ್ರದರ್ಶನ ಆವರಣದಲ್ಲಿ ನಡೆಸಲಾಯಿತು. ಪ್ರತಿ ವರ್ಷದಂತೆ ಈ ಬಾರಿಯೂ ಜಂಬೂಸವಾರಿಯ ಮೆರವಣಿಗೆ ದಿನ 21 ಕುಶಾಲತೋಪುಗಳನ್ನು ಅರಮನೆಯ ಆವರಣದ ಪಕ್ಕದಲ್ಲಿರುವ ಕೋಟೆ ಮಾರಮ್ಮ ದೇವಾಲಯದ ಆವರಣದಲ್ಲಿ ಸಿಡಿಸಲಾಗುವುದು ಎಂದು ತಿಳಿಸಿದರು.

andolanait

Recent Posts

ಹನೂರು| ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಅಪಘಾತ: ಇಬ್ಬರು ಸಾವು

ಮಹಾದೇಶ್‌ ಎಂ ಗೌಡ  ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…

7 hours ago

ಹನೂರು: ಟ್ರ್ಯಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸಾವು

ಮಹಾದೇಶ್‌ ಎಂ ಗೌಡ  ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…

7 hours ago

ಮೈಸೂರು ಏರ್‌ಪೋರ್ಟ್‌ನಲ್ಲಿ ಸಿಎಂ, ಡಿಸಿಎಂ ಜೊತೆ ರಾಹುಲ್‌ ಗಾಂಧಿ ಮಾತುಕತೆ

ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌…

10 hours ago

ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜನ‌ ಎಂಟ್ರಿ: ವಾಹನ ಸವಾರರಿಗೆ ಢವಢವ

ಮಹಾದೇಶ್‌ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…

10 hours ago

ಎಂ.ಲಕ್ಷ್ಮಣ್‌ ವಿರುದ್ಧ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ನೀಡಿದ ಶಾಸಕ ಶ್ರೀವತ್ಸ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…

11 hours ago

ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ನೀಡಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…

11 hours ago