ಜಿಲ್ಲೆಗಳು

ಮೈಸೂರು : 2ನೇ ಹಂತದ ಗಜಪಡೆಯ ಕುಶಾಲತೋಪು ತಾಲೀಮು ವಸ್ತು ಪ್ರದರ್ಶನ ಆವರಣಕ್ಕೆ ಸ್ಥಳಾಂತರ

ಮೈಸೂರು: ಅರಮನೆ ಹಾಗೂ ಕೋಟೆಗಳು ಪುರಾತನ ಕಟ್ಟಡಗಳಾಗಿರುವುದರಿಂದ ಕುಶಾಲತೋಪು ತಾಲೀಮಿನಿಂದ ಧಕ್ಕೆ ಆಗದಿರಲಿ ಎಂದು ಗಜಪಡೆಯ ಎರಡನೇ ಹಂತದ ಕುಶಾಲತೋಪು ತಾಲೀಮು ವಸ್ತು ಪ್ರದರ್ಶನ ಆವರಣಕ್ಕೆ ಸ್ಥಳಾಂತರಿಸಲಾಯಿತು. ವಿಶ್ವ ವಿಖ್ಯಾತ ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಆಗಮಿಸಿರುವ ಗಜಪಡೆಗೆ ಇಂದು ಎರಡನೇ ಕುಶಾಲತೋಪು ತಾಲೀಮನ್ನು ವಸ್ತು ಪ್ರದರ್ಶನ ಪಾರ್ಕಿಂಗ್ ಆವರಣದಲ್ಲಿ ನಡೆಸಲಾಯಿತು.
ಮೊದಲ ಬಾರಿಗೆ ಕುಶಾಲತೋಪು ತಾಲೀಮನ್ನು ಅರಮನೆ ಆವರಣದ ಪಕ್ಕದ ಕೋಟೆ ಮಾರಮ್ಮ ದೇವಾಲಯದ ಮುಂಭಾಗದಲ್ಲಿ ಆಯೋಜನೆ ಮಾಡಲಾಯಿತು. ಈ ಸಂದರ್ಭದಲ್ಲಿ ಮೂರು ಸುತ್ತಿನ 21 ಕುಶಾಲತೋಪುಗಳನ್ನು ಹಾರಿಸಲಾಗಿತ್ತು. ಆದರೇ, ಕುಶಾಲತೋಪಿನ ಶಬ್ಧಕ್ಕೆ ಪುರಾತನ ಅರಮನೆ ಕಟ್ಟಡಗಳಿಗೆ ಹಾನಿಯಾಗುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಅರಮನೆ ಆಡಳಿತ ಮಂಡಳಿಯ ಸೂಚನೆ ಮೇರೆಗೆ ಎರಡನೇ ತಾಲೀಮನ್ನು ವಸ್ತು ಪ್ರದರ್ಶನದ ಪಾರ್ಕಿಂಗ್ ಆವರಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ಡಿಸಿಎಫ್ ಕರಿಕಾಲನ್ ಮಾಹಿತಿ ನೀಡಿದರು.

ಬೆದರಿದ ಆನೆ, ಕುದುರೆಗಳು: ಎರಡನೇ ಹಂತದ ಕುಶಾಲತೋಪು ತಾಲೀಮಿನಲ್ಲಿ 12 ಆನೆಗಳು ಭಾಗವಹಿಸಿದ್ದವು. ಅದರಲ್ಲಿ ಪಾರ್ಥಸಾರಥಿ ಸ್ವಲ್ಪ ಬೆದರಿದಂತೆ ಕಂಡು ಬಂತು. ಜೊತೆಗೆ ಉಳಿದ 11 ಆನೆಗಳು ಬೆದರದೇ ನಿಂತಿದ್ದವು. ಕುಶಾಲತೋಪು ಸಿಡಿಸುವ ಸಂದರ್ಭದಲ್ಲಿ ಕೆಲವು ಆನೆಗಳು ಶಬ್ದ ಮಾಡಿದವು. 7 ಫಿರಂಗಿ ಗಾಡಿಗಳಲ್ಲಿ 3 ಸುತ್ತಿನಲ್ಲಿ 21 ಕುಶಾಲತೋಪುಗಳನ್ನು ಸಿಡಿಸಲಾಗಿದ್ದು, ಇದರಲ್ಲಿ ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಗಳು ಭಾಗವಹಿಸಿದ್ದರು.ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿಸಿಪಿ ಶಿವರಾಜ್ ಕುಶಾಲತೋಪು ತಾಲೀಮಿನ ನಂತರ ಮಾಧ್ಯಮಗಳ ಜೊತೆ ಮಾತನಾಡಿ, ಎರಡನೇ ತಾಲೀಮಿನಲ್ಲಿ 12 ಆನೆಗಳು ಹಾಗೂ 41 ಅಶ್ವಾರೋಹಿ ದಳದ ಕುದುರೆಗಳು ಭಾಗವಹಿಸಿದ್ದವು.

ಕುಶಾಲತೋಪು ಸಿಡಿಸಿದಾಗ ಸುಮಾರು ಸರಾಸರಿ 92.2 ಡೆಸಿಬಲ್ ಶಬ್ದ ಹೊರ ಹೊಮ್ಮಿದೆ. ಮೈಸೂರು ಅರಮನೆಯ ಆಡಳಿತ ಮಂಡಳಿಯ ಸೂಚನೆ ಮೇರೆಗೆ ಎರಡನೇ ಹಂತದ ತಾಲೀಮನ್ನು ವಸ್ತು ಪ್ರದರ್ಶನ ಆವರಣದಲ್ಲಿ ನಡೆಸಲಾಯಿತು. ಪ್ರತಿ ವರ್ಷದಂತೆ ಈ ಬಾರಿಯೂ ಜಂಬೂಸವಾರಿಯ ಮೆರವಣಿಗೆ ದಿನ 21 ಕುಶಾಲತೋಪುಗಳನ್ನು ಅರಮನೆಯ ಆವರಣದ ಪಕ್ಕದಲ್ಲಿರುವ ಕೋಟೆ ಮಾರಮ್ಮ ದೇವಾಲಯದ ಆವರಣದಲ್ಲಿ ಸಿಡಿಸಲಾಗುವುದು ಎಂದು ತಿಳಿಸಿದರು.

andolanait

Recent Posts

ರೈತರ ಹಿತರಕ್ಷಣೆಗೆ ಕೇಂದ್ರದ ಕದ ತಟ್ಟಿದ ಚಲುವರಾಯಸ್ವಾಮಿ : ತುರ್ತು ಪರಿಹಾರಕ್ಕೆ ಮನವಿ

ಬೆಂಗಳೂರು :  ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ (ಜನವರಿ 7)  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ…

2 hours ago

ಮೈಸೂರು | ಪಿಸಿ ಮೇಲೆ ಹಲ್ಲೆ, ಮೊಬೈಲ್‌ ದೋಚಿದ ಖದೀಮರು ; ನಾಲ್ವರ ಬಂಧನ

ಮೈಸೂರು : ಮಾದಕ ವ್ಯಸನಿಗಳಾದ ನಾಲ್ವರು ಯುವಕರ ತಂಡ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ನಗದು ಹಾಗೂ ಮೊಬೈಲ್…

2 hours ago

ಫಿಟ್‌ ಮೈಸೂರು ವಾಕ್‌ಥಾನ್‌ಗೆ ಮೈಸೂರು ಸಜ್ಜು

 ಸಾವಿರಾರು ಹೆಜ್ಜೆಗಳೊಂದಿಗೆ ಆರೋಗ್ಯದ ಸಂದೇಶ ಜ.11ರಂದು ನಡೆಯಲಿರುವ ಜಾಗೃತಿ ಅಭಿಯಾನ ಮೈಸೂರು : ಹಲವು ಮೊದಲುಗಳಿಗೆ ನಾಂದಿ ಹಾಡಿರುವ ಸಾಂಸ್ಕೃತಿಕ…

2 hours ago

ಹಿಮದಿಂದ ಆವೃತವಾದ ಕೇದರನಾಥ

ರಾಂಚಿ : ಉತ್ತರ ಭಾರತವು ತೀವ್ರ ಶೀತಗಾಳಿಗೆ ತತ್ತರಿಸಿದ್ದು, ಭಾರೀ ಹಿಮಪಾತದಿಂದ ಪಟ್ಟಣಗಳು, ದೇವಾಲಯಗಳು ಮತ್ತು ಸುತ್ತಮುತ್ತಲಿನ ಬೆಟ್ಟಗಳು ದಟ್ಟ…

2 hours ago

ಹುಲಿ ದಾಳಿಗೆ ಹಸು ಬಲಿ : ವ್ಯಾಘ್ರ ಸೆರೆಗೆ ಗ್ರಾಮಸ್ಥರ ಒತ್ತಾಯ

ಸಿದ್ದಾಪುರ : ವಿರಾಜಪೇಟೆ ತಾಲೂಕು ಮಠ ಗ್ರಾಮದಲ್ಲಿ ಬುಧವಾರ ಸಂಜೆ ಹುಲಿಯೊಂದು ಹಾಲು ಕರೆಯುವ ಹಸುವಿನ ಮೇಲೆ ದಾಳಿ ನಡೆಸಿ…

2 hours ago

ಹಂತ ಹಂತವಾಗಿ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ,ಟ್ರಾಮಾ ಸೆಂಟರ್ ಸ್ಥಾಪನೆ : ಸಿಎಂ ಭರವಸೆ

ಹಾವೇರಿ  : ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ…

2 hours ago