ಜಿಲ್ಲೆಗಳು

ಮೈಸೂರು : 2ನೇ ಹಂತದ ಗಜಪಡೆಯ ಕುಶಾಲತೋಪು ತಾಲೀಮು ವಸ್ತು ಪ್ರದರ್ಶನ ಆವರಣಕ್ಕೆ ಸ್ಥಳಾಂತರ

ಮೈಸೂರು: ಅರಮನೆ ಹಾಗೂ ಕೋಟೆಗಳು ಪುರಾತನ ಕಟ್ಟಡಗಳಾಗಿರುವುದರಿಂದ ಕುಶಾಲತೋಪು ತಾಲೀಮಿನಿಂದ ಧಕ್ಕೆ ಆಗದಿರಲಿ ಎಂದು ಗಜಪಡೆಯ ಎರಡನೇ ಹಂತದ ಕುಶಾಲತೋಪು ತಾಲೀಮು ವಸ್ತು ಪ್ರದರ್ಶನ ಆವರಣಕ್ಕೆ ಸ್ಥಳಾಂತರಿಸಲಾಯಿತು. ವಿಶ್ವ ವಿಖ್ಯಾತ ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಆಗಮಿಸಿರುವ ಗಜಪಡೆಗೆ ಇಂದು ಎರಡನೇ ಕುಶಾಲತೋಪು ತಾಲೀಮನ್ನು ವಸ್ತು ಪ್ರದರ್ಶನ ಪಾರ್ಕಿಂಗ್ ಆವರಣದಲ್ಲಿ ನಡೆಸಲಾಯಿತು.
ಮೊದಲ ಬಾರಿಗೆ ಕುಶಾಲತೋಪು ತಾಲೀಮನ್ನು ಅರಮನೆ ಆವರಣದ ಪಕ್ಕದ ಕೋಟೆ ಮಾರಮ್ಮ ದೇವಾಲಯದ ಮುಂಭಾಗದಲ್ಲಿ ಆಯೋಜನೆ ಮಾಡಲಾಯಿತು. ಈ ಸಂದರ್ಭದಲ್ಲಿ ಮೂರು ಸುತ್ತಿನ 21 ಕುಶಾಲತೋಪುಗಳನ್ನು ಹಾರಿಸಲಾಗಿತ್ತು. ಆದರೇ, ಕುಶಾಲತೋಪಿನ ಶಬ್ಧಕ್ಕೆ ಪುರಾತನ ಅರಮನೆ ಕಟ್ಟಡಗಳಿಗೆ ಹಾನಿಯಾಗುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಅರಮನೆ ಆಡಳಿತ ಮಂಡಳಿಯ ಸೂಚನೆ ಮೇರೆಗೆ ಎರಡನೇ ತಾಲೀಮನ್ನು ವಸ್ತು ಪ್ರದರ್ಶನದ ಪಾರ್ಕಿಂಗ್ ಆವರಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ಡಿಸಿಎಫ್ ಕರಿಕಾಲನ್ ಮಾಹಿತಿ ನೀಡಿದರು.

ಬೆದರಿದ ಆನೆ, ಕುದುರೆಗಳು: ಎರಡನೇ ಹಂತದ ಕುಶಾಲತೋಪು ತಾಲೀಮಿನಲ್ಲಿ 12 ಆನೆಗಳು ಭಾಗವಹಿಸಿದ್ದವು. ಅದರಲ್ಲಿ ಪಾರ್ಥಸಾರಥಿ ಸ್ವಲ್ಪ ಬೆದರಿದಂತೆ ಕಂಡು ಬಂತು. ಜೊತೆಗೆ ಉಳಿದ 11 ಆನೆಗಳು ಬೆದರದೇ ನಿಂತಿದ್ದವು. ಕುಶಾಲತೋಪು ಸಿಡಿಸುವ ಸಂದರ್ಭದಲ್ಲಿ ಕೆಲವು ಆನೆಗಳು ಶಬ್ದ ಮಾಡಿದವು. 7 ಫಿರಂಗಿ ಗಾಡಿಗಳಲ್ಲಿ 3 ಸುತ್ತಿನಲ್ಲಿ 21 ಕುಶಾಲತೋಪುಗಳನ್ನು ಸಿಡಿಸಲಾಗಿದ್ದು, ಇದರಲ್ಲಿ ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಗಳು ಭಾಗವಹಿಸಿದ್ದರು.ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿಸಿಪಿ ಶಿವರಾಜ್ ಕುಶಾಲತೋಪು ತಾಲೀಮಿನ ನಂತರ ಮಾಧ್ಯಮಗಳ ಜೊತೆ ಮಾತನಾಡಿ, ಎರಡನೇ ತಾಲೀಮಿನಲ್ಲಿ 12 ಆನೆಗಳು ಹಾಗೂ 41 ಅಶ್ವಾರೋಹಿ ದಳದ ಕುದುರೆಗಳು ಭಾಗವಹಿಸಿದ್ದವು.

ಕುಶಾಲತೋಪು ಸಿಡಿಸಿದಾಗ ಸುಮಾರು ಸರಾಸರಿ 92.2 ಡೆಸಿಬಲ್ ಶಬ್ದ ಹೊರ ಹೊಮ್ಮಿದೆ. ಮೈಸೂರು ಅರಮನೆಯ ಆಡಳಿತ ಮಂಡಳಿಯ ಸೂಚನೆ ಮೇರೆಗೆ ಎರಡನೇ ಹಂತದ ತಾಲೀಮನ್ನು ವಸ್ತು ಪ್ರದರ್ಶನ ಆವರಣದಲ್ಲಿ ನಡೆಸಲಾಯಿತು. ಪ್ರತಿ ವರ್ಷದಂತೆ ಈ ಬಾರಿಯೂ ಜಂಬೂಸವಾರಿಯ ಮೆರವಣಿಗೆ ದಿನ 21 ಕುಶಾಲತೋಪುಗಳನ್ನು ಅರಮನೆಯ ಆವರಣದ ಪಕ್ಕದಲ್ಲಿರುವ ಕೋಟೆ ಮಾರಮ್ಮ ದೇವಾಲಯದ ಆವರಣದಲ್ಲಿ ಸಿಡಿಸಲಾಗುವುದು ಎಂದು ತಿಳಿಸಿದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

4 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago